Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲಿನಿಂದ ಬಿಡುಗಡೆಗೊಂಡ ಬೆನ್ನಲ್ಲೇ...

ಜೈಲಿನಿಂದ ಬಿಡುಗಡೆಗೊಂಡ ಬೆನ್ನಲ್ಲೇ ಕೇಂದ್ರ, ಪಂಜಾಬ್ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕನ ವಾಗ್ದಾಳಿ

ಪಂಜಾಬ್ ನಲ್ಲಿ ಪ್ರಜಾಪ್ರಭುತ್ವವೇ ಇಲ್ಲವಾಗಿದೆ: ಸಿಧು

1 April 2023 10:18 PM IST
share
ಜೈಲಿನಿಂದ ಬಿಡುಗಡೆಗೊಂಡ ಬೆನ್ನಲ್ಲೇ ಕೇಂದ್ರ, ಪಂಜಾಬ್ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕನ ವಾಗ್ದಾಳಿ
ಪಂಜಾಬ್ ನಲ್ಲಿ ಪ್ರಜಾಪ್ರಭುತ್ವವೇ ಇಲ್ಲವಾಗಿದೆ: ಸಿಧು

ಹೊಸದಿಲ್ಲಿ,ಎ.1: 1988ರ ರಸ್ತೆಯಲ್ಲಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣದಲ್ಲಿ ದೋಷಿಯಾಗಿ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಶನಿವಾರ ಪಾಟಿಯಾಲದ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಜೈಲಿನಿಂದ ಹೊರಬರುತ್ತಿದ್ದಂತೆಯೇ ಕೇಂದ್ರ ಹಾಗೂ ಪಂಜಾಬ್ ಸರಕಾರಗಳ ವಿರುದ್ಧ ಗುಡುಗಿರುವ ಅವರು‘‘ ಪಂಜಾಬ್ ನಲ್ಲಿ ಪ್ರಜಾಪ್ರಭುತ್ವವೇ ಇಲ್ಲವಾಗಿದೆ ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು ಸಂಚೊಂದನ್ನು ರೂಪಿಸಲಾಗುತ್ತಿದೆ’’ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವವು ಸಂಕೋಲೆಯಲ್ಲಿ ಬಂಧಿತವಾಗಿದೆ ಹಾಗೂ ಸಾಂವಿಧಾನಿಕ ಸಂಸ್ಥೆಗಳು ಗುಲಾಮರಾಗಿ ಬದಲಾಗಿವೆ ಎಂದವರು ಹೇಳಿದ್ದಾರೆ.

ಮುಖ್ಯಮಂತ್ರಿ ಭಗವಂತಸಿಂಗ್ ಮಾನ್ ಅವರು ಪಂಜಾಬ್ ಜನತೆಗೆ ಹುಸಿ ಭರವಸೆಗಳನ್ನು ನೀಡುತ್ತಿದ್ದಾರೆಂದು ಟೀಕಿಸಿದ ಸಿಧು, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ತನ್ನ ದೃಢಬೆಂಬಲವನ್ನು ಘೋಷಿದರು. ‘‘ರಾಹುಲ್ ಗಾಂಧಿ ಸಂವಿಧಾನದ ಸಂರಕ್ಷಕ ಹಾಗೂ ಸಿಧು ಅವರ ಜೊತೆಗಿರುತ್ತಾನೆ’’ ಎಂದರು.

 ವಾರಿಸ್ ದೆ ಪಂಜಾಬ್ ಸಂಘಟನೆಯ ವರಿಷ್ಠ ಅಮೃತಪಾಲ್ ಸಿಂಗ್ನ ಬಂಧನಕ್ಕಾಗಿ ನಡೆಯುತ್ತಿರುವ ಕಾರ್ಯಾಚರಣೆ ಬಳಿಕ ರಾಜ್ಯದಲ್ಲಿನ ಕಾನೂನು, ಸುವ್ಯವಸ್ಥೆ ಪರಿಸ್ಥಿತಿಯ ಕುರಿತಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾನ ನಿವಾಸಕ್ಕೆ ಭೇಟಿ ನೀಡುವ ವೇಳೆ ಈ ಬಗ್ಗೆ ಮಾತನಾಡುವುದಾಗಿ ತಿಳಿಸಿದರು.

1988ರಲ್ಲಿ ವಾಹನ ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬವರ ಮೇಲೆ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಸಿಧುಗೆ ಸುಪ್ರೀಂಕೋರ್ಟ್ ಕಳೆದ ವರ್ಷದ 20ರಂದು 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಸನ್ನಡತೆಯ ಹಿನ್ನೆಲೆಯಲ್ಲಿ ಸಿಧು ಅವರನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಬಿಡುಗಡೆಗೊಳಿಸಲಾಗಿದೆಯೆಂದು ಅವರ ವಕೀಲರು ತಿಳಿಸಿದ್ದಾರೆ.

ಸಿಧು ಅವರನ್ನು ಸ್ವಾಗತಿಸಲು ಅವರ ನೂರಾರು ಬೆಂಬಲಿಗರು ಪಾಟಿಯಾಲ ಜಿಲ್ಲಾ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಅಮೃತಸರ ಕಾಂಗ್ರೆಸ್ ಸಂಸದ ಗುರುಜೀತ್ ಔಜ್ಲಾ ಹಾಗೂ ಮಾಜಿ ಶಾಸಕರಾದ ಅಶ್ವನಿ ಸೇಖ್ರಿ, ಸುಖವಿಂದರ್ ಡ್ಯಾನಿ ಹಾಗೂ ಸುನೀಲ್ ದತ್ತಿ ಕೂಡಾ ಉಪಸ್ಥಿತರಿದ್ದರು.

share
Next Story
X