Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೋ-ಬಾಲ್‌ಗಳನ್ನು ಎಸೆಯಬೇಡಿ: ಚೆನ್ನೈ...

ನೋ-ಬಾಲ್‌ಗಳನ್ನು ಎಸೆಯಬೇಡಿ: ಚೆನ್ನೈ ಬೌಲರ್ ಗಳಿಗೆ ಎಂ.ಎಸ್. ಧೋನಿ ಎಚ್ಚರಿಕೆ

4 April 2023 1:28 PM IST
share
ನೋ-ಬಾಲ್‌ಗಳನ್ನು ಎಸೆಯಬೇಡಿ: ಚೆನ್ನೈ ಬೌಲರ್ ಗಳಿಗೆ ಎಂ.ಎಸ್. ಧೋನಿ ಎಚ್ಚರಿಕೆ

ಚೆನ್ನೈ: ಈಗ ನಡೆಯುತ್ತಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಎಕ್ಸ್ ಟ್ರಾ ರನ್ ಹೆಚ್ಚು ನೀಡಿತ್ತು. ಸೋಮವಾರ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಲಕ್ನೊ ವಿರುದ್ಧ 12 ರನ್ ನಿಂದ ಗೆಲುವು ದಾಖಲಿಸಿದ್ದರೂ ಕೂಡ  ಬೌಲರ್‌ಗಳು 18 ಎಕ್ಸ್‌ಟ್ರಾ ರನ್ ಗಳನ್ನು  (ಲೆಗ್-ಬೈಸ್ - 2, ವೈಡ್ಸ್ – 13,  ನೋ ಬಾಲ್‌ಗಳು - 3) ಬಿಟ್ಟುಕೊಟ್ಟಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಸಿಎಸ್ ಕೆ   ಆಡಿದ್ದ  ಮೊದಲ ಪಂದ್ಯದಲ್ಲೂ ಬೌಲರ್‌ಗಳು 2 ನೋ-ಬಾಲ್ ಸಹಿತ 12 ಎಕ್ಸ್‌ಟ್ರಾ ರನ್ ಗಳನ್ನು ಬಿಟ್ಟುಕೊಟ್ಟಿದ್ದರು.

 ಸಿಎಸ್ ಕೆ ನಾಯಕ ಎಂ.ಎಸ್.  ಧೋನಿ ನೋ-ಬಾಲ್ ಎಸೆಯುತ್ತಿರುವ ತಮ್ಮ ಬೌಲರ್ ಗಳಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ.

"ವೇಗದ ಬೌಲಿಂಗ್ ಅನ್ನು ನಾವು ಸ್ವಲ್ಪ ಸುಧಾರಿಸಬೇಕಾಗಿದೆ. ಪರಿಸ್ಥಿತಿಗಳಿಗೆ ಅನುಗುಣವಾಗಿ ಬೌಲಿಂಗ್ ಮಾಡಬೇಕಾಗಿದೆ. ಎದುರಾಳಿ ಬೌಲರ್‌ಗಳು ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸುವುದು ಮುಖ್ಯವಾದುದು. ಇನ್ನೊಂದು ವಿಷಯವೆಂದರೆ ಯಾರೂ  ನೋ-ಬಾಲ್ ಅಥವಾ ಹೆಚ್ಚುವರಿ ವೈಡ್ ಗಳನ್ನು ಹಾಕಬಾರದು. ಹಾಗೆ ಮಾಡಿದರೆ ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ. ಇದು ನನ್ನ ಎರಡನೇ ಎಚ್ಚರಿಕೆ. ನಂತರ ನಾನು ಹೊರಗುಳಿಯುತ್ತೇನೆ" ಎಂದು ಧೋನಿ ಹೇಳಿದ್ದಾರೆ.

ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ನೋಡಿ ಧೋನಿ ಕೂಡ ಅಚ್ಚರಿಗೊಂಡರು. "ಇದೊಂದು ಸೊಗಸಾದ ಆಟ, ಗರಿಷ್ಠ ರನ್ ನ ಗೇಮ್ ಆಗಿತ್ತು ಇದೊಂದು ತವರಿನಲ್ಲಿ ನಡೆದ ಪರಿಪೂರ್ಣ ಮೊದಲ ಪಂದ್ಯ ಎಂದು ನಾನು ಭಾವಿಸುತ್ತೇನೆ. ನಾವು ಇಲ್ಲಿ 5 ಅಥವಾ 6 ವರ್ಷಗಳ ನಂತರ ಆಡಿದ್ದ ಕಾರಣ ಮೊದಲ ಪಂದ್ಯಕ್ಕೆ ಸ್ಟೇಡಿಯಮ್ ಹೌಸ್ ಫುಲ್ ಆಗಿತ್ತು’’ ಧೋನಿ ಹೇಳಿದರು.

share
Next Story
X