Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧಿತ ಮಾಜಿ ನೌಕಾಪಡೆ ಅಧಿಕಾರಿಗಳ...

ಬಂಧಿತ ಮಾಜಿ ನೌಕಾಪಡೆ ಅಧಿಕಾರಿಗಳ ಬಿಡುಗಡೆಗೆ ಖತರ್‌ ಮೇಲೆ ಭಾರತ ಒತ್ತಡ ಹೇರುವುದಿಲ್ಲ: ವಿದೇಶಾಂಗ ಸಚಿವಾಲಯ

ಅಧಿಕಾರಿಗಳ ಬಿಡುಗಡೆಗೆ ಖತರ್‌ ಮೇಲೆ ಒತ್ತಡ ಹೇರಲು ಪ್ರಧಾನಿ ಹಿಂಜರಿಕೆ: ಕಾಂಗ್ರೆಸ್ ಆರೋಪ

7 April 2023 6:16 PM IST
share
ಬಂಧಿತ ಮಾಜಿ ನೌಕಾಪಡೆ ಅಧಿಕಾರಿಗಳ ಬಿಡುಗಡೆಗೆ ಖತರ್‌ ಮೇಲೆ ಭಾರತ ಒತ್ತಡ ಹೇರುವುದಿಲ್ಲ: ವಿದೇಶಾಂಗ ಸಚಿವಾಲಯ
ಅಧಿಕಾರಿಗಳ ಬಿಡುಗಡೆಗೆ ಖತರ್‌ ಮೇಲೆ ಒತ್ತಡ ಹೇರಲು ಪ್ರಧಾನಿ ಹಿಂಜರಿಕೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ: ಖತರ್‌ನಲ್ಲಿ (Qatar) ಬಂಧನದಲ್ಲಿರುವ ಭಾರತೀಯ ನೌಕಾಪಡೆಯ ಎಂಟು ನಿವೃತ್ತ ಅಧಿಕಾರಿಗಳ ಬಿಡುಗಡೆಗೆ ಭಾರತ ಸರ್ಕಾರ ಪ್ರಯತ್ನಗಳನ್ನು ನಡೆಸುತ್ತಿಲ್ಲ ಹಾಗೂ ಅವರ ಬಿಡುಗಡೆಗೆ ಖತರ್‌ ಮೇಲೆ ಒತ್ತಡ ಹೇರಲು ಪ್ರಧಾನಿ ನರೇಂದ್ರ ಮೋದಿ ಹಿಂಜರಿಕೆ ತೋರುತ್ತಿದ್ದಾರೆಂದು ಕಾಂಗ್ರೆಸ್‌ ವಕ್ತಾರ ಜೈರಾಂ ರಮೇಶ್‌ ಆರೋಪಿಸಿದ ಬೆನ್ನಿಗೇ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾಋಗಳ ಸಚಿವಾಲಯದ ವಕ್ತಾರ ಅರಿಂದಂ ಬಾಗ್ಚಿ, ಭಾರತವು ಖತರ್‌ ದೇಶದ ಕಾನೂನು ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಖತರ್‌ ಜೊತೆಗಿನ ಸಂಬಂಧ ವೃದ್ಧಿಸಲು ಮೋದಿ ಸರ್ಕಾರ ಬಹಳಷ್ಟು ಹೂಡಿಕೆ ಮಾಡಿದೆ ಎಂದು ಹೇಳಿದ್ದ ಜೈರಾಂ ರಮೇಶ್‌, ಯಾವುದೇ ಆರೋಪಗಳಿಲ್ಲದೆ ಆಗಸ್ಟ್‌ 30, 2022 ರಿಂದ ಬಂಧನದಲ್ಲಿರುವ ಈ ಮಾಜಿ ಅಧಿಕಾರಿಗಳ ಶೀಘ್ರ ಬಿಡುಗಡೆಗೆ ಯಾವುದೇ ಯತ್ನ ನಡೆಸಿಲ್ಲ ಎಂದು  ಆರೋಪಿಸಿದ್ದರು. ಅದಾನಿ ಇಲೆಕ್ಟ್ರಿಸಿಟಿ ಮುಂಬೈ ಇದರಲ್ಲಿ ಖತರ್‌ನ ಸಾವರಿನ್‌ ವೆಲ್ತ್‌ ಫಂಡ್‌  ಪ್ರಮುಖ ಹೂಡಿಕೆದಾರನಾಗಿರುವುದು ಇದಕ್ಕೆ ಕಾರಣವೇ, ಇದೇ ಕಾರಣಕ್ಕೆ ಬಂಧಿತ ಮಾಜಿ ಅಧಿಕಾರಿಗಳ ಕುಟುಂಬ ಸದಸ್ಯರು ಅವರ ಬಿಡುಗಡೆಗಾಗಿ ಅಲೆದಾಡುವಂತಾಗಿದೆಯೇ ಎಂದು ಜೈರಾಂ ರಮೇಶ್‌ ಪ್ರಶ್ನಿಸಿದ್ದರಲ್ಲದೆ ಸರಕಾರ ಈ ಕುಟುಂಬಗಳಿಗೆ ಸೂಕ್ತ ವಿವರಣೆ ನೀಡಬೇಕಾಗಿದೆ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಂ ಬಾಗ್ಚಿ, ಸರಕಾರ ಖತರ್‌ ಕಾನೂನು ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲ, ಆದರೆ  ಭಾರತೀಯ ನಾಗರಿಕರ ವಿರುದ್ಧದ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ ಎಂದು ಹೇಳಿದ್ದಾರೆ.

ಬಂಧಿತ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಖತರ್‌ ರಕ್ಷಣಾ ಪಡೆಗಳ ಜೊತೆ ಕೆಲಸ ಮಾಡಿವ ಖತರ್‌ನ ಕನ್ಸಲ್ಟೆನ್ಸಿ ಸಂಸ್ಥೆಯೊಂದು ಉದ್ಯೋಗಕ್ಕೆ ಸೇರಿಸಿಕೊಂಡಿತ್ತು ಹಾಗೂ ಅವರು ಖತರ್‌ ನೌಕಾಪಡೆಯಲ್ಲಿ ತರಬೇತಿಯಲ್ಲಿ ಶಾಮೀಲಾಗಿದ್ದರು. ಅವರ ಬಂಧನಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲವಾದರೂ ಅವರ ಬಂಧನಕ್ಕಿಂತ ಮೂರು ತಿಂಗಳ ಹಿಂದೆ ಅವರ  ಹಾಗೂ ಭಾರತೀಯ ಅಧಿಕಾರಿಯೊಬ್ಬರ ನಡುವೆ ನಡೆದ ʻಸ್ನೇಹಮಯ ಸಂಭಾಷಣೆʼ ಇದಕ್ಕೆ ಕಾರಣವಾಗಿರಬಹುದೆಂಬ ಶಂಕೆಯಿದೆ.

ಇದನ್ನೂ ಓದಿ: ಅನಿಲ್‌ ಆ್ಯಂಟನಿಯನ್ನು ಬಿಜೆಪಿ ಕರಿಬೇವಿನ ಸೊಪ್ಪಿನಂತೆ ಬಳಸಿ ಎಸೆಯುತ್ತಾರೆ: ಸಹೋದರ ಅಜಿತ್‌ ಆ್ಯಂಟನಿ

share
Next Story
X