Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಸಾರಿಗೆ ಹಾಗೂ ಹೆದ್ದಾರಿ...

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯಲ್ಲಿ ಗರಿಷ್ಠ ಪ್ರಮಾಣದ ಯೋಜನೆಗಳು ವಿಳಂಬ: ವರದಿ

9 April 2023 2:53 PM IST
share
ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯಲ್ಲಿ ಗರಿಷ್ಠ ಪ್ರಮಾಣದ ಯೋಜನೆಗಳು ವಿಳಂಬ: ವರದಿ

ಹೊಸದಿಲ್ಲಿ: ರಸ್ತೆ ಸಾರಿಗೆ ಹಾಗೂ ಹೆದ್ದಾರಿ ವಲಯಗಳಲ್ಲಿ ಗರಿಷ್ಠ ಪ್ರಮಾಣದ ಯೋಜನೆಗಳು ವಿಳಂಬಗೊಂಡಿದ್ದು, ಈ ಯೋಜನೆಗಳ ಸಂಖ್ಯೆ 407 ಆಗಿದ್ದರೆ, ರೈಲ್ವೆ ವಲಯ ಹಾಗೂ ಪೆಟ್ರೋಲಿಯಂ ವಲಯದಲ್ಲಿ ಕ್ರಮವಾಗಿ 114 ಹಾಗೂ 86 ಯೋಜನೆಗಳು ವಿಳಂಬಗೊಂಡಿವೆ ಎಂಬ ಸಂಗತಿ ಸರ್ಕಾರಿ ವರದಿಯೊಂದರಲ್ಲಿ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ವಲಯದಲ್ಲಿನ 717 ಯೋಜನೆಗಳ ಪೈಕಿ 407 ಯೋಜನೆಗಳು ವಿಳಂಬಗೊಂಡಿವೆ. ರೈಲ್ವೆ ವಲಯದಲ್ಲಿ 173 ಯೋಜನೆಗಳ ಪೈಕಿ 114 ಯೋಜನೆಗಳು ವಿಳಂಬಗೊಂಡಿದ್ದರೆ, ಪೆಟ್ರೋಲಿಯಂ ವಲಯದಲ್ಲಿ 146 ಯೋಜನೆಗಳ ಪೈಕಿ 86 ಯೋಜನೆಗಳು ನಿಗದಿತ ಅವಧಿಗಿಂತ ವಿಳಂಬ ಗತಿಯಲ್ಲಿ ಪ್ರಗತಿಯಲ್ಲಿವೆ ಎಂದು ಫೆಬ್ರವರಿ 2023ರ ಮೂಲಸೌಕರ್ಯ ಯೋಜನೆಗಳ ಕುರಿತು ಬೆಳಕು ಚೆಲ್ಲುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಸ್ಥೆಗಳು ಅಂತರ್ಜಾಲ ಗಣಕೀಕೃತ ಮೇಲುಸ್ತುವಾರಿ ವ್ಯವಸ್ಥೆ(OCMS)ಯ ಮೂಲಕ ರೂ. 150 ಕೋಟಿ  ಹಾಗೂ ಅದಕ್ಕೂ ಹೆಚ್ಚಿನ ಮೊತ್ತದ ವೆಚ್ಚಗಳ ಕೇಂದ್ರ ವಲಯದ ಮೂಲಸೌಕರ್ಯ ಯೋಜನೆಗಳ ಕುರಿತು ಒದಗಿಸುವ ಮಾಹಿತಿಗಳ ಮೇಲೆ ನಿಗಾ ಇಡುವುದನ್ನು ಮೂಲಸೌಕರ್ಯ ಹಾಗೂ ಯೋಜನಾ ಮೇಲುಸ್ತುವಾರಿ ವಿಭಾಗ(IPMD)ವು ಕಡ್ಡಾಯಗೊಳಿಸಿದೆ.

ಮೂಲಸೌಕರ್ಯ ಹಾಗೂ ಯೋಜನಾ ಮೇಲುಸ್ತುವಾರಿ ವಿಭಾಗವು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತದೆ.

ವರದಿಯ ಪ್ರಕಾರ, ಮುನೀರಾಬಾದ್-ಮಹಬೂಬ್‌ನಗರ್ ನಡುವಿನ ರೈಲ್ವೆ ಯೋಜನೆಯು ಅತಿ ಹೆಚ್ಚು ವಿಳಂಬಗೊಂಡಿದ್ದು, ಈ ಯೋಜನೆಯು 276 ತಿಂಗಳುಗಳಷ್ಟು ವಿಳಂಬಗೊಂಡಿದೆ. ಎರಡನೆ ಅತಿ ಹೆಚ್ಚು ವಿಳಂಬಗೊಂಡಿರುವ ಯೋಜನೆಯು ಉಧಮ್‌ಪುರ್-ಶ್ರೀನಗರ್-ಬಾರಾಮುಲ್ಲಾ ನಡುವಿನ ರೈಲ್ವೆ ಯೋಜನೆಯಾಗಿದ್ದು, ಈ ಯೋಜನೆಯು 247 ತಿಂಗಳುಗಳಷ್ಟು ವಿಳಂಬಗೊಂಡಿದೆ.

ಮೂರನೆ ಅತಿ ಹೆಚ್ಚು ವಿಳಂಬಗೊಂಡಿರುವ ಯೋಜನೆಯು ಬೇಲಾಪುರ್-ಸೀವುಡ್ ಪಟ್ಟಣ ಮಾರ್ಗದ ವಿದ್ಯುದೀಕರಣ ಜೋಡಿ ಹಳಿ ಯೋಜನೆಯಾಗಿದ್ದು, ನಿಗದಿತ ಅವಧಿಗಿಂತ 228 ತಿಂಗಳು ವಿಳಂಬಗೊಂಡಿದೆ.

ಫೆಬ್ರವರಿ 2023ನೇ ಸಾಲಿನ ಮೇಲೆ ಬೆಳಕು ಚೆಲ್ಲುವ ಈ ವರದಿಯು, ರೂ. 150 ಕೋಟಿ ಅಥವಾ ಅದಕ್ಕೂ ಹೆಚ್ಚಿನ ಮೊತ್ತದ ಒಟ್ಟು 1,418 ಕೇಂದ್ರ ವಲಯ ಮೂಲಸೌಕರ್ಯ ಯೋಜನೆಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಹೊಂದಿದೆ.

share
Next Story
X