Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ 29ರಿಂದ ಶಾಲೆ ಆರಂಭ, ಅ.8ರಿಂದ ದಸರಾ...

ಮೇ 29ರಿಂದ ಶಾಲೆ ಆರಂಭ, ಅ.8ರಿಂದ ದಸರಾ ರಜೆ

2023-24ನೇ ಶೈಕ್ಷಣಿಕ ವರ್ಷದ ವೇಳಾ ಪಟ್ಟಿ ಪ್ರಕಟ

7 April 2023 6:04 PM IST
share
ಮೇ 29ರಿಂದ ಶಾಲೆ ಆರಂಭ, ಅ.8ರಿಂದ ದಸರಾ ರಜೆ
2023-24ನೇ ಶೈಕ್ಷಣಿಕ ವರ್ಷದ ವೇಳಾ ಪಟ್ಟಿ ಪ್ರಕಟ

ಬೆಂಗಳೂರು, ಎ.6: ರಾಜ್ಯ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಸಂಬಂಧಿಸಿದಂತೆ ಸರಕಾರವು 2023-24ನೆ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಂದು ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿವೆ. 

ಪ್ರಸಕ್ತ ವರ್ಷದಲ್ಲಿ ಮೇ 29ರಿಂದ ಅ.7ರವೆರೆಗೆ ಶಾಲಾ ತರಗತಿಗಳು ನಡೆಯಲಿವೆ. ಅ.8ರಿಂದ ಅ.24ವರೆಗೆ ದಸರಾ ರಜೆಗಳು ಇರಲಿದ್ದು, ಅ.25ರಿಂದ ಎರಡನೆಯ ಅವಧಿಗೆ ಶಾಲೆಗಳು ಆರಂಭವಾಗುತ್ತವೆ. ಬೇಸಿಗೆ ರಜೆಗಳು 2024ರ ಎ.10ರಿಂದ ಆರಂಭವಾಗಿ ಮೇ 28ಕ್ಕೆ ಅಂತ್ಯವಾಗುತ್ತವೆ ಎಂದು ಇಲಾಖೆಯು ವೇಳಾಪಟ್ಟಿಯಲ್ಲಿ ತಿಳಿಸಿವೆ. 

ಪ್ರಸಕ್ತ ವರ್ಷದ 365 ದಿನಗಳ ಪೈಕಿ 121 ರಜೆ ದಿನಗಳಾಗಿದ್ದು, 244 ದಿನಗಳ ಶಾಲಾ ಕರ್ತವ್ಯದ ದಿನಗಳಾಗಿರುತ್ತವೆ. ಈ ಶಾಲಾ ಕರ್ತವ್ಯ ದಿನಗಳಲ್ಲಿ 26 ದಿನಗಳು ಪರೀಕ್ಷೆ ಮತ್ತು ಮೌಲ್ಯಂಕನ ಕಾರ್ಯಕ್ಕೆ ಬಳಕೆಯಾದರೆ, ಪಠ್ಯೇತರ ಚಟುವಟಿಕೆಗಳಿಗೆ 24 ದಿನಗಳು ಹಾಗೂ ಮೌಲ್ಯಮಾಪನಾ ಹಾಗೂ ಫಲಿತಾಂಶ ವಿಶ್ಲೇಷಣೆಗೆ 10ದಿನಗಳು ಬಳಕೆಯಾಗುತ್ತದೆ. 4 ದಿನಗಳು ಸ್ಥಳೀಯ ರಜೆಗೆಳಿಗೆ ಮೀಸಲಿರಿಸಿದರೆ, ಭೋದನೆ-ಕಲಿಕೆಗೆ ಕೇವಲ 180 ದಿನಗಳು ಮಾತ್ರ ಉಳಿಯಲಿವೆ ಎಂದು ಶಿಕ್ಷಣ ಇಲಾಖೆಯು ಸ್ಪಷ್ಟಪಡಿಸಿದೆ.

ಎ.10ರಂದೇ ಎಲ್ಲ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಗಳನ್ನು ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದ್ದು, ಸಮವಸ್ತ್ರ ಧರಿಸಿ ಪಠ್ಯಪುಸ್ತಕಗಳೊಂದಿಗೆ ಶಾಲೆಗೆ ಹಾಜರಾಗಬೇಕು. ಇನ್ನು ಬೇಸಿಗೆ ರಜೆ ಬರುವ ಕಾರಣ ಶಾಲಾ ದಾಸ್ತಾನು ಹಾಗೂ ದಾಖಲೆಗಳನ್ನು ಸುರಕ್ಷಿತವಾಗಿಡಬೇಕು. ಮೇ 10ರಂದು ನಡೆಯುವ ಸಾರ್ವತ್ರಿಕ ಚುನಾವಣೆಗೆ ಶಾಲೆಗಳನ್ನು ಮತಗಟ್ಟೆ ಕೇಂದ್ರಗಳಾಗಿ ಬಳಸಿಕೊಳ್ಳುವುದರಿಂದ ಸಹಕರಿಸಬೇಕು ಎಂದು ಸೂಚಿಸಿದೆ. 

ಎ.10ರಂದು 2022-23ನೇ ಶೈಕ್ಷಣಿಕ ವರ್ಷ ಮುಕ್ತಾಯವಾಗುತ್ತಿದ್ದು, 1 ರಿಂದ 9ನೆ ತರಗತಿಗಳ ಫಲಿತಾಂಶವನ್ನು ಇಂದು(ಎ.8) ಪ್ರಕಟಿಸಲಾಗುತ್ತದೆ. ಇಂದು(ಎ.8)ರಂದು ಪ್ರೌಢಶಾಲಾ ವಿಭಾಗದಲ್ಲಿ ಹಾಗೂ ಎ.10ರಂದು ಪ್ರಾಥಮಿಕ ಶಾಲಾ ಹಂತದಲ್ಲಿ ಸಮುದಾಯ ದತ್ತ ಶಾಲೆ ಮತ್ತು ಪೋಷಕರ ಸಭೆ ನಡೆಯಲಿದೆ. ಎ.14ರಂದು ಕಡ್ಡಾಯವಾಗಿ ಎಲ್ಲ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚಾರಿಸಬೇಕು ಎಂದು ಇಲಾಖೆ ತಿಳಿಸಿದೆ. 

ಕ್ರಿಸ್‍ಮಸ್‍ಗೆ ಪರಿಶೀಲಿಸಿ ರಜೆ ನೀಡಲು ಸೂಚನೆ: 

ಕ್ರಿಸ್‍ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲ ಉಪನಿರ್ದೇಶಕರಿಗೆ ಸಲ್ಲಿಸಿದ್ದಲ್ಲಿ, ಅವರು ಅದನ್ನು ಪರಿಶೀಲಿಸಿ ನಿರ್ಧರಿಸಬೇಕು. ಹಾಗೆಯೇ ಡಿಸೆಂಬರ್‍ನಲ್ಲಿ ನೀಡುವ ಕ್ರಿಸ್‍ಮಸ್ ರಜೆ ಅವಧಿಯನ್ನು ಅಕ್ಟೋಬರ್‍ನ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು 2023-24ನೆ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪ್ರಕಟಿಸಿದೆ. 

share
Next Story
X