Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಫೈಲ್ಸ್ ಸರಣಿಯ ಮೊದಲ ವೀಡಿಯೊ...

ಕಾಂಗ್ರೆಸ್ ಫೈಲ್ಸ್ ಸರಣಿಯ ಮೊದಲ ವೀಡಿಯೊ ಬಿಡುಗಡೆ ಮಾಡಿದ ಬಿಜೆಪಿ

2 April 2023 10:31 PM IST
share
ಕಾಂಗ್ರೆಸ್ ಫೈಲ್ಸ್ ಸರಣಿಯ ಮೊದಲ ವೀಡಿಯೊ ಬಿಡುಗಡೆ ಮಾಡಿದ ಬಿಜೆಪಿ

ಹೊಸದಿಲ್ಲಿ, ಎ.2: ಲೋಕಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿಯು ರವಿವಾರ ‘ಕಾಂಗ್ರೆಸ್ ಫೈಲ್ಸ್’ವೀಡಿಯೊ ಸರಣಿಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸುವ ಮೂಲಕ ಕಾಂಗ್ರೆಸ್ ವಿರುದ್ಧ ಇನ್ನೊಂದು ಸುತ್ತಿನ ದಾಳಿಗೆ ಚಾಲನೆ ನೀಡಿದೆ. ಕಾಂಗ್ರೆಸ್ನ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವುದು ವೀಡಿಯೊ ಸರಣಿಯ ಉದ್ದೇಶವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ.

‘ಕಾಂಗ್ರೆಸ್ ಫೈಲ್ಸ್ನ ಮೊದಲ ಸಂಚಿಕೆ ಬಿಡುಗಡೆಗೊಂಡಿದೆ. ಕಾಂಗ್ರೆಸ್ ಆಡಳಿತದಡಿ ಹೇಗೆ ಒಂದರ ನಂತರ ಒಂದರಂತೆ ಭ್ರಷ್ಟಾಚಾರ ಮತ್ತು ಹಗರಣಗಳು ನಡೆದಿದ್ದವು ಎನ್ನುವುದನ್ನು ನೋಡಿ’ ಎಂದು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಟ್ವೀಟಿಸಿದೆ.

‘ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ’ ಎಂಬ ಶೀರ್ಷಿಕೆಯ ವೀಡಿಯೊ ಸಂಚಿಕೆಯಲ್ಲಿ ಬಿಜೆಪಿಯು, ಕಾಂಗ್ರೆಸ್ ತನ್ನ 70 ವರ್ಷಗಳ ಅಧಿಕಾರಾವಧಿಯಲ್ಲಿ ಸಾರ್ವಜನಿಕರಿಂದ 482069,00,00,000 ರೂ.ಗಳನ್ನು ಲೂಟಿ ಮಾಡಿದೆ. ಈ ಹಣವನ್ನು ಭದ್ರತೆ ಮತ್ತು ಅಭಿವೃದ್ಧಿಯ ಹಲವಾರು ಉಪಯುಕ್ತ ಕೇತ್ರಗಳಿಗೆ ಬಳಸಬಹುದಾಗಿತ್ತು ಎಂದು ಹೇಳಿದೆ.

‘ಈ ಮೊತ್ತದಲ್ಲಿ 24 ಐಎನ್ಎಸ್ ವಿಕ್ರಾಂತ್ಗಳು,300 ರಫೇಲ್ ಯುದ್ಧವಿಮಾನಗಳು ಮತ್ತು 1,000 ಮಂಗಳ ಯಾನಗಳನ್ನು ಖರೀದಿಸಬಹುದಿತ್ತು. ಆದರೆ ದೇಶವು ಕಾಂಗ್ರೆಸ್ನ ಭ್ರಷ್ಟಾಚಾರಕ್ಕೆ ಬೆಲೆಯನ್ನು ತೆರುತ್ತಿದೆ ಮತ್ತು ಪ್ರಗತಿಯ ಸ್ಪರ್ಧೆಯಲ್ಲಿ ಹಿಂದೆ ಬಿದ್ದಿದೆ ’ ಎಂದೂ ವೀಡಿಯೊ ಸಂದೇಶದಲ್ಲಿ ಸೇರಿಸಲಾಗಿದೆ.
2004ರಿಂದ 2014ರವರೆಗಿನ ಕಾಂಗ್ರೆಸ್ ಅಧಿಕಾರಾವಧಿಯನ್ನು ‘ಕಳೆದುಹೋದ ದಶಕ ’ಎಂದೂ ಬಿಜೆಪಿ ಬಣ್ಣಿಸಿದೆ.

‘ಇಡೀ 70 ವರ್ಷಗಳನ್ನು ಪಕ್ಕಕ್ಕಿರಿಸಿ 2002-2014ರ ಕೊನೆಯ ಅಧಿಕಾರಾವಧಿಯನ್ನು ನಾವು ನೋಡಿದರೆ ಅದು ‘ಕಳೆದುಹೋದ ದಶಕ’ವಾಗಿತ್ತು. ಮನಮೋಹನ್ ಸಿಂಗ್ ಸರಕಾರದ ನೇತೃತ್ವ ವಹಿಸಿದ್ದು,ತನ್ನ ಆಡಳಿತದಲ್ಲಿ ನಡೆಯುತ್ತಿದ್ದ ಎಲ್ಲ ಭ್ರಷ್ಟಾಚಾರಗಳ ಬಗ್ಗೆ ಕುರುಡಾಗಿದ್ದರು. ಆ ದಿನಗಳಲ್ಲಿ ವೃತ್ತಪತ್ರಿಕೆಗಳು ಭ್ರಷ್ಟಾಚಾರದ ಸುದ್ದಿಗಳಿಂದ ತುಂಬಿರುತ್ತಿದ್ದವು ಮತ್ತು ಅವುಗಳನ್ನು ನೋಡಿ ಭಾರತೀಯರು ನಾಚಿಕೆಯಿಂದ ತಲೆತಗ್ಗಿಸುತ್ತಿದ್ದರು. 1.86 ಲ.ಕೋ.ರೂ.ಗಳ ಕಲ್ಲಿದ್ದಲು ಹಗರಣ,1.76 ಲ.ಕೋ.ರೂ.ಗಳ 2ಜಿ ಸ್ಪೆಕ್ಟ್ರಂ ಹಗರಣ,10 ಲ.ಕೋ.ರೂ.ಗಳ ನರೇಗಾ ಹಗರಣ ಮತ್ತು 70,000 ಕೋ.ರೂ.ಗಳ ಕಾಮನ್ವೆಲ್ತ್ ಹಗರಣ;ಇವೆಲ್ಲವೂ ಕಾಂಗ್ರೆಸ್ ಆಡಳಿತದ ಆ ದಶಕದಲ್ಲಿಯೇ ನಡೆದಿದ್ದವು ಎಂದು ವೀಡಿಯೊದಲ್ಲಿ ಹೇಳಲಾಗಿದೆ.

ವೀಡಿಯೊದ ಅಂತ್ಯದಲ್ಲಿ ‘ಇದು ಕಾಂಗ್ರೆಸ್ನ ಭ್ರಷ್ಟಾಚಾರದ ಟ್ರೇಲರ್ ಮಾತ್ರ,ಪಿಕ್ಚರ್ ಇನ್ನೂ ಮುಗಿದಿಲ್ಲ ’ಎಂದೂ ಬಿಜೆಪಿ ಸೇರಿಸಿದೆ.

Congress Files के पहले एपिसोड में देखिए, कैसे कांग्रेस राज में एक के बाद एक भ्रष्टाचार और घोटाले हुए… pic.twitter.com/vAZ7BDZtFi

— BJP (@BJP4India) April 2, 2023
share
Next Story
X