Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಲಕ್ನೊ ಸೂಪರ್ ಜೈಂಟ್ಸ್‌ಗೆ...

ಐಪಿಎಲ್: ಲಕ್ನೊ ಸೂಪರ್ ಜೈಂಟ್ಸ್‌ಗೆ ಭರ್ಜರಿ ಜಯ

ಮಾರ್ಕ್ ವುಡ್‌ಗೆ ಐದು ವಿಕೆಟ್ ಗೊಂಚಲು, ಮೇಯರ್ಸ್ ಅರ್ಧಶತಕ

1 April 2023 11:30 PM IST
share
ಐಪಿಎಲ್: ಲಕ್ನೊ ಸೂಪರ್ ಜೈಂಟ್ಸ್‌ಗೆ ಭರ್ಜರಿ ಜಯ
ಮಾರ್ಕ್ ವುಡ್‌ಗೆ ಐದು ವಿಕೆಟ್ ಗೊಂಚಲು, ಮೇಯರ್ಸ್ ಅರ್ಧಶತಕ

   ಲಕ್ನೊ, ಎ.1: ವೇಗಿ ಮಾರ್ಕ್ ವುಡ್(5-14) ನೇತೃತ್ವದ ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಸಹಾಯದಿಂದ ಲಕ್ನೊ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್‌ನ 3ನೇ ಪಂದ್ಯದಲ್ಲಿ 50 ರನ್‌ಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿ ಗೆಲುವಿನ ಆರಂಭ ಪಡೆದಿದೆ. 

ಗೆಲ್ಲಲು 194 ರನ್ ಕಠಿಣ ಗುರಿ ಪಡೆದಿದ್ದ ಡೆಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 143 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಡೆಲ್ಲಿ ಪರ ನಾಯಕ ಡೇವಿಡ್ ವಾರ್ನರ್(56 ರನ್, 48 ಎಸೆತ), ರಿಲೀ ರೊಸ್ಸೌ(30 ರನ್,20 ಎಸೆತ)ಹಾಗೂ ಅಕ್ಷರ್ ಪಟೇಲ್(16 ರನ್)ಎರಡಂಕೆಯ ಸ್ಕೋರ್ ಗಳಿಸಿದರು.

ಬೌಲರ್‌ಗಳಾದ ಮಾರ್ಕ್ ವುಡ್(5-14), ರವಿ ಬಿಷ್ಣೋಯಿ(2-31) ಹಾಗೂ ಅವೇಶ್ ಖಾನ್(2-28)ಡೆಲ್ಲಿಗೆ ಮೂಗುದಾರ ತೊಡಿಸಿದರು. ಮಾರ್ಕ್‌ವುಡ್ ಪ್ರಸಕ್ತ ಟೂರ್ನಿಯಲ್ಲಿ 5 ವಿಕೆಟ್ ಗೊಂಚಲು ಪಡೆದ ಮೊದಲ ಬೌಲರ್ ಎನಿಸಿಕೊಂಡರು.

ಲಕ್ನೊ ಸೂಪರ್ ಜೈಂಟ್ಸ್ 193/6: ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೊ ತಂಡ ಆರಂಭಿಕ ಬ್ಯಾಟರ್ ಕೈಲ್ ಮೇಯರ್ಸ್ ಅಬ್ಬರದ ಬ್ಯಾಟಿಂಗ್(73 ರನ್, 38 ಎಸೆತ, 2 ಬೌಂಡರಿ, 7 ಸಿಕ್ಸರ್)ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 193 ರನ್ ಗಳಿಸಿತು.

ಲಕ್ನೊ ತಂಡ ನಾಯಕ ಕೆ.ಎಲ್.ರಾಹುಲ್(8 ರನ್)ವಿಕೆಟನ್ನು ಬೇಗನೆ ಕಳೆದುಕೊಂಡಿತು. ಆಗ ಜೊತೆಗೂಡಿದ ಮೇಯರ್ಸ್ ಹಾಗೂ ದೀಪಕ್ ಹೂಡಾ(17 ರನ್,18 ಎಸೆತ) 2ನೇ ವಿಕೆಟ್‌ಗೆ 79 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

ಕೃನಾಲ್ ಪಾಂಡ್ಯ (ಔಟಾಗದೆ 15, 13 ಎಸೆತ)ಹಾಗೂ ನಿಕೊಲಸ್ ಪೂರನ್(36 ರನ್, 21 ಎಸೆತ) 5ನೇ ವಿಕೆಟ್‌ಗೆ 48 ರನ್ ಜೊತೆಯಾಟ ನಡೆಸಿ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು. ಪೂರನ್ ಔಟಾದ ನಂತರ ಪಾಂಡ್ಯ ಅವರು ಆಯುಷ್ ಬದೋನಿ(18 ರನ್, 7 ಎಸೆತ) ಜೊತೆ 6ನೇ ವಿಕೆಟಿಗೆ 22 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 193ಕ್ಕೆ ತಲುಪಿಸಿದರು.

ಡೆಲ್ಲಿ ಬೌಲಿಂಗ್ ವಿಭಾಗದಲ್ಲಿ ಖಲೀಲ್ ಅಹ್ಮದ್(2-30) ಹಾಗೂ ಚೇತನ್ ಸಕಾರಿಯ(2-53) ತಲಾ ಎರಡು ವಿಕೆಟ್ ಪಡೆದರು.
 

share
Next Story
X