Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಜಿಪ್ಟ್: ಪುರಾತನ ಕಾಲದ ಅರಮನೆಯ ಬಳಿ...

ಈಜಿಪ್ಟ್: ಪುರಾತನ ಕಾಲದ ಅರಮನೆಯ ಬಳಿ ಮಣ್ಣಿನಡಿ ಹಲವು ಕತ್ತರಿಸಿದ್ದ ಕೈಗಳು ಪತ್ತೆ

6 April 2023 10:28 PM IST
share
ಈಜಿಪ್ಟ್: ಪುರಾತನ ಕಾಲದ ಅರಮನೆಯ ಬಳಿ ಮಣ್ಣಿನಡಿ ಹಲವು ಕತ್ತರಿಸಿದ್ದ ಕೈಗಳು ಪತ್ತೆ

ಕೈರೊ, ಎ.6: ಈಜಿಪ್ಟ್ ನಲ್ಲಿರುವ ಪುರಾತನ ಕಾಲದ ಅರಮನೆಯೊಂದರ ಹೊರಗೆ ಇರುವ ಹೊಂಡದಲ್ಲಿ 12ಕ್ಕೂ ಹೆಚ್ಚು ಹಸ್ತಗಳು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುರಾತನ ಈಜಿಪ್ಟ್ ನಲ್ಲಿದ್ದ ಭಯಾನಕ ಆಚರಣೆಯೊಂದನ್ನು ಇದು ಸಂಕೇತಿಸಿದೆ ಎಂದು `ನೇಚರ್' ಮ್ಯಾಗಝಿನ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ಹೇಳಿದೆ.

ಉತ್ತರ ಈಜಿಪ್ಟ್ ನ ಅವಾರಿಸ್ ನಗರದಲ್ಲಿರುವ ಹೈಕ್ಸೋಸ್ ಅರಮನೆಯಲ್ಲಿರುವ ಹೊಂಡದ ಆಳದಲ್ಲಿ ಈ ಹಸ್ತಗಳು ಪತ್ತೆಯಾಗಿದೆ. 3000 ವರ್ಷಗಳ ಹಿಂದಿನ ಕಾಲದಲ್ಲಿ ಯುದ್ಧಕೈದಿಗಳಾಗಿ ಸೆರೆ ಸಿಕ್ಕಿದ್ದ ಶತ್ರುಗಳ ಯೋಧರ ಬಲಗೈಯ ಮುಂಗೈ ಇದಾಗಿದ್ದು ಇದರಲ್ಲಿ 11 ಪುರುಷರ ಕೈಗಳಾಗಿದ್ದರೆ 1 ಮಹಿಳೆಯ ಕೈಯಾಗಿದೆ.

15ನೇ ರಾಜವಂಶಕ್ಕೆ ಸೇರಿದ ಹೈಕ್ಸೋಸ್ ಅರಮನೆಯ ಸಿಂಹಾಸನದ ಕೋಣೆಯ ಮುಂಭಾಗದ ಅಂಗಳದಲ್ಲಿ 3 ಹೊಂಡಗಳಲ್ಲಿ ಈ ಕತ್ತರಿಸಿದ ಕೈಗಳು ಪತ್ತೆಯಾಗಿವೆ ಎಂದು ಜರ್ಮನ್ ಪುರಾತತ್ವ ಸಂಸ್ಥೆಯ ಜೂಲಿಯಾ ಗ್ರೆಸ್ಕಿ ನೇತೃತ್ವದ ಸಂಶೋಧಕರ ತಂಡದ ವರದಿ ಹೇಳಿದೆ. ಈಜಿಪ್ಟ್ ನಲ್ಲಿ ಪುರಾತತ್ವ ಶಾಸ್ತ್ರಜ್ಞರು ಇದೇ ಮೊದಲಬಾರಿಗೆ ಅಂಗಚ್ಛೇದಿತ ಕೈಗಳನ್ನು ಪತ್ತೆಹಚ್ಚಿ ವಿಶ್ಲೇಷಣೆ ನಡೆಸಿದ್ದಾರೆ ಎಂದು ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಗಿನ ಕಾಲದಲ್ಲಿ ಈಜಿಪ್ಟ್ ನಲ್ಲಿದ್ದ ಆಘಾತಕಾರಿ ಆಚರಣೆಯತ್ತ ಈ ಸಂಶೋಧನೆ ಬೆರಳು ತೋರಿಸುತ್ತದೆ. ಬಹುಷಃ ಯುದ್ಧದಲ್ಲಿ ಸೆರೆಸಿಕ್ಕ ಶತ್ರು ಸೈನಿಕರ ಹಸ್ತಗಳನ್ನು ಕತ್ತರಿಸಿ ಸಾರ್ವಜನಿಕರ ದರ್ಶನಕ್ಕಾಗಿ ಹೊಂಡಕ್ಕೆ ಎಸೆದಿರುವ ಸಾಧ್ಯತೆಯಿದೆ. ಇಂತಹ ಆಚರಣೆಯ ಕುರಿತು ಗೋರಿಗಳಲ್ಲಿ ಅಥವಾ ದೇವಾಲಯದ ಗೋಡೆಗಳಲ್ಲಿ ಚಿತ್ರಗಳ ಮೂಲಕ ಮಾಹಿತಿ ನೀಡಿರುವ ದಾಖಲೆಯಿದೆ. ಆದರೆ ವ್ಯಕ್ತಿಗಳ ಕತ್ತರಿಸಲ್ಪಟ್ಟ ಹಸ್ತ ಇದೇ ಪ್ರಥಮ ಬಾರಿಗೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ.

share
Next Story
X