Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸರ್ವಿಸ್ ಬಸ್ ನಿಲ್ದಾಣಕ್ಕೆ...

ಮಂಗಳೂರು: ಸರ್ವಿಸ್ ಬಸ್ ನಿಲ್ದಾಣಕ್ಕೆ ಸಿಟಿ ಬಸ್‌ಗಳ ಸ್ಥಳಾಂತರ

ಮೊದಲ ದಿನವೇ ಸರಣಿ ಅಪಘಾತ

1 April 2023 9:28 PM IST
share
ಮಂಗಳೂರು: ಸರ್ವಿಸ್ ಬಸ್ ನಿಲ್ದಾಣಕ್ಕೆ ಸಿಟಿ ಬಸ್‌ಗಳ ಸ್ಥಳಾಂತರ
ಮೊದಲ ದಿನವೇ ಸರಣಿ ಅಪಘಾತ

ಮಂಗಳೂರು: ನಗರದ ಹ್ಯಾಮಿಲ್ಟನ್ ಸರ್ಕಲ್‌ನ ಸ್ಟೇಟ್‌ಬ್ಯಾಂಕ್-ಸಿಟಿ ಬಸ್ ನಿಲ್ದಾಣದಲ್ಲಿ ಶನಿವಾರದಿಂದ ಬಸ್ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾಗಿ ಎಲ್ಲಾ ಸಿಟಿ ಬಸ್‌ಗಳು ಸರ್ವಿಸ್ ಬಸ್ ನಿಲ್ದಾಣದಿಂದಲೇ ಸಂಚಾರ ಆರಂಭಿಸಿವೆ.

ಸ್ಟೇಟ್‌ಬ್ಯಾಂಕ್ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗುತ್ತಲೇ ದ್ವಿಚಕ್ರ ವಾಹನ ಸವಾರರು ಅಮಿತ ವೇಗದಲ್ಲಿ ಸವಾರಿ ಮಾಡಿದ ಪರಿಣಾಮ ಮೊದಲ ದಿನವೇ 2 ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಸವಾರರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ.

ನಗರದ ಹ್ಯಾಮಿಲ್ಟನ್ ಸರ್ಕಲ್‌ನಿಂದ ರಾವ್ ಆ್ಯಂಡ್ ರಾವ್ ಸರ್ಕಲ್‌ವರೆಗೆ ಯಾವುದೇ ಬಸ್‌ಗಳ ನಿಲುಗಡೆ ಅಥವಾ ಸಂಚಾರಕ್ಕೆ ಅವಕಾಶ ಇಲ್ಲ. ಅಲ್ಲದೆ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರಿನ ರಸ್ತೆಯಿಂದ ಸರ್ವಿಸ್ ಬಸ್ ನಿಲ್ದಾಣ ಪಕ್ಕದ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೂ ಅವಕಾಶ ಇರುವುದಿಲ್ಲ ಎಂದು ಸಂಚಾರ ಠಾಣೆಯ ಹಿರಿಯ ಅಧಿಕಾರಿಗಳು ಹೊಸ ನಿಯಮಾವಳಿ ರೂಪಿಸಿ ಎ.1ರಿಂದ ಜಾರಿಗೊಳಿಸಲು ಮುಂದಾಗಿದ್ದರು.

ಸಂಚಾರ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಪೊಲೀಸರು ಹೊರ ನಿಯಮಾವಳಿ ರೂಪಿಸಿದರೂ ಸಾಕಷ್ಟು ಮುನ್ಸೂಚನೆ ನೀಡದ ಕಾರಣ ಮೊದಲ ದಿನವೇ ಸಮಸ್ಯೆ, ಗೊಂದಲ ಸೃಷ್ಟಿಯಾಗಿದೆ. ಪೊಲೀಸರು ಏಕಾಏಕಿ ಈ ಹೊಸ ನಿಯಮಾವಳಿ ರೂಪಿಸಿದ ಕಾರಣ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿವೆ. ಹಿರಿಯ ನಾಗರಿಕರಿಗೆ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣದವರೆಗೂ ನಡೆದಾಡಲು ಕಷ್ಟವಾಗುತ್ತಿದೆ. ಸ್ಟೇಟ್‌ಬ್ಯಾಂಕ್ ಪರಿಸರದ ರಸ್ತೆಗಳು ಕೂಡ ಖಾಲಿಯಾಗಿದೆ. ಬೈಕ್ ಸವಾರರು ಅಮಿತ ವೇಗದಿಂದ ಈ ರಸ್ತೆಯಲ್ಲಿ ಚಲಾಯಿಸಿದ ಪರಿಣಾಮ ಮೊದಲ ದಿನವೇ 2 ಅಪಘಾತಗಳು ಸಂಭವಿಸಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯವಾಗಿದ್ದು, ಅವರಿಗೆ ಸರಿಯಾಗಿ ಶಾಲೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಪ್ರಯಾಣಿಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಸರ್ವಿಸ್ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಇತ್ತೀಚೆಗೆ ನಡೆದಿದ್ದು, ಈಗ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಪೊಲೀಸರು ಸರ್ವಿಸ್  ಮತ್ತು ಸಿಟಿ ಬಸ್‌ಗಳಿಗೆ ಒಂದೇ ನಿಲ್ದಾಣದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದರ ಸಾಧಕ-ಬಾಧಕಗಳ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಬಹುದಾಗಿದೆ. ನಾವು ಅಲ್ಪ ಬಂಡವಾಳವನ್ನು ಹಾಕಿ ಹಣ್ಣು ವ್ಯಾಪಾರವನ್ನು ನಡೆಸುತ್ತಿದ್ದೇವೆ. ಸಿಟಿ ಬಸ್ ನಿಲ್ದಾಣದ ಈ ಬದಲಾವಣೆಯಿಂದ ನಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ಹಣ್ಣು ಹಂಪಲು ವ್ಯಾಪಾರಿ ಮುಹಮ್ಮದ್ ಸಲೀಂ ಅಭಿಪ್ರಾಯಪಟ್ಟಿದ್ದಾರೆ.

ಸಿಟಿ ಬಸ್‌ಗಳು ಸರ್ವಿಸ್ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಿದ ಕಾರಣ ರಿಕ್ಷಾ ಬಾಡಿಗೆಗೆ ಜನ ಇಲ್ಲದಂತಾಗಿದೆ. ಇಡೀ ರಸ್ತೆ ಖಾಲಿಯಾಗಿದೆ. ಸರಿಯಾದ ಬಾಡಿಗೆ ಇಲ್ಲ. ಬೆಳಗ್ಗೆಯಿಂದ ನಿಂತ ಸ್ಥಳದಲ್ಲೇ ಇದ್ದೇವೆ ಎಂದು ರಿಕ್ಷಾ ಚಾಲಕರೊಬ್ಬರು ತಿಳಿಸಿದ್ದಾರೆ.

ನಮಗೆ ಬಸ್ ನಿಲ್ಲಿಸಲು ಸರಿಯಾದ ವ್ಯವಸ್ಥೆ ಮಾಡಿಲ್ಲ. ಬಸ್‌ಗಳು ಬಂದು ಅಡ್ಡಾದಿಡ್ಡಿ ನಿಲ್ಲುತ್ತಿವೆ. ಇದರಿಂದ ಬಸ್ ಸರಿಯಾದ ಸಮಯದಲ್ಲಿ ಹೊರಡಲು ಸಾಧ್ಯವಾಗುತ್ತಿಲ್ಲ. ಬಸ್‌ನಲ್ಲಿ ಪ್ರಯಾಣಿಸುವವರ ಜನಸಂಖ್ಯೆಯೂ ಕಡಿಮೆಯಿದೆ. ಸರ್ವಿಸ್ ಬಸ್ ನಿಲ್ದಾಣಕ್ಕೆ ಶೀಟ್ ಹಾಕದಿರುವುದರಿಂದ ಜನರು ಬಿಸಿಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸಿಟಿ ಬಸ್ಸೊಂದರ ಚಾಲಕ ಸುರೇಶ್ ಎಂಬವರು ತಿಳಿಸಿದ್ದಾರೆ.

ಮೊದಲು ಇದ್ದ ಜಾಗದಲ್ಲಿಯೇ ಸಿಟಿ ಬಸ್ ನಿಲ್ದಾಣ ಇದ್ದಿದರೆ ಒಳ್ಳೆಯದಿತ್ತು. ದಿನಸಿ ಸಾಮಾಗ್ರಿಗಳನ್ನು ಹೊತ್ತುಕೊಂಡು ಸರ್ವಿಸ್ ಬಸ್ ನಿಲ್ದಾಣಕ್ಕೆ ಬರಲು ಕಷ್ಟವಾಗುತ್ತಿದೆ ಎಂದು ಉಮಾವತಿ ಎಂಬ ವೃದ್ಧೆ ಅಳಲು ತೋಡಿಕೊಂಡರು.

ಒಟ್ಟಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸರ್ವಿಸ್ ಬಸ್ ನಿಲ್ದಾಣಕ್ಕೆ ಸಿಟಿ ಬಸ್‌ಗಳನ್ನು ಸ್ಥಳಾಂತರಿಸಿರುವುದಕ್ಕೆ ಪ್ರಯಾಣಿಕರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

share
Next Story
X