Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಮುಗಲಭೆ ನಿಯಂತ್ರಿಸಲು ನಿತೀಶ್ ಸರಕಾರ...

ಕೋಮುಗಲಭೆ ನಿಯಂತ್ರಿಸಲು ನಿತೀಶ್ ಸರಕಾರ ವಿಫಲ: ಅಮಿತ್ ಶಾ

2 April 2023 10:23 PM IST
share
ಕೋಮುಗಲಭೆ ನಿಯಂತ್ರಿಸಲು ನಿತೀಶ್ ಸರಕಾರ ವಿಫಲ: ಅಮಿತ್ ಶಾ

ಹಿಸುವಾ (ಬಿಹಾರ), ಎ.2:  ಬಿಹಾರದ ಸಸಾರಾಮ್ ಹಾಗೂ ಬಿಹಾರಶರೀಫ್ ಪಟ್ಟಣಗಳಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು  ಮಟ್ಟಹಾಕಲು  ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ ಸರಕಾರವು  ವಿಫಲವಾಗಿದೆಯೆಂದು ಕೇಂದ್ರ ಗೃಹ ಸಚಿವ ಅಮಿತ್ಶಾ ರವಿವಾರ ವಾಗ್ದಾಳಿ ನಡೆಸಿದ್ದಾರೆ. ಒಂದು ವೇಳೆ 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ   ಬಿಜೆಪಿ ಅಧಿಕಾರಕ್ಕೇರಿದರೆ ಗಲಭೆಕೋರರನ್ನು ಬುಡಮೇಲಾಗಿ ನೇತುಹಾಕಲಿದೆ ಎಂದವರು ಹೇಳಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದ ಕೋಮುಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘‘ ಶೀಘ್ರದಲ್ಲೇ ಸಹಜತೆಯು ಮರಳಲೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಹಿಂಸಾಚಾರದ ಬಗ್ಗೆ  ಇಂದು ಬೆಳಗ್ಗೆ ರಾಜ್ಯಪಾಲರ ಜೊತೆ ಮಾತನಾಡಿದಾಗ, ಜೆಡಿಯು ಅಧ್ಯಕ್ಷ ರಂಜನ್ ಸಿಂಗ್ ಯಾನೆ ಲಲನ್ ಸಿಂಗ್ ಅವರು ರೋಷಗೊಂಡಿದ್ದಾರೆ. ಬಿಹಾರದ ಬಗ್ಗೆ ನಾನು ಯಾಕೆ ಚಿಂತಿಸಬೇಕು ಎಂದವರು ಪ್ರಶ್ನಿಸಿದರು ನಾನು ಕೇಂದ್ರ ಸಚಿವ. ಬಿಹಾರದ ಕಾನೂನು, ಸುವ್ಯವಸ್ಥೆಯ ಪರಿಸ್ಥಿತಿ ನನಗೂ ಕಾಳಜಿಯ ವಿಷಯವೆಂದು ಅಮಿತ್ ಶಾ ಹೇಳಿದರು.

ಸತತ ಮೂರನೆ ಬಾರಿಗೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕೆಂದು ದೇಶದ ಜನತೆ ನಿರ್ಧರಿಸಿಬಿಟ್ಟಿದ್ದಾರೆ. ಹಾಗಾದಾಗ, ಪ್ರಧಾನಿ ಪಟ್ಟವನ್ನಲಂಕರಿಸುವ ನಿತೀಶ್ ಕುಮಾರ್ ಅವರ ಕನಸು ಭಗ್ನವಾಗಲಿದೆ ಮತ್ತು ಅವರು ಮುಖ್ಯಮಂತ್ರಿ ಸ್ಥಾನವನ್ನು  ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ಗೆ ಹಸ್ತಾಂತರಿಸುವ ತನ್ನ ಭರವಸೆಯಿಂದ ಹಿಂದೆ ಸರಿಯಲಿದ್ದಾರೆ ಎಂದು ಅಮಿತ್ಶಾ ಹೇಳಿದರು.

ಲಾಲುಪ್ರಸಾದ್ ಹಾಗೂ ನಿತೀಶ್ ಕುಮಾರ್ ತುಷ್ಟೀಕರಣದ ರಾಜಕೀಯವನ್ನು ನಡೆಸುತ್ತಿದ್ದು, ಇದು ಭಯೋತ್ಪಾದನೆ ಬೆಳೆಯುವುದಕ್ಕೆ ನೆರವಾಯಿತು ಎಂದರು.
ಜಾತಿವಾದದ ವಿಷವನ್ನು ಹರಡುವ ನಿತೀಶ್ ಕುಮಾರ್ ಹಾಗೂ ‘ಜಂಗಲ್ರಾಜ್’ನ ಪ್ರವರ್ತಕ  ಲಾಲುಪ್ರಸಾದ್ ಜೊತೆ ಬಿಜೆಪಿ ಎಂದಿಗೂ ಕೈಜೋಡಿಸುವುದಿಲ್ಲವೆಂದು ಶಾ ತಿಳಿಸಿದರು.

ಕಾಂಗ್ರೆಸ್, ಜೆಡಿಯು ಆರ್ಜೆಡಿ , ಟಿಎಂಸಿ ಅಯೋಧೆಯಯಲ್ಲಿ ರಾಮಮಂದಿರದ ನಿರ್ಮಾಣವನ್ನು ವಿರೋಧಿಸಿದ್ದವು. ಆರೆ ಒಂದು ಶುಭಪ್ರಾತಃಕಾಲದಂದು ಮೋದಿಯವರು ‘ಗಗನ’ದಷ್ಟೆತ್ತರದ ದೇಗುಲದ ನಿರ್ಮಾಣಕ್ಕೆ ಶಿಲಾನ್ಯಾಸಮಾಡಿದರು ಎಂದು ಅಮಿತ್ಶಾ ಹೇಳಿದ್ದಾರೆ.

share
Next Story
X