Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವುಹಾನ್ ಮಾರುಕಟ್ಟೆಯಿಂದ ಸಂಗ್ರಹಿಸಿದ...

ವುಹಾನ್ ಮಾರುಕಟ್ಟೆಯಿಂದ ಸಂಗ್ರಹಿಸಿದ ಕೋವಿಡ್ ಮೂಲದ ಕುರಿತ ವಿಶ್ಲೇಷಣೆ ಪ್ರಕಟ

8 April 2023 10:54 PM IST
share
ವುಹಾನ್ ಮಾರುಕಟ್ಟೆಯಿಂದ ಸಂಗ್ರಹಿಸಿದ ಕೋವಿಡ್ ಮೂಲದ ಕುರಿತ ವಿಶ್ಲೇಷಣೆ ಪ್ರಕಟ

ಬೀಜಿಂಗ್, ಎ.8: ಕೋವಿಡ್-19 ಸಾಂಕ್ರಾಮಿಕದ ಮೂಲದ ಕುರಿತ ವಿವಾದದ ಕೇಂದ್ರವಾಗಿದ್ದ ಚೀನಾದ ವುಹಾನ್ ಮಾರುಕಟ್ಟೆಯಿಂದ ಸಂಗ್ರಹಿಸಲಾದ ಅಂಕಿಅಂಶ ಮಾಹಿತಿಯನ್ನು ಚೀನಾದ ಸಂಶೋಧಕರು ಪ್ರಕಟಿಸಿದ್ದಾರೆ.

‌2020ರ ಜನವರಿಯಲ್ಲಿ ವುಹಾನ್ ಮಾರುಕಟ್ಟೆಯಲ್ಲಿ ಕಾಡುಪ್ರಾಣಿಗಳಿಂದ ಸಂಗ್ರಹಿಸಿದ(ಸಾರ್ಸ್ ಸಿಒವಿ-2 ಸೋಂಕಿತ ಪ್ರಾಣಿಗಳು) ಗಂಟಲುದ್ರವದ ಮಾದರಿಯಲ್ಲಿ ವಂಶವಾಹಿ ವಸ್ತುವನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ಆದರೆ ಸಾರ್ಸ್ ಸಿಒವಿ-2 ಸೋಂಕು ಪ್ರಾಣಿಯಿಂದ ಮಾನವನಿಗೆ ಹರಡಿದೆ ಎಂಬುದಕ್ಕೆ ಈ ಸಂಶೋಧನೆ  ಖಚಿತವಾದ ಪುರಾವೆಗಳನ್ನು ಒದಗಿಸುವುದಿಲ್ಲ ಎಂದು ಚೀನೀಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್(ಸಿಡಿಸಿ)ಯ ಸಂಶೋಧಕರು `ನೇಚರ್' ಮ್ಯಾಗಝಿನ್ ನಲ್ಲಿ ಪ್ರಕಟಿಸಿದ ವರದಿಯಲ್ಲಿ ಹೇಳಿದ್ದಾರೆ.

ಕೋವಿಡ್ ಸೋಂಕು ಪ್ರಾಕೃತಿಕವಾಗಿ ಸೃಷ್ಟಿಯಾಗಿದೆಯೇ ಅಥವಾ ವುಹಾನ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂಬ ಕುರಿತು ವ್ಯಾಪಕ ಚರ್ಚೆ ನಡೆದಿದೆ. ಮಾನವರು ಸೋಂಕನ್ನು ವುಹಾನ್ ಮಾರುಕಟ್ಟೆಗೆ ಪರಿಚಯಿಸಿರಬಹುದು ಎಂಬ ಹೇಳಿಕೆಯನ್ನು ಈ ಅಧ್ಯಯನ ತಳ್ಳಿಹಾಕಿಲ್ಲ. ಮಾರುಕಟ್ಟೆಯಲ್ಲಿ ರಕೂನ್ ನಾಯಿ ಹಾಗೂ ಇತರ ಪ್ರಾಣಿಗಳು ಸೋಂಕಿಗೆ ಒಳಗಾಗಿರಬಹುದು ಎಂಬುದನ್ನು ಸಂಶೋಧನೆ ದೃಢಪಡಿಸಿದರೂ, ಪ್ರಾಣಿಗಳು ಸೋಂಕಿಗೆ ಒಳಗಾಗಿವೆ ಎಂಬುದನ್ನು ಸ್ಯಾಂಪಲ್ನಿಂದ ದೃಢಪಡಿಸಲು ಆಗಲಿಲ್ಲ. ಒಂದುವೇಳೆ ಪ್ರಾಣಿಗಳು ಸೋಂಕಿಗೆ ಒಳಗಾಗಿದ್ದರೂ, ಮನುಷ್ಯರಿಂದ ಪ್ರಾಣಿಗಳಿಗೆ ಸೋಂಕು ಹರಡಿರುವುದನ್ನು ನಮ್ಮ ಅಧ್ಯಯನ ತಳ್ಳಿಹಾಕಿಲ್ಲ ಎಂದು ಅಧ್ಯಯನ ತಂಡದ ಮುಖ್ಯಸ್ಥ ಜಾರ್ಜ್ ಗವೊ ಹೇಳಿದ್ದಾರೆ.

ಕೋವಿಡ್ ಸೋಂಕಿನ ಕೆಲವು ಆರಂಭಿಕ ಪ್ರಕರಣಗಳು ವುಹಾನ್ ಸಮುದ್ರಖಾದ್ಯ ಮಾರುಕಟ್ಟೆಯ ಜತೆ ಸಂಪರ್ಕಿಸಿರುವ ಕಾರಣ ಈ ಮಾರುಕಟ್ಟೆಯನ್ನು ಕೋವಿಡ್-19ರ ಮೂಲದ ಜತೆ ಗುರುತಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಪ್ರಾಣಿಗಳಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ಸೋಂಕುಗಳು ದೃಢಪಟ್ಟಿವೆ ಎಂದು ವರದಿ ಹೇಳಿದೆ.

share
Next Story
X