Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾವಿಗೆ ಬಿದ್ದ ಕಿರಿಯ ಸಹೋದರನನ್ನು...

ಬಾವಿಗೆ ಬಿದ್ದ ಕಿರಿಯ ಸಹೋದರನನ್ನು ರಕ್ಷಿಸಿದ ಎಂಟು ವರ್ಷದ ಬಾಲಕಿ ಫಾತಿಮಾ

8 April 2023 3:57 PM IST
share
ಬಾವಿಗೆ ಬಿದ್ದ ಕಿರಿಯ ಸಹೋದರನನ್ನು ರಕ್ಷಿಸಿದ ಎಂಟು ವರ್ಷದ ಬಾಲಕಿ ಫಾತಿಮಾ

ಮವೆಲಿಕ್ಕರ: ಮಂಗಳವಾರ ಸಂಜೆ 5 ಗಂಟೆ ಸಮಯದಲ್ಲಿ ಬಾವಿಗೆ ಬಿದ್ದ ತನ್ನ ಎರಡು ವರ್ಷದ ಸಹೋದರನನ್ನು ಎಂಟು ವರ್ಷದ ಬಾಲಕಿಯೊಬ್ಬಳು ಅಸಾಧಾರಣ ಶೌರ್ಯ ಪ್ರದರ್ಶಿಸಿ ರಕ್ಷಿಸಿರುವ ಘಟನೆ ಮಂಕಾಂಕುಳಿಯಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬವೊಂದರ ದಿಯಾ ಫಾತಿಮಾ ಎಂಬ ಬಾಲಕಿಯು ತನ್ನ ಕಿರಿಯ ಸಹೋದರ ಐವಾನ್ (ಅಕ್ಕು) ಅನ್ನು ರಕ್ಷಿಸಿದ್ದಾಳೆ ಎಂದು onmanorama.com ವರದಿ ಮಾಡಿದೆ.

ಅವರ ತಾಯಿ ಶಾಜಿಲಾ ಮನೆಯ ಅಂಗಳದಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದರೆ, ದಿಯಾ ಹಾಗೂ ಆಕೆಯ ಕಿರಿಯ ಸಹೋದರಿ ದುನಿಯಾ ಒಣಗಿ ಹಾಕಿದ್ದ ಬಟ್ಟೆಗಳನ್ನು ತೆಗೆಯುತ್ತಿದ್ದರು. ಈ ಸಂದರ್ಭದಲ್ಲಿ ಯಾರಿಗೂ ಐವಾನ್ ಮೇಲೆ ಗಮನವಿಲ್ಲದೆ ಇದ್ದುದರಿಂದ ಐವಾನ್ ಬಾವಿಯ ಪಕ್ಕವಿದ್ದ ಪಂಪ್‌ಸೆಟ್‌ ಮೇಲೆ ಹೆಜ್ಜೆಯಿಟ್ಟು ಬಾವಿಯನ್ನು ಮುಚ್ಚಿದ್ದ ಕಬ್ಬಿಣದ ಕವಚದ ಮೇಲೆ ಜಿಗಿದಿದ್ದಾನೆ. ಕವಚದ ಮಧ್ಯಭಾಗ ತುಕ್ಕು ಹಿಡಿದಿದ್ದುದರಿಂದ ಅದು ಮುರಿದು ಆತ ಇಪ್ಪತ್ತು ಅಡಿಯ ಆಳವಿರುವ ಬಾವಿಗೆ ಬಿದ್ದಿದ್ದಾನೆ.

ಬಾವಿಗೆ ಬಿದ್ದ ಸದ್ದು ಕೇಳುತ್ತಲೇ ಬಾವಿಯತ್ತ ದೌಡಾಯಿಸಿರುವ ದಿಯಾ, ಬಾವಿಯಲ್ಲಿ ತನ್ನ ಕಿರಿಯ ಸಹೋದರ ಹೋರಾಡುತ್ತಿರುವುದನ್ನು ಕಂಡಿದ್ದಾಳೆ. ಕೂಡಲೇ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ ಬಾವಿಗೆ ಇಳಿ ಬಿಟ್ಟಿದ್ದ ಪಿವಿಸಿ ಕೊಳವೆಯನ್ನು ಹಿಡಿದುಕೊಂಡು ಬಾವಿಗೆ ಇಳಿದಿದ್ದಾಳೆ. ಒಂದು ಕೈಯಲ್ಲಿ ಪಿವಿಸಿ ಕೊಳವೆ ಹಿಡಿದುಕೊಂಡು, ಮತ್ತೊಂದು ಕೈಯಿಂದ ಐವಾನ್‌ನನ್ನು ತನ್ನತ್ತ ಸೆಳೆದುಕೊಂಡಿದ್ದಾಳೆ. ಶಾಜಿಲಾರ ಕಿರುಚಾಟ ಕೇಳಿದ ನೆರೆಯವರಾದ ಅಖಿಲ್ ಚಂದ್ರನ್, ಬಿನೋಯ್ ಹಾಗೂ ವಲಸೆ ಕಾರ್ಮಿಕ ಮುನ್ನಾ ಮನೆಯತ್ತ ಧಾವಿಸಿ ಬಂದು, ಇಬ್ಬರೂ ಮಕ್ಕಳನ್ನು ಬಾವಿಯಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಐವಾನ್ ತಲೆಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆತನಿಗೆ ಅಲಪುಳ್ಳ ವೈದ್ಯಕೀಯ ಕಾಲೇಜಿನ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ದಿಯಾಗೆ ಯಾವುದೇ ಗಾಯಗಳಾಗಿಲ್ಲ. ಆಲಪ್ಪುಝ ನಿವಾಸಿಯಾದ ಐವಾನ್ ತಂದೆ ಸನಲ್ ಎರುಮಲಿಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ದಿಯಾ ವೆಟ್ಟಿಯಾರ್‌ನಲ್ಲಿರುವ ಇರಟ್ಟಪಲ್ಲಿಕೂದಮ್ ಸರ್ಕಾರಿ ಶಾಲೆಯಲ್ಲಿ ಮೂರನೆ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ.

ಇದನ್ನೂ ಓದಿ: ತಾವೇ ಗೋಹತ್ಯೆಗೈದು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿದ್ದ ಹಿಂದೂ ಮಹಾಸಭಾದ ಕಾರ್ಯಕರ್ತರ ಬಂಧನ: ವರದಿ

share
Next Story
X