Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆ ಸಂಚಾರ...

ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆ ಸಂಚಾರ ಮುಕ್ತಗೊಳಿಸಲು ಜಿಲ್ಲಾಧಿಕಾರಿಗೆ ಡಿವೈಎಫ್ ಐ ಮನವಿ

3 April 2023 3:17 PM IST
share

ಕೊಣಾಜೆ, ಎ.3: ಚುನಾವಣೆ‌ ನೀತಿ ಸಂಹಿತೆ ಹೆಸರಲ್ಲಿ ಸಂಚಾರ ತಡೆಹಿಡಿದಿರುವ ಹರೇಕಳ-ಅಡ್ಯಾರ್ ಸಂಪರ್ಕಿಸುವ ಕಿಂಡಿ ಅಣೆಕಟ್ಟು ಸಹಿತ ಸೇತುವೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ಆಗ್ರಹಿಸಿ ಡಿವೈಎಫ್ ಐ ಹರೇಕಳ ಗ್ರಾಮ ಸಮಿತಿಯು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಈ ಸೇತುವೆ ಕಾಮಗಾರಿ ಅನೇಕ ಸಮಯಗಳ ಹಿಂದೆಯೇ ಪೂರ್ಣಗೊಂಡಿದ್ದು, ವಾಹನ ಸಂಚಾರಕ್ಕೆ ಅವಕಾಶಗಳಿದ್ದರೂ ಇದೀಗ ಚುನಾವಣೆ‌ ನೀತಿ ಸಂಹಿತೆ ಹೆಸರಲ್ಲಿ ಸೇತುವೆಯಲ್ಲಿ ಸಂಚಾರ ತಡೆಹಿಡಿಯಲಾಗಿದೆ. ಇದರಿಂದ‌ ಈ ಭಾಗದ ಜನರಿಗೆ ತೊಂದರೆಯಾಗಿದೆ. ಆದುದರಿಂದ ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿವೈಎಫ್ ಐ ನಿಯೋಗ ಒತ್ತಾಯಿಸಿದೆ.

    ಕಳೆದ‌ ಅಕ್ಟೋಬರ್ ತಿಂಗಳಲ್ಲೇ‌ಸೇತುವೆ ಕಾಮಗಾರಿಯು ಪೂರ್ಣಗೊಂಡಿದ್ದು, ಖಾಸಗಿ ವ್ಯಕ್ತಿಯೊಬ್ಬರು ಜಮೀನು ವಿಷಯಕ್ಕೆ ಸಂಬಂಧಿಸಿ  ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರಿಂದ ವಾಹನ ಸಂಚಾರಕ್ಕೆ ಅವಕಾಶ ಸಿಗದೆ ಜನರು ನಿಗದಿತ  (ಸಂಜೆ 7ರವರೆಗೆ) ಸಮಯದವರೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಕಾಮಗಾರಿಯು ಪೂರ್ಣಗೊಂಡಿತ್ತು. ಸೇತುವೆ ನಿರ್ವಹಣೆ ಸಂಬಂಧಪಟ್ಟ ಇಲಾಖೆಯವರು ಎಪ್ರಿಲ್ ಒಂದರಿಂದ ಸೇತುವೆಯಲ್ಲಿ ಸಾರ್ವಜನಿಕರ ಓಡಾಟ ಹಾಗೂ ಲಘು ವಾಹನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬ ಸಾರ್ವಜನಿಕ ಪ್ರಕಟನೆಯನ್ನು ಸಾರ್ವಜನಿಕ ಮಾಧ್ಯಮಗಳ ಮೂಲಕ ಹೇಳಿರುತ್ತಾರೆ. ಆದರೆ ಅಂದು ಚುನಾವಣೆ ನೀತಿ ಸಂಹಿತೆಯ ನೆಪವೊಡ್ಡಿ ಸೇತುವೆಯ ಗೇಟುಗಳನ್ನು ತೆಗೆಯದೆ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿಲ್ಲ. 

ಸೇತುವೆ ನಿರ್ಮಾಣದ ಬಳಿಕ ಇಲ್ಲಿ ದೋಣಿ ಸಂಚಾರವೂ ನಿಂತಿದ್ದು, ಜನರ ಸಂಚಾರಕ್ಕೆ ತೊಂದರೆಯಾಗಿದೆ. ಇದೀಗ ರಾಜಕೀಯ ಕಾರಣದಿಂದ ಸೇತುವೆ ಸಂಚಾರ ತಡೆಹಿಡಿದಿರುವುದರಿಂದ ಸಾರ್ವನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆ ಸಂಚಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ ಐ ಹರೇಕಳ ಸಮಿತಿಯು ಮನವಿ ಮಾಡಿತು.

ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ತಡೆ ಹಿಡಿದಿರುವ ಹರೇಕಳ ಸೇತುವೆ ಸಂಚಾರವನ್ನು ಮುಕ್ತಗೊಳಿಸುವಂತೆ ಕೋರಿ ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ತಾಲೂಕು ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಸಮಿತಿಯ ಕಾರ್ಯದರ್ಶಿ ರಿಝ್ವಾನ್ ಖಂಡಿಗ, ಮಂಗಳೂರು ನಗರ ಅಧ್ಯಕ್ಷ ಜಗದೀಶ್ ಬಜಾಲ್, ಹೈದರ್ ಹರೇಕಳ, ಸತ್ತಾರ್ ಕೊಜಪಾಡಿ, ಉಸ್ಮಾನ್ ಕಣ್ಣೂರ್ ಉಪಸ್ಥಿತರಿದ್ದರು.

share
Next Story
X