Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ : ಅಳುಪ ದೊರೆ ವೀರ ಪಾಂಡ್ಯನ 13ನೇ...

ಉಡುಪಿ : ಅಳುಪ ದೊರೆ ವೀರ ಪಾಂಡ್ಯನ 13ನೇ ಶತಮಾನದ ಶಾಸನ ಪತ್ತೆ

5 April 2023 8:05 PM IST
share
ಉಡುಪಿ : ಅಳುಪ ದೊರೆ ವೀರ ಪಾಂಡ್ಯನ 13ನೇ ಶತಮಾನದ ಶಾಸನ ಪತ್ತೆ

ಉಡುಪಿ, ಎ.5: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಸಕ್ಕಟ್ಟು ಎಂಬ ಪ್ರದೇಶದಲ್ಲಿ ಆಳುಪ ದೊರೆ ವೀರ ಪಾಂಡ್ಯನ 13ನೇ ಶತಮಾನದ ಶಿಲಾ ಶಾಸನವೊಂದು ಪತ್ತೆಯಾಗಿದೆ.

ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನವು ಕೊಳ್ಕೆಬೈಲು ಗದ್ದೆಯಲ್ಲಿ ಪತ್ತೆಯಾಗಿದ್ದು, ಕನ್ನಡ ಲಿಪಿ ಮತ್ತು ಭಾಷೆಯಲ್ಲಿದೆ. ಶಾಸನದ ಹೆಚ್ಚಿನ ಸಾಲುಗಳು ತೃಟಿತಗೊಂಡಿದ್ದು, ಕೇವಲ 12 ಸಾಲುಗಳಲ್ಲಿ ಭಾಗಶಃ ಕಂಡುಬರುತ್ತದೆ. ಶಾಸನದ ಮೇಲ್ಭಾಗದಲ್ಲಿ ಶಿವಲಿಂಗವಿದ್ದು, ಇಕ್ಕೆಲಗಳಲ್ಲಿ ಸೂರ್ಯ-ಚಂದ್ರ, ರಾಜಕತ್ತಿ, ನಂದಾದೀಪ ಮತ್ತು ನಂದಿಯ ಉಬ್ಬು ಕೆತ್ತನೆಯನ್ನು ಮಾಡಲಾಗಿದೆ. 

ಸ್ವಸ್ತಿಶ್ರೀ ಎಂಬ ಶುಭಸೂಚಕದಿಂದ ಪ್ರಾರಂಭವಾಗುವ ಈ ಶಾಸನವು ಶಕವರುಷ 1266ನೆಯ ತಾರಣ ಸಂವತ್ಸ ರದ ಶ್ರಾವಣ ಬಹುಳ 13 ಸಿಂಹಮಾಸ ವಡ್ಡವಾರ (ಗುರುವಾರ) ಎಂಬ ಕಾಲಮಾನವನ್ನು ಉಲ್ಲೇಖಿಸಿದ್ದು, ಇದು ಸಾಮಾನ್ಯ ವರ್ಷ 1344ಕ್ಕೆ ಸರಿ ಹೊಂದುತ್ತದೆ.

ಶಾಸನದಲ್ಲಿ ಆಳುಪ ದೊರೆ ವೀರಪಾಂಡ್ಯ ದೇವನನ್ನು ‘ಶ್ರೀಪಾಂಡ್ಯ ಚಕ್ರವರ್ತಿ, ಯರಿರಾಯ ಬಸವಸಂಕರ, ರಾಯಗಜಾಂಕುಸ’ ಎಂಬ ಬಿರುದಿನಿಂದ ಉಲ್ಲೇಖಿಸಿರುವುದನ್ನು ಕಾಣಬಹುದಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಪ್ರಸ್ತುತ ಈ ಶಾಸನವನ್ನು ಜೀರ್ಣೋದ್ಧಾರದಲ್ಲಿರುವ ಸಕ್ಕಟ್ಟು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಸಂರಕ್ಷಣಾ ದೃಷ್ಟಿಯಿಂದ ಸ್ಥಳಾಂತರ ಮಾಡಲಾಗಿದೆ. 

ಪಾದೂರು ಗುರುರಾಜ್ ಭಟ್ ಅವರು ತಮ್ಮ ಮಹಾಪ್ರಬಂಧವಾದ ’ಸ್ಟಡೀಸ್ ಇನ್ ತುಳುವ ಹಿಸ್ಟರಿ ಅಂಡ್ ಕಲ್ಚರ್’ನಲ್ಲಿ ದೇವಾಲಯದಲ್ಲಿನ ಶ್ರೀಧರ ವಿಗ್ರಹದ (12-13ನೇ ಶತಮಾನ) ಬಗ್ಗೆ ಉಲ್ಲೇಖ ನೀಡಿದ್ದು, ಈ ಮೂರ್ತಿಯ ಪ್ರಭಾವಳಿಯಲ್ಲಿ ವಿಷ್ಣುವಿನ ದಶಾವತಾರದ ಕೆತ್ತನೆಯನ್ನು ಕಾಣಬಹುದು. ಮಾತ್ರವಲ್ಲದೇ ದೇವಾಲಯದ ಹೊರ ಭಿತ್ತಿಯಲ್ಲಿ 15-16ನೇ ಶತಮಾನಕ್ಕೆ ಸೇರಿರುವ ವರ್ಣಚಿತ್ರಗಳ ಅವಶೇಷಗಳನ್ನು ಸಹ ನೋಡಬಹುದು.ದೇವಾಲಯದ ಹೊರಭಾಗದಲ್ಲಿ ಇನ್ನೊಂದು ಶಾಸನವಿದ್ದು, ಇದು ಸಂಪೂರ್ಣವಾಗಿ ತೃಟಿತಗೊಂಡಿರುತ್ತದೆ.

ಹವ್ಯಾಸಿ ಇತಿಹಾಸ ಸಂಶೋಧಕ ಕಂಚಾರ್ತಿ ರಾಜೇಶ್ವರ ಉಪಾಧ್ಯಾಯ ಅವರ ಮಾಹಿತಿಯ ಮೇರೆಗೆ ಹೈದರಾಬಾದ್‌ನ ಪ್ಲೀಚ್ ಇಂಡಿಯಾ ಫೌಂಡೇಶನ್‌ನಲ್ಲಿ ಸಂಶೋಧಕರಾಗಿರುವ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಈ ಶಾಸನವನ್ನು ಅಧ್ಯಯನ ಮಾಡಿದ್ದಾರೆ. 

ಕ್ಷೇತ್ರಕಾರ್ಯ ಶೋಧನೆಗೆ ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ ಉಡುಪಿ ಇದರ ಅಧ್ಯಯನ ನಿರ್ದೇಶಕ ಎಸ್.ಎ. ಕೃಷ್ಣಯ್ಯ ಮತ್ತು   ಸಕ್ಕಟ್ಟು  ಶ್ರೀವಿಷ್ಣುಮೂರ್ತಿ ದೇವಾಲಯದ ಆಡಳಿತ ಮುಖ್ಯಸ್ಥ ಎಸ್. ರಘುರಾಮ ರಾವ್ ಅವರ ಮಗ ಎಸ್. ಗೋಪಾಲಕೃಷ್ಣ ರಾವ್ ಸಹಕಾರ ನೀಡಿದ್ದಾರೆ ಎಂದು ಶ್ರುತೇಶ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
Next Story
X