Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಫಾಸ್ಕಾ ಜಾಗರಣೆಯ ವಿಶೇಷ...

ಮಂಗಳೂರು: ಫಾಸ್ಕಾ ಜಾಗರಣೆಯ ವಿಶೇಷ ಬಲಿಪೂಜೆ

8 April 2023 10:19 PM IST
share
ಮಂಗಳೂರು: ಫಾಸ್ಕಾ ಜಾಗರಣೆಯ ವಿಶೇಷ ಬಲಿಪೂಜೆ

ಮಂಗಳೂರು: ನಗರದ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಫಾಸ್ಕಾ ಜಾಗರಣೆಯ ವಿಶೇಷ ಬಲಿಪೂಜೆಯು ಶನಿವಾರ ನಡೆಯಿತು.

ಈ ಸಂದರ್ಭ ಪ್ರವಚನ ನೀಡಿದ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ‘ಯೇಸುವಿನ ಪುನರುತ್ಥಾನದ ಮೂಲಕ ಮಾನವರು ಮರಣ ಎನ್ನುವುದು ಅಂತಿಮ ಘಟ್ಟವಲ್ಲ.  ಮರಣದ ನಂತರ ಪುನರುತ್ಥಾನದ ಮೂಲಕ ಹೊಸತನ ಬರುತ್ತದೆ ಎನ್ನುವ ಭರವಸೆ ಹುಟ್ಟುತ್ತದೆ ಎಂದು ಹೇಳಿದರು.

ಬೀಜವನ್ನು ಬಿತ್ತುವ ಮೂಲಕ ಅದು ಮೊಳಕೆಯೊಡೆದು ಗಿಡವಾಗುವಂತೆ ಯೇಸುವಿನ ಪುನರುತ್ಥಾನದ ಮೂಲಕ ಮಾನವ ಜಗತ್ತಿನಲ್ಲಿ ಹೊಸ ಭರವಸೆಯೊಂದು ಮೂಡುತ್ತದೆ. ಸಾವಿನ ನಂತರ ಕೂಡ ಬದುಕಿದೆ ಎನ್ನುವ ವಿಚಾರ ವನ್ನು ಕ್ರೈಸ್ತರು ಯೇಸುವಿನ ಪುನರುತ್ಥಾನದ ಮೂಲಕ ವಿಶ್ವಾಸವನ್ನು ಇಟ್ಟುಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.

ಬಲಿಪೂಜೆಯ ಮೊದಲು ಫಾಸ್ಕಾ ಜಾಗರಣೆಯ ಮೊಂಬತ್ತಿಯನ್ನು ಬೆಳಗಿಸುವ ಮೂಲಕ ಯೇಸುವಿನ ಪುನರುತ್ಥಾನದ ಜಾಗರಣೆಯನ್ನು ಮಾಡುವ ಜೊತೆಯಲ್ಲೇ ಹಳೆಯ ಒಡಂಬಡಿಕೆಯ ಐದು ಹಾಗೂ ಹೊಸ ಒಡಂಬಡಿಕೆಯ ಎರಡು ಅಧ್ಯಾಯಗಳನ್ನು ಓದಿ, ಕೀರ್ತನೆಯ ಮೂಲಕ ಪ್ರಾರ್ಥನೆಯ ವಿಧಿ ಸಾಗಿತು. ಪವಿತ್ರ ಸಂಸ್ಕಾರಕ್ಕೆ ಬಳಸುವ ಪವಿತ್ರ ಜಲದ ಮೇಲೆ  ಆರ್ಶೀವಾದ ಮತ್ತು ಆ ಬಳಿಕ ಬಲಿಪೂಜೆಯ ವಿಧಿಗಳು ನಡೆಯಿತು.

ರೊಸಾರಿಯೋ ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ಫಾ. ಆಲ್ಪ್ರೆಡ್ ಪಿಂಟೋ ಸಹಿತ ಹಲವು ಧರ್ಮಗುರುಗಳು ಉಪಸ್ಥಿತರಿದ್ದರು. ಕರಾವಳಿಯ ಬಹುತೇಕ ಚರ್ಚ್‌ಗಳಲ್ಲಿ ಶನಿವಾರ ಸಂಜೆಯ ವೇಳೆ  ಫಾಸ್ಕಾ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ನಡೆಯಿತು.  ನಗರದ ಮಿಲಾಗ್ರಿಸ್, ಉರ್ವ, ಅಶೋಕನಗರ, ಕೂಳೂರು, ಬಿಜೈ, ವಾಮಂಜೂರು, ಶಕ್ತಿನಗರದ ಚರ್ಚ್‌ಗಳಲ್ಲಿ ಫಾಸ್ಕಾ ಜಾಗರಣೆಯ ಬಲಿಪೂಜೆಗಳು ಸಾಗಿತು.

ಎ.9ರಂದು ಕ್ರೈಸ್ತರು ಯೇಸುವಿನ ಪುನರುತ್ಥಾನವಾಗಿರುವ ನೆನಪಿನ ಈಸ್ಟರ್ ಹಬ್ಬವನ್ನು  ಆಚರಣೆ ಮಾಡುತ್ತಾರೆ. ಈಸ್ಟರ್ ಹಬ್ಬದ ಆಚರಣೆಯ ಮೂಲಕ ನಲವತ್ತು ದಿನಗಳ ತಪಸ್ಸು ಕಾಲ ಅಂತ್ಯವಾಗುತ್ತದೆ.

ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ ಅವರು ರವಿವಾರ ಬಂಟ್ವಾಳ ಸಮೀಪದ ವಾಮದಪದವು ಚರ್ಚ್‌ನಲ್ಲಿ ಈಸ್ಟರ್ ಹಬ್ಬದ ಬಲಿಪೂಜೆಯನ್ನು ನೆರವೇರಿಸಲಿದ್ದಾರೆ.

share
Next Story
X