Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ​ಐಪಿಎಲ್‌ನ ಪ್ರಪ್ರಥಮ ’ಇಂಪ್ಯಾಕ್ಟ್...

​ಐಪಿಎಲ್‌ನ ಪ್ರಪ್ರಥಮ ’ಇಂಪ್ಯಾಕ್ಟ್ ಪ್ಲೇಯರ್’ ಯಾರು ಗೊತ್ತೇ?

1 April 2023 1:19 PM IST
share
​ಐಪಿಎಲ್‌ನ ಪ್ರಪ್ರಥಮ ’ಇಂಪ್ಯಾಕ್ಟ್ ಪ್ಲೇಯರ್’ ಯಾರು ಗೊತ್ತೇ?

ಅಹ್ಮದಾಬಾದ್: ಇಂಡಿಯನ್ ಪ್ರಿಮಿಯರ್ ಲೀಗ್‌ನ ಮೊಟ್ಟಮೊದಲ ’ಇಂಪ್ಯಾಕ್ಟ್ ಪ್ಲೇಯರ್’ ಎಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ತುಷಾರ್ ದೇಶಪಾಂಡೆ ಪಾತ್ರರಾಗಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ಶುಕ್ರವಾರ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಮೊದಲ ಐಪಿಎಲ್ ಪಂದ್ಯದಲ್ಲಿ ಅಂಬಟಿ ರಾಯುಡು ಬದಲು ಅವಕಾಶ ಪಡೆದ ದೇಶಪಾಂಡೆ ಇತಿಹಾಸ ಸೃಷ್ಟಿಸಿದರು.

ಪಂದ್ಯಕ್ಕೆ ಮುನ್ನ ತುಷಾರ್ ದೇಶಪಾಂಡೆ, ಸುಭ್ರಾಂಶು ಸೇಣಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ ಹಾಗೂ ನಿಶಾಂತ್ ಸಂಧು ಅವರನ್ನು ಬದಲಿ ಆಟಗಾರರಾಗಿ ಚೆನ್ನೈ ಘೋಷಿಸಿತ್ತು. ಗುಜರಾತ್ ಟೈಟನ್ಸ್, ಬಿ.ಸಾಯಿ ಸುಂದರನ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್ ಹಾಗೂ ಕೆ.ಎಸ್.ಭರತ್ ಅವರ ಹೆಸರನ್ನು ಬದಲಿ ಆಟಗಾರರಾಗಿ ಪ್ರಕಟಿಸಿತ್ತು.

ಈ ಬಾರಿಯ ಐಪಿಎಲ್‌ನಲ್ಲಿ ಮೊಟ್ಟಮೊದಲ ಬಾರಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ, ಇಂಪ್ಯಾಕ್ಟ್ ಪ್ಲೇಯರ್ ಪರಿಕಲ್ಪನೆ ಜಾತಿಗೆ ತಂದಿದೆ. ಪರೀಕ್ಷಾರ್ಥವಾಗಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಬಿಸಿಸಿಐ ಈ ಕ್ರಮ ಜಾರಿಗೆ ತಂದಿತ್ತು.

ಇದೇ ಮೊದಲ ಬಾರಿಗೆ ಪಂದ್ಯದ ಟಾಸ್ ಬಳಿಕ ಆಡುವ 11 ಆಟಗಾರರ ಹೆಸರನ್ನು ತಂಡದ ನಾಯಕ ಪಂದ್ಯದ ರೆಫ್ರಿಗೆ ನೀಡಬಹುದಾಗಿದೆ. ’ಇಂಪ್ಯಾಕ್ಟ್ ಪ್ಲೇಯರ್’ ನಿಯಮದಂತೆ ತಂಡದ ಹನ್ನೊಂದು ಸದಸ್ಯರ ಪೈಕಿ ಯಾರೊಬ್ಬರ ಬದಲಿಗಾದರೂ ಬದಲಿ ಆಟಗಾರನನ್ನು ಪಂದ್ಯದ ಯಾವುದೇ ಹಂತದಲ್ಲಿ ಮೈದಾನಕ್ಕೆ ಇಳಿಸಬಹುದು. ಬದಲಿ ಆಟಗಾರ ಬ್ಯಾಟಿಂಗ್, ಬೌಲಿಂಗ್ ಅಥವಾ ಫೀಲ್ಡಿಂಗ್ ಮಾಡಲು ಅವಕಾಶ ಇದೆ. ಆದರೆ ತಂಡದ ನಾಯಕನಾಗಿ ಮಾತ್ರ ಕಾರ್ಯ ನಿರ್ವಹಿಸುವಂತಿಲ್ಲ.

ಜತೆಗೆ ಈ ಬಾರಿಯಿಂದ ವೈಡ್ ಹಾಗೂ ನೋ ಬಾಲ್‌ಗಳಿಗೆ ಕೂಡಾ ಡಿಆರ್‌ಎಸ್ ಅವಕಾಶ ಬಳಸಿಕೊಳ್ಳಬಹುದು.

ಐಪಿಎಲ್ ಪಂದ್ಯದ 90 ನಿಮಿಷ ಅವಧಿಯಲ್ಲಿ 20 ಓವರ್ ಪೂರ್ಣಗೊಳಿಸದಿದ್ದರೆ ತಂಡ ಪೆನಾಲ್ಟಿ ತೆರಬೇಕಾಗುತ್ತದೆ. ಈ ಸಮಯ ಮಿತಿ ಮೀರಿ ಎಸೆಯುವ ಪ್ರತಿ ಎಸೆತಕ್ಕೆ 30 ಯಾರ್ಡ್ ವೃತ್ತದ ಒಳಗೆ ಹೆಚ್ಚುವರಿ ಆಟಗಾರನನ್ನು ನಿಲ್ಲಿಸಬೇಕಾಗುತ್ತದೆ.

share
Next Story
X