Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ವಿಗ್ನತೆಯ ಮಧ್ಯೆ ಇಬ್ಬರು ಭಾರತೀಯ...

ಉದ್ವಿಗ್ನತೆಯ ಮಧ್ಯೆ ಇಬ್ಬರು ಭಾರತೀಯ ಪತ್ರಕರ್ತರು ಬೀಜಿಂಗ್ ಗೆ ಮರಳುವುದನ್ನು ನಿಷೇಧಿಸಿದ ಚೀನಾ

5 April 2023 7:52 PM IST
share
ಉದ್ವಿಗ್ನತೆಯ ಮಧ್ಯೆ ಇಬ್ಬರು ಭಾರತೀಯ ಪತ್ರಕರ್ತರು ಬೀಜಿಂಗ್ ಗೆ ಮರಳುವುದನ್ನು ನಿಷೇಧಿಸಿದ ಚೀನಾ

ಹೊಸದಿಲ್ಲಿ,ಎ.5: ಇಬ್ಬರು ಭಾರತೀಯ ಪತ್ರಕರ್ತರು ತನ್ನ ದೇಶಕ್ಕೆ ಮರಳುವುದನ್ನು ನಿಷೇಧಿಸಿರುವ ಚೀನಾ,ಅವರ ವೀಸಾಗಳನ್ನು ಸ್ತಂಭನಗೊಳಿಸಲಾಗಿದೆ ಎಂದು ಹೇಳಿದೆ.

ಚೀನಾದ ವಿದೇಶಾಂಗ ಸಚಿವಾಲಯದ ಅಧಿಕಾರಿಯೋರ್ವರು ಸರಕಾರಿ ಸ್ವಾಮ್ಯದ ಪ್ರಸಾರ ಭಾರತಿಯ ವರದಿಗಾರ ಅಂಶುಮನ್ ಮಿಶ್ರಾ ಮತ್ತು ದಿ ಹಿಂದು ಪತ್ರಿಕೆಯ ವರದಿಗಾರ ಅನಂತ ಕೃಷ್ಣನ್ ಅವರಿಗೆ ಮಂಗಳವಾರ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇಬ್ಬರೂ ಪತ್ರಕರ್ತರು ಬೀಜಿಂಗ್ನಲ್ಲಿ ನೆಲೆಸಿದ್ದು,ಪ್ರಸ್ತುತ ಭಾರತದಲ್ಲಿದ್ದಾರೆ.

‌ಪಿಟಿಐ ವರದಿಗಾರ ಕೆಜೆಎಂ ವರ್ಮಾ ಮತ್ತು ಹಿಂದುಸ್ಥಾನ ಟೈಮ್ಸ್ ನ ಸುತೀರ್ಥ ಪತ್ರಾನೊಬಿಸ್ ಅವರಿಗೆ ಸದ್ಯಕ್ಕೆ ಚೀನಾದಲ್ಲಿ ಉಳಿಯಲು ಅವಕಾಶ ನೀಡಲಾಗಿದೆ. ಆದರೆ ಭಾರತವು ಚೀನಾದ ಪತ್ರಕರ್ತರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಆರೋಪಿಸಿರುವ ಚೀನಾದ ವಿದೇಶಾಂಗ ಸಚಿವಾಲಯವು ಅದನ್ನು ಪ್ರತಿಭಟಿಸಲು ಹೆಚ್ಚಿನ ಪ್ರತಿ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಮಾಧ್ಯಮ ವರದಿಯು ಹೇಳಿದೆ.

ಭಾರತದಲ್ಲಿ ವರದಿಗಾರಿಕೆಗೆ ಚೀನಿ ಪತ್ರಕರ್ತರಿಗೆ ಹೆಚ್ಚು ವೀಸಾಗಳನ್ನು ಚೀನಾ ಬಯಸಿದೆ ಎನ್ನಲಾಗಿದೆ. ಭಾರತವು ತನ್ನ ಪತ್ರಕರ್ತರಿಗೆ ಮೂರು ತಿಂಗಳ ಬದಲು ಒಂದು ವರ್ಷ ಅವಧಿಯ ವೀಸಾಗಳನ್ನು ನೀಡಬೇಕು ಎಂದೂ ಅದು ಆಗ್ರಹಿಸಿದೆ. ಚೀನಾ ಭಾರತೀಯ ಪತ್ರಕರ್ತರಿಗೆ ಒಂದು ವರ್ಷಕ್ಕೆ ವೀಸಾಗಳನ್ನು ನೀಡುತ್ತಿದೆ.

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ನಿರಾಕರಿಸಿದ್ದರೆ,ದಿಲ್ಲಿಯಲ್ಲಿ ನೆಲೆಸಿದ್ದ ಅನೇಕ ಚೀನಿ ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಸ್ವದೇಶಕ್ಕೆ ತೆರಳಿದ್ದರು ಮತ್ತು ನಂತರ ಭಾರತಕ್ಕೆ ವಾಪಸಾಗಿಲ್ಲ ಎಂದು ಅನಾಮಿಕ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದರು. ಭಾರತದ ಕ್ರಮವು ಚೀನಾದ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ ಎಂದು ಹೇಳುವುದು ತಪ್ಪಾಗುತ್ತದೆ ಎಂದರು.

ಮಾನ್ಯ ವೀಸಾಗಳನ್ನು ಹೊಂದಿರುವ ಕೆಲವು ಚೀನಿ ಪತ್ರಕರ್ತರು ಭಾರತದಲ್ಲಿದ್ದು,ಅವರು ಬೇಕಾದರೆ ವರದಿಗಳನ್ನು ಮಾಡಬಹುದು ಎಂದೂ ಅವರು ತಿಳಿಸಿದರು.

10 ವರ್ಷಗಳ ಹಿಂದೆ ಭಾರತದಲ್ಲಿ ಸುಮಾರು ಒಂದು ಡಝನ್ನಷ್ಟಿದ್ದ ಚೀನಿ ಪತ್ರಕರ್ತರ ಸಂಖ್ಯೆ 2022ರ ಅಂತ್ಯದ ವೇಳೆಗೆ ನಾಲ್ಕಕ್ಕೆ ಇಳಿದಿತ್ತು. 2016ರಲ್ಲಿ ತಮ್ಮ ಪತ್ರಿಕೋದ್ಯಮ ವ್ಯಾಪ್ತಿಗೆ ಮೀರಿದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿ ಭಾರತವು ಚೀನಾದ ಸರಕಾರಿ ಸುದ್ದಿಸಂಸ್ಥೆ ಷಿನುವಾದ ಮೂವರು ಪತ್ರಕರ್ತರನ್ನು ಉಚ್ಚಾಟಿಸಿತ್ತು.

ಜೂನ್ 2020ರಲ್ಲಿ ಗಲ್ವಾನ್ ಘರ್ಷಣೆಗಳ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದೆ.

share
Next Story
X