Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಜ್‌ಮಹಲ್ ಧ್ವಂಸಗೊಳಿಸಿ,...

ತಾಜ್‌ಮಹಲ್ ಧ್ವಂಸಗೊಳಿಸಿ, ಶಹಜಹಾನ್-ಮುಮ್ತಾಝ್ ಪ್ರೀತಿಯ ಕುರಿತು ತನಿಖೆ ನಡೆಸಬೇಕು ಎಂದ ಬಿಜೆಪಿ ಶಾಸಕ

6 April 2023 12:23 PM IST
share
ತಾಜ್‌ಮಹಲ್ ಧ್ವಂಸಗೊಳಿಸಿ, ಶಹಜಹಾನ್-ಮುಮ್ತಾಝ್ ಪ್ರೀತಿಯ ಕುರಿತು ತನಿಖೆ ನಡೆಸಬೇಕು ಎಂದ ಬಿಜೆಪಿ ಶಾಸಕ

ದಿಸ್ಪುರ್: 12ನೇ ತರಗತಿಯ ಪಠ್ಯಪುಸ್ತಕದಿಂದ ಎನ್‌ಸಿಇಆರ್‌ಟಿ ಮೊಘಲರ ಚರಿತ್ರೆಯ ಮೇಲಿನ ಕೆಲವು ಪಾಠಗಳನ್ನು ಕೈಬಿಟ್ಟಿರುವ ಕುರಿತು ವಿವಾದ ಭುಗಿಲೆದ್ದಿರುವಾಗಲೇ, ತಾಜ್‌ಮಹಲ್‌ (Taj Mahal) ಹಾಗೂ ಕುತುಬ್ ಮಿನಾರ್ ಅನ್ನು ಧ್ವಂಸಗೊಳಿಸಬೇಕು ಎಂದು ಹೇಳುವ ಮೂಲಕ ಅಸ್ಸಾಂ ಬಿಜೆಪಿ ಶಾಸಕ ರೂಪ್‌ಜ್ಯೋತಿ ಕುರ್ಮಿ (Rupjyoti Kurmi) ವಿವಾದ ಹುಟ್ಟುಹಾಕಿದ್ದಾರೆ. ಅಂತರ್ಜಾಲ ತಾಣದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿರುವ ವಿಡಿಯೊವೊಂದರಲ್ಲಿ ಮೊಘಲ್ ಚಕ್ರವರ್ತಿ ಶಹಜಹಾನ್ ತನ್ನ ಪತ್ನಿ ಮುಮ್ತಾಜ್‌ರನ್ನು ನಿಜಕ್ಕೂ ಪ್ರೀತಿಸುತ್ತಿದ್ದನೆ ಎಂಬ ಕುರಿತು ತನಿಖೆ ನಡೆಸಬೇಕು ಎಂದು ರೂಪ್‌ಜ್ಯೋತಿ ಕುರ್ಮಿ ಆಗ್ರಹಿಸಿರುವುದು ಕಂಡು ಬಂದಿದೆ ಎಂದು hindustantimes.com ವರದಿ ಮಾಡಿದೆ.

ಇದಲ್ಲದೆ ಮೊಘಲ್ ಕಾಲಘಟ್ಟದ ಎರಡು ಸ್ಮಾರಕಗಳ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಬೇಕು ಎಂದೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಮರಿಯಾನಿ ಕ್ಷೇತ್ರದ ಶಾಸಕರೂ ಆಗಿರುವ ರೂಪ್‌ಜ್ಯೋತಿ ಕುರ್ಮಿ, ದೇವಾಲಯ ನಿರ್ಮಾಣಕ್ಕೆ ನನ್ನ ಒಂದು ವರ್ಷದ ವೇತನವನ್ನು ಕೊಡುಗೆ ನೀಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

"ತಾಜ್‌ಮಹಲ್ ಹಾಗೂ ಕುತುಬ್ ಮಿನಾರ್ ಸ್ಮಾರಕಗಳನ್ನು ಕೂಡಲೇ ಧ್ವಂಸಗೊಳಿಸಬೇಕು ಎಂದು ನಾನು ಪ್ರಧಾನ ಮಂತ್ರಿಯವರನ್ನು ಒತ್ತಾಯಿಸುತ್ತೇನೆ. ಈ ಎರಡು ಸ್ಮಾರಕಗಳ ಸ್ಥಳದಲ್ಲಿ ವಿಶ್ವದಲ್ಲೇ ಅತ್ಯಂತ ಸುಂದರವಾದ ದೇವಾಲಯಗಳನ್ನು ನಿರ್ಮಿಸಬೇಕು. ಈ ದೇವಾಲಯಗಳ ವಾಸ್ತುಶಿಲ್ಪಕ್ಕೆ ವಿಶ್ವದ ಬೇರಾವುದೇ ಸ್ಮಾರಕವೂ ಸಾಟಿಯಾಗಕೂಡದು" ಎಂದು ರೂಪ್‌ಜ್ಯೋತಿ ಕುರ್ಮಿ ಪ್ರತಿಪಾದಿಸಿದ್ದಾರೆ.

ಮುಮ್ತಾಝ್ ಮೃತಪಟ್ಟ ನಂತರ 17ನೇ ಶತಮಾನದ ಚಕ್ರವರ್ತಿಯು ಮತ್ತೆ ಮೂರು ವಿವಾಹಗಳನ್ನು ಏಕೆ ಮಾಡಿಕೊಂಡರು? ವಿಶ್ವದ ಏಳು ವಿಸ್ಮಯಗಳ ಪೈಕಿ ಒಂದಾದ ತಾಜ್‌ಮಹಲ್ ಅನ್ನು ಹಿಂದೂ ದೊರೆಗಳ ದುಡ್ಡಿನಲ್ಲಿ ನಿರ್ಮಿಸಲಾಗಿದೆ ಎಂದು ಅವರು ವಾದಿಸಿದ್ದಾರೆ.

"1526ರಲ್ಲಿ ಮೊಘಲರು ಭಾರತಕ್ಕೆ ಆಗಮಿಸಿದರು ಮತ್ತು ನಂತರ ತಾಜ್‌ಮಹಲ್ ನಿರ್ಮಿಸಿದರು. ಶಹಾಜಹಾನ್ ಹಿಂದೂ ದೊರೆಗಳ ದುಡ್ಡಿನಿಂದ ತಾಜ್‌ಮಹಲ್ ನಿರ್ಮಿಸಿದರು ಮತ್ತದು ನಮ್ಮ ದುಡ್ಡಾಗಿದೆ. ಶಹಜಹಾನ್ ತನ್ನ ನಾಲ್ಕನೆಯ ಪತ್ನಿಯ ನೆನಪಿಗಾಗಿ ತಾಜ್‌ಮಹಲ್ ನಿರ್ಮಿಸಿದರು. ಆತ ಏಳು ಮಂದಿಯನ್ನು ವಿವಾಹವಾಗಿದ್ದು ಮತ್ತು ಮುಮ್ತಾಝ್ ನಾಲ್ಕನೆಯ ಪತ್ನಿಯಾಗಿದ್ದಳು. ಒಂದು ವೇಳೆ ಆತ ಮುಮ್ತಾಜ್‌ಳನ್ನು ಅಷ್ಟು ಪ್ರೀತಿಸುತ್ತಿದ್ದರೆ, ಆಕೆ ಸಾವಿಗೀಡಾದ ನಂತರ ಮತ್ತೆ ಏಕೆ ಹಲವು ಪತ್ನಿಯರನ್ನು ವರಿಸಿದ?" ಎಂದು ರೂಪ್‌ಜ್ಯೋತಿ ಕುರ್ಮಿ ಪ್ರಶ್ನಿಸಿದ್ದಾರೆ.

ANI ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ನಾಲ್ಕು ಬಾರಿಯ ಶಾಸಕ ರೂಪ್‌ಜ್ಯೋತಿ ಕುರ್ಮಿ, ಪ್ರೀತಿಯ ಸಾಕ್ಷಿ ಎಂದು ವ್ಯಾಪಕವಾಗಿ ಭಾವಿಸಲಾಗಿರುವ ತಾಜ್‌ಮಹಲ್ ಪ್ರೀತಿಯ ಸಂಕೇತವಲ್ಲ ಎಂದು ಹೇಳಿದ್ದಾರೆ.

share
Next Story
X