Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸಂಸತ್ ಭವನದೆದುರು ಪ್ರಧಾನಿಯ ಪದವಿ...

ನೂತನ ಸಂಸತ್ ಭವನದೆದುರು ಪ್ರಧಾನಿಯ ಪದವಿ ಪ್ರಮಾಣಪತ್ರ ಪ್ರದರ್ಶಿಸಿ: ಸಂಜಯ್ ರಾವುತ್

3 April 2023 2:11 PM IST
share
ನೂತನ ಸಂಸತ್ ಭವನದೆದುರು ಪ್ರಧಾನಿಯ ಪದವಿ ಪ್ರಮಾಣಪತ್ರ ಪ್ರದರ್ಶಿಸಿ: ಸಂಜಯ್ ರಾವುತ್

ಮುಂಬೈ: ನೂತನ ಸಂಸತ್ ಭವನದ ಮುಖ್ಯ ಪ್ರವೇಶ ದ್ವಾರದೆದುರು ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪತ್ರವನ್ನು ಪ್ರದರ್ಶಿಸಬೇಕು ಎಂದು ಸೋಮವಾರ ಆಗ್ರಹಿಸುವ ಮೂಲಕ ಶಿವಸೇನೆ (ಉದ್ಧವ್ ಠಾಕ್ರೆ) ಬಣವು ಸೂಕ್ಷ್ಮ ವಿಷಯವಾಗಿ ಬದಲಾಗಿರುವ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ವ್ಯಾಸಂಗದ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು business-standard.com ವರದಿ ಮಾಡಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವ ಸೇನೆ (ಉದ್ಧವ್ ಠಾಕ್ರೆ) ಬಣದ ಸಂಸದ ಹಾಗೂ ಮುಖ್ಯ ವಕ್ತಾರ ಸಂಜಯ್ ರಾವುತ್, "ಪ್ರಧಾನಿಯ ಪದವಿ ಕುರಿತ ವಿವರವನ್ನು ರಹಸ್ಯವೆಂಬಂತೆ ಏಕೆ ರಕ್ಷಿಸಲಾಗುತ್ತಿದೆ ಮತ್ತು ಜನರ ಮನಸ್ಸಿನಲ್ಲಿ ಅನುಮಾನ ಹುಟ್ಟಿಸಲಾಗುತ್ತಿದೆ?" ಎಂದು ಪ್ರಶ್ನಿಸಿದ್ದು, "ಪ್ರಧಾನಿಯ ಪದವಿಯನ್ನು ಜನರು ನಕಲಿ ಎಂದು ಕರೆಯುತ್ತಿದ್ದಾರೆ. ಆದರೆ, ನಾನು ಸಮಗ್ರ ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆಯುವುದು ಐತಿಹಾಸಿಕ ಹಾಗೂ ಕ್ರಾಂತಿಕಾರಕ ಎಂದು ಪ್ರಾಮಾಣಿಕವಾಗಿ ನಂಬಿದ್ದೇನೆ. ಆದ್ದರಿಂದ ಅವರ ಪದವಿ ಪ್ರಮಾಣ ಪತ್ರವನ್ನು ನೂತನ ಸಂಸತ್ ಭವನದ ಮುಖ್ಯ ಪ್ರವೇಶ ದ್ವಾರದೆದುರು ಪ್ರದರ್ಶಿಸುವ ಮೂಲಕ ಜನ ಆ ಕುರಿತು ಅನುಮಾನ ಪಡುವುದನ್ನು ತಡೆಯಬೇಕು" ಎಂದು ಹೇಳಿದ್ದಾರೆ.

ಪ್ರಧಾನಿಯ ಪದವಿ ಕುರಿತು ವಿವರ ಕೇಳಿದ ಅರವಿಂದ್ ಕೇಜ್ರಿವಾಲ್ ಅವರಿಗೆ ಅದನ್ನು ನೀಡಲು ನಿರಾಕರಿಸಲಾಗಿದ್ದು, ಅವರಿಗೆ ರೂ. 25,000 ದಂಡವನ್ನೂ ವಿಧಿಸಲಾಗಿದೆ ಎಂದಿರುವ ಶಿವ ಸೇನೆ (ಉದ್ಧವ್ ಠಾಕ್ರೆ) ಬಣದ ನಾಯಕ, "ಪ್ರಧಾನಿ ಪದವಿಯ ಕುರಿತು ಬಚ್ಚಿಡುವಂಥದ್ದು ಏನಿದೆ?" ಎಂದು ಪ್ರಶ್ನಿಸಿದ್ದಾರೆ. ಮೋದಿಯೇ ಈ ಕುರಿತು ಮುಂದೆ ಬಂದು ಅವರ ಪದವಿ ವ್ಯಾಸಂಗದ ಕುರಿತು ಹರಡಿರುವ ಗಾಳಿ ಮಾತುಗಳಿಗೆ ಸ್ಪಷ್ಟೀಕರಣ ನೀಡಬೇಕು ಎಂದು ನಾವು ಬಯಸುತ್ತೇವೆ ಎಂದು ಸಂಜಯ್ ರಾವುತ್ ಆಗ್ರಹಿಸಿದ್ದಾರೆ.

ಈ ನಡುವೆ ಪ್ರಧಾನಿಯ ಪದವಿಯನ್ನು ನಕಲಿ ಎಂದು ಕರೆದಿರುವ ಪಕ್ಷದ ಮುಖವಾಣಿ ಪತ್ರಿಕೆಗಳಾದ "ಸಾಮ್ನಾ" ಹಾಗೂ "ದೋಪಹಾರ್ ಕಾ ಸಾಮ್ನಾ", ತಮ್ಮ ಸಂಪಾದಕೀಯಗಳಲ್ಲಿ ನರೇಂದ್ರ ಮೋದಿ ಮೇಲೆ ಟೀಕಾಪ್ರಹಾರ ನಡೆಸಿದ್ದು, ಅವರ ಪದವಿ ವಿಷಯವು ಪುನಃ ರಾಜಕೀಯ ವಲಯಗಳಲ್ಲಿ ಮುನ್ನೆಲೆಗೆ ಬಂದಿದೆ ಎಂದು ಹೇಳಿವೆ.

share
Next Story
X