Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಾರಾ ಪ್ರಚಾರಕರು ಅಭಿನಯಿಸುವ ಸಿನೆಮಾ...

ತಾರಾ ಪ್ರಚಾರಕರು ಅಭಿನಯಿಸುವ ಸಿನೆಮಾ ಪ್ರದರ್ಶನಕ್ಕೆ ನಿರ್ಬಂಧವಿಲ್ಲ: ಚುನಾವಣಾಧಿಕಾರಿ

ಇ-ಪತ್ರಿಕೆಯಲ್ಲಿ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯ

6 April 2023 6:52 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಾರಾ ಪ್ರಚಾರಕರು ಅಭಿನಯಿಸುವ ಸಿನೆಮಾ ಪ್ರದರ್ಶನಕ್ಕೆ ನಿರ್ಬಂಧವಿಲ್ಲ: ಚುನಾವಣಾಧಿಕಾರಿ
ಇ-ಪತ್ರಿಕೆಯಲ್ಲಿ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯ

ಬೆಂಗಳೂರು, ಎ.6:  'ನೀತಿ ಸಂಹಿತೆ ಜಾರಿಗೂ ಮುನ್ನ ಜಾರಿಯಲ್ಲಿರುವ ಕಾನೂನಡಿ ನೂರು ಕೋಟಿಗೂ ಹೆಚ್ಚು ಮೌಲ್ಯದಷ್ಟು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಾರಾ ಪ್ರಚಾರಕರು ಅಭಿನಯಿಸುವ ವಾಣಿಜ್ಯ ಉದ್ದೇಶದ ಚಲನಚಿತ್ರ ಪ್ರದರ್ಶನಕ್ಕೆ ನಿರ್ಬಂಧವಿಲ್ಲ. ಆದರೆ ರಾಜಕೀಯ ರೀತಿಯ ವಿಚಾರವಿದ್ದರೆ ಪ್ರದರ್ಶನಕ್ಕೆ ಅವಕಾಶವಿಲ್ಲ' ಎಂದು ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಸಷ್ಟಪಡಿಸಿದ್ದಾರೆ. 

ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯ ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಹಮ್ಮಿಕೊಳ್ಳಲಾದ ವಿಧಾನಸಭೆಯ ಚುನಾವಣೆ ಕುರಿತ ರಾಜ್ಯ ಮಟ್ಟದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದರೆ ಎಫ್‍ಐಆರ್ ದಾಖಲಿಸಬಹುದು. ಅಧಿಕಾರದಲ್ಲಿರುವ ಪಕ್ಷ ಮತದಾರರ ಮೇಲೆ ಪರಿಣಾಮ ಬೀರುವಂತಹ ಯೋಜನೆಗಳು, ಹೊಸ ಕಾರ್ಯಕ್ರಮಗಳನ್ನು ಮಾಡಬಾರದು. ಹೊಸ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮಾಡಬಾರದು. ಸಭೆ ಕರೆಯುವಂತಿಲ್ಲ. ಪಕ್ಷಗಳು ವೈಯಕ್ತಿಕ ನಿಂದನೆ ಮಾಡಬಾರದು. ಅಧಿಕಾರಿಗಳು ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡಬಾರದು. ಪ್ರೊಟೊಕಾಲ್, ಸಭೆಗಳಲ್ಲಿ ಭಾಗವಹಿಸಬಾರದು ಎಂದರು.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಜಾಹಿರಾತು ನೀಡುವ ರಾಜಕೀಯ ಪಕ್ಷ, ರಾಜಕೀಯ ವ್ಯಕ್ತಿಗಳು ಪೂರ್ವಾನುಮತಿ ಪಡೆಯಬೇಕು. ವರ್ಷವಿಡೀ ಪ್ರಕಟ ಮಾಡುವ ರಾಜಕೀಯ ಪ್ರೇರಿತ ಜಾಹೀರಾತಿಗೂ ಇದು ಅನ್ವಯವಾಗುತ್ತದೆ. ಈ ಜಾಹಿರಾತಿನಲ್ಲಿ ವೈಯಕ್ತಿಕ ನಿಂದನೆ, ಜಾತಿ, ಧರ್ಮ ಸೂಚಿಸುವ ಯಾವುದೇ ಉಲ್ಲೇಖವಿರಬಾರದು. ನಾಮಪತ್ರ ಸಲ್ಲಿಕೆ ಆರಂಭವಾದ ಮೇಲೆ ವೆಚ್ಚವನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿ ಪರ ಅಥವಾ ವಿರುದ್ಧವಾಗಿ ಪ್ರಕಟವಾಗುವ ಸುದ್ದಿಗಳು ಸುಳ್ಳುಸುದ್ದಿ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾತನಾಡಿ, ‘ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ವಿಧಾನಸಭಾ ಚುನಾವಣಾ ಮಾಹಿತಿ ಪ್ರಕಟಿಸುವ ವೇಳೆ ಚುನಾವಣಾ ನೀತಿ ಸಂಹಿತೆಯನ್ನು ಪಾಲಿಸುವುದರ ಜೊತೆಗೆ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಕರೆ ನೀಡಿದ್ದಾರೆ.

‘ಚುನಾವಣೆಯಲ್ಲಿ ಮಾಧ್ಯಮದ ಪಾತ್ರ ಪ್ರಮುಖವಾಗಿದ್ದು, ಮಾಧ್ಯಮದವರು ಚುನಾವಣೆಯಲ್ಲಿ ಹೇಗೆ ಎಚ್ಚರಿಕೆ ವಹಿಸಬೇಕು ಎನ್ನುವುದರ ಕುರಿತು ಅರಿವು ಮೂಡಿಸಲು ಈ ಕಾರ್ಯಾಗಾರ ನಡೆಸಲಾಗಿದೆ ಎಂದರು.

ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ ಮಾಡುವ ಮುನ್ನ ಎಂಸಿ ಅಂಡ್ ಎ ಕಮಿಟಿಯ ಪೂರ್ವ ಪ್ರಮಾಣಿಕರಣ ಪಡೆದಿರಬೇಕು. ಮುದ್ರಣ ಮಾಧ್ಯಮಕ್ಕೆ ಮತದಾನದ ಮುಂಚಿನ 48 ಗಂಟೆಗಳ ಅವಗೆ ಅನ್ವಯವಾಗಲಿದೆ. ಚುನಾವಣಾ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಅವರು ತಿಳಿಸಿದರು.

ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಸೂರ್ಯಸೇನ್ ಮಾತನಾಡಿ, ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣಾ ಆಯೋಗವು ನಿಗಾ ಇಟ್ಟಿದ್ದು, ಜಾಹೀರಾತುಗಳನ್ನು ಪೂರ್ವಾನುಮತಿ ಪಡೆದು ಪ್ರಸಾರ ಮಾಡಬೇಕೆಂದರು ಎಂದರು. ಕಾರ್ಯಾಗಾರದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಗೋಷ್, ವಾರ್ತಾ ಇಲಾಖೆಯ ನಿರ್ದೇಶಕ ಡಿ.ಪಿ.ಮುರಳೀಧರ್ ಉಪಸ್ಥಿತರಿದ್ದರು.

ಇ-ಪತ್ರಿಕೆಯಲ್ಲಿ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯ: ‘ಮುದ್ರಣ ಮಾಧ್ಯಮದ ಇ-ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಅಗತ್ಯ. ರಾಜಕೀಯಕ್ಕೆ ಸಂಬಂಧಿಸಿದ ಜಾಹೀರಾತಿನಲ್ಲಿನ ಅಂಶಗಳು ಮಾಧ್ಯಮ ಪ್ರಮಾಣೀಕರಣ ಮತ್ತು ಪರಿಶೀಲನಾ ಸಮಿತಿಯಿಂದ ಪ್ರಮಾಣಿಕರಿಸಿದ ಜಾಹೀರಾತನ್ನು ಪ್ರಕಟಿಸಬೇಕು ಹಾಗೂ ವಿಡಿಯೊ ವ್ಯಾನ್ ಪ್ರಚಾರಕ್ಕೆ ಪ್ರಮಾಣ ಪತ್ರ ಪಡೆಯುವುದು ಅಗತ್ಯ. ಎಂಸಿಅಂಡ್‍ಎ ಅನುಮತಿ ಇರುವ ಸರ್ಟಿಫಿಕೇಟ್ ಇಲ್ಲದಿದ್ದರೆ ಪ್ರಕಟ ಮಾಡಿದ್ದ ಮಾಧ್ಯಮದವರು ಜವಾಬ್ದಾರರಾಗುತ್ತಾರೆ’

-ವೆಂಕಟೇಶ್ ಕುಮಾರ್, ಅಪರ ಮುಖ್ಯ ಚುನಾವಣಾಧಿಕಾರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X