Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಪ್ರಜಾ ವಿಜಯ ಸಮಾರಂಭ

ಕಾರ್ಕಳ: ಪ್ರಜಾ ವಿಜಯ ಸಮಾರಂಭ

8 April 2023 10:10 PM IST
share
ಕಾರ್ಕಳ: ಪ್ರಜಾ ವಿಜಯ ಸಮಾರಂಭ

ಕಾರ್ಕಳ: ಹಿರಿಯರಾಗಿರುವ ಪ್ರಮೋದ್ ಮುತಾಲಿಕ್ ನಮಗೆ ಮಾರ್ಗದರ್ಶಕರು. ಇಡೀ ಜೀವನವನ್ನು ಹಿಂದುತ್ವ ಕ್ಕಾಗಿ ಮುಡಿಪಾಗಿಟ್ಟವರು. ನಮ್ಮ ಸಂಸ್ಕೃತಿಗೆ ತೊಂದರೆಯಾದರೆ ಅದರ ವಿರುದ್ಧ ಸಿಡಿದು ನಿಲ್ಲುವ ವ್ಯಕ್ತಿ ಪ್ರಮೋದ್ ಮುತಾಲಿಕ್ ಎಂದು ತೆಲಂಗಾಣದ ಶಾಸಕ ರಾಜಸಿಂಗ್‌ ಠಾಕೂರ್‌ ಹೇಳಿದರು.

ಅವರು ಎ. 8ರಂದು ಹೆಬ್ರಿ ಬಸ್‌ ನಿಲ್ದಾಣ ವಠಾರದಲ್ಲಿ ಪ್ರಮೋದ್‌ ಮುತಾಲಿಕ್‌ ಅಭಿಮಾನಿ ಬಳಗದ ವತಿಯಿಂದ ನಡೆದ ಪ್ರಜಾ ವಿಜಯ ಸಮಾರಂಭದಲ್ಲಿ ಮಾತನಾಡಿದರು.

ಮುತಾಲಿಕ್‌ ಶ್ರೀರಾಮ ಸೇನೆ ಸ್ಥಾಪಿಸಿ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದಲ್ಲಿ ಹಿಂದೂಗಳನ್ನು ಒಂದು ಗೂಡಿಸುವ ಕಾರ್ಯ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಏನು ಮಾಡದೇ ತನ್ನ ಜೀವನವನ್ನು ಸಮಾಜಕ್ಕಾಗಿ, ಹಿಂದುತ್ವಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಇದರ ಪರಿಣಾಮ ನೂರಕ್ಕೂ ಅಧಿಕ ಕೇಸು ಅವರ ಮೇಲೆ ದಾಖಲಾಗಿ ಕೋರ್ಟ್‌ ಅಲೆಯುವಂತಾಗಿದೆ. ಇವರೊಂದಿಗೆ ನನ್ನದೂ ಒಂದು ಪ್ರಕರಣವಿದ್ದು ಅದಕ್ಕಾಗಿ ಬೆಂಗಳೂರು ಬಂದು ಹೋಗುತ್ತೇನೆ ಎಂದು ರಾಜಸಿಂಗ್‌ ಹೇಳಿದರು.

ಇವತ್ತು ನಾನು ಧರ್ಮ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ ಪ್ರಮೋದ್ ಜೀಯಾದರೆ ಇನ್ನೊಂದು ಕಡೆಯಲ್ಲಿ ಪಕ್ಷವಿದೆ. ಯಾರನ್ನು ಸಮರ್ಥಿಸಬೇಕು ? ಯಾರ ಪರ ಮಾತನಾಡಬೇಕೆಂದು ಗೊತ್ತಾಗುತ್ತಿಲ್ಲ. ನಿಮಗೆ ಯಾವ ರೀತಿಯ ನಾಯಕ ಬೇಕು ಎಂಬುವುದನ್ನು ನೀವೇ ಅರಿಯಿರಿ ಎಂದು ರಾಜಸಿಂಗ್‌ ಸೇರಿದ ಜನರಲ್ಲಿ ಹೇಳಿದರು.

ಭಾರತಕ್ಕೆ ಪ್ರಧಾನಿ ರೂಪದಲ್ಲಿ ಮೋದಿಯಂತಹ ಮಹಾ ನಾಯಕ ಸಿಕ್ಕಿದ್ದಾರೆ. ಅವರು ನಮ್ಮ ದೇಶದ ನಕ್ಷೆಯನ್ನೇ ಬದಲಿಸಿದ್ದಾರೆ. ಮೋದಿಯ ಆಡಳಿತ ವೈಖರಿಯಿಂದ ಇಂದು ಪ್ರಪಂಚದ ಬಹುತೇಕ ರಾಷ್ಟ್ರಗಳು ಭಾರತಕ್ಕೆ ತಲೆಬಾಗಿ ನಮಿಸುತ್ತಿದೆ ಎಂದು ರಾಜಸಿಂಗ್‌ ಹೇಳಿದರು.

ಅನೇಕ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಆಡಳಿತ ನಡೆಸುತ್ತಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಸರಕಾರವಿದೆ. ಆದರೆ, ವ್ಯಕ್ತಿಗತವಾಗಿ ಜಾಸ್ತಿ ಏನೂ ಹೇಳಲು ಆಗುವುದಿಲ್ಲ. ನನಗೂ ಪ್ರೊಟೋಕಾಲ್ ಇದೆ. ಇದನ್ನು ನೀವು ಯೋಚಿಸಿ ನಿರ್ಧಾರ ಮಾಡಬೇಕು. ಯೋಗಿ ಆದಿತ್ಯನಾಥ್ ಇತಿಹಾಸ ರಚಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ರೌಡಿಗಳು ತಲೆ ಎತ್ತುವ ಮೊದಲು 10 ಬಾರಿ ಯೋಚಿಸುತ್ತಾರೆ. ತಲೆ ಎತ್ತಿದರೆ ಹೊಸಕಿ ಹಾಕಲಾಗುತ್ತಿದೆ. ರೌಡಿಸಂ ಮಾಡಿದರೆ ಮನೆ ಮೇಲೆ ಬುಲ್ಡೋಜರ್ ಹತ್ತಿಸಲಾಗುತ್ತದೆ ಎಂದು ರಾಜಸಿಂಗ್‌ ಹೇಳಿದರು.

ನಾನು ಬರುವಾಗ ಪರ್ಪಲೆ ಮಂದಿರಕ್ಕೆ ಹೋಗಿದ್ದೆ. ಆ ಮಂದಿರದ ಮುಂದೆ ನಾನು ಶಿಲುಬೆ ನೋಡಿದೆ. ಸರಕಾರವು ಇಲ್ಲಿ ಸಹ ಬುಲ್ಡೋಜರ್ ಹರಿಸಬೇಕೆಂದು ಮನವಿ ಮಾಡುತ್ತೇನೆ. ಯಾರಾದರೂ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ ಮಾಡಿದಲ್ಲಿ ಕೂಡಲೇ ಬುಲ್ಡೋಜರ್ ಹರಿಸಿ ತೆರವುಗೊಳಿಸಬೇಕೆಂದು ರಾಜಸಿಂಗ್‌ ಹೇಳಿದರು.

ಕರ್ನಾಟಕದಲ್ಲಿ ಯೋಗಿ ಮಾದರಿಯಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ. ಈ ರಾಜ್ಯದಲ್ಲಿ ಬಹಳಷ್ಟು ಒಳ್ಳೆಯ ಕಾರ್ಯಗಳಾಗಿದೆ. ಅದನ್ನು ನಾನು ಸಹ ನೋಡಿದ್ದೇನೆ. 4% ಮೀಸಲಾತಿಯನ್ನು ಕಿತ್ತು ಬಿಸಾಡಿದ್ದಾರೆ. ಇದನ್ನು ನಮ್ಮವರಿಗೆ ನೀಡಿರುವುದು ಒಳ್ಳೆಯ ಬೆಳವಣಿಗೆ. ಹಿಜಾಬ್ ನಿಷೇಧ, ಗೋ ಹತ್ಯೆ ನಿಷೇಧಿಸಿರುವುದು ಒಳ್ಳೆಯ ಬೆಳವಣಿಗೆ. ಕರ್ನಾಟಕದಲ್ಲಿ ಮುಂದಿನ ಬಾರಿಯೂ ಬಿಜೆಪಿ ಸರಕಾರವೇ ಬರಲಿ ಎಂದು ಪ್ರಾರ್ಥಿಸುತ್ತೇನೆ. ಮುಂದಿನ ಬಾರಿ ಸರಕಾರ ಬಂದ ಸಮಯದಲ್ಲಿ ಹಂತಕರಿಗೆ ಗಲ್ಲು ಶಿಕ್ಷೆಯಾಗಲಿ. ಇದಕ್ಕಾಗಿ ತ್ವರಿತ ನ್ಯಾಯಾಲಯಗಳ ಸ್ಥಾಪನೆಯಾಗಲಿ. ಈ ಬಗ್ಗೆ ಧ್ವನಿ ಎತ್ತುವವರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ರಾಜಸಿಂಗ್‌ ಹೇಳಿದರು.

ಇವತ್ತಿಗೂ ಗೋವುಗಳನ್ನು ಕಳ್ಳತನ ಮಾಡಲಾಗುತ್ತಿದೆ. ತಡೆಯಲು ಹೋದ ಹಿಂದೂ ಸಹೋದರನನ್ನು ಹತ್ಯೆ ಮಾಡಲಾಗುತ್ತಿದೆ. ಗೋ ಮಾತೆಯು ಹಿಂದೂಗಳ ಭಕ್ತಿಯ ಪ್ರತೀಕವಾಗಿದೆ. ಅದರಲ್ಲಿ ದೇವರನ್ನು ಕಾಣುತ್ತೇವೆ. ಗೋ ಹತ್ಯೆ ನಿಷೇಧ ಕಾನೂನಿದ್ದರೂ ಗೋವುಗಳನ್ನು ಕಡಿಯಲಾಗುತ್ತಿದೆ. ಪ್ರಮೋದ್ ಮುತಾಲಿಕ್ ಹಾಗೂ ಶ್ರೀರಾಮ ಸೇನೆಯ ಕಾರ್ಯಕರ್ತರು ಗೋ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದಕ್ಕೆ ನಾನು ಅಭಿನಂದಿಸುತ್ತೇನೆ ಎಂದು ರಾಜಸಿಂಗ್‌ ಹೇಳಿದರು.

ರಮೇಶ್‌ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಸುಧೀರ್ ಹೆಬ್ರಿ, ವಿವೇಕಾನಂದ ಶೆಣೈ ಕಾರ್ಕಳ, ಸುಭಾಶ್ಚಂದ್ರ ಹೆಗ್ಡೆ, ಅಶ್ವಿನಿ ಶಿವಮೊಗ್ಗ, ದಿವ್ಯಾ ನಾಯಕ್, ರೂಪ ಶೆಟ್ಟಿ, ರಾಹುಲ್ ಮೇಸ್ತ, ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ವಿನಯ ರಾನಡೆ ಮಾಳ, ಆನಂದ ಅಡ್ಯಾರ್, ನಾಗೇಶ್ ಪೈ ಕಾರ್ಕಳ, ರಾಘವ ನಾಯಕ್, ಪ್ರವೀಣ್ ಕಾಂತರಗೋಳಿ, ಶ್ರೀರಾಮ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ರತ್ನಾವತಿ ನಾಯಕ್ ಹಿರ್ಗಾನ, ವಾಸುದೇವ ಶೆಟ್ಟಿಗಾರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹರೀಶ್ ಅಧಿಕಾರಿ ಸ್ವಾಗತಿಸಿದರು

share
Next Story
X