ಬೆಂಗಳೂರು | ಕುದುರೆ ಮೇಲೆ ಕೂರಿಸುವ ವಿಚಾರಕ್ಕೆ ಬಾಲಕನ ಕೊಲೆ: ಆರೋಪಿಗಳ ಬಂಧನ

ಬೆಂಗಳೂರು, ಎ.9: ಕುದುರೆ ಮೇಲೆ ಕೂರಿಸುವ ವಿಚಾರಕ್ಕೆ ನಡೆದ ಜಗಳದಲ್ಲಿ ಅಪ್ರಾಪ್ತ ಬಾಲಕನನ್ನು ಕೊಲೆಗೈದ ಆರೋಪ ಪ್ರಕರಣ ಸಂಬಂಧ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಸತೀಶ್ (15) ಎಂಬಾತ ಕೊಲೆಯಾದ ಅಪ್ರಾಪ್ತ ಬಾಲಕನಾಗಿದ್ದು, ಕೃತ್ಯವೆಸಗಿದ ಆರೋಪದಡಿ ಶೋಯೆಬ್, ಶರೀಫ್, ಹುಸೇನ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಎ.3ರಂದು ಕೆ.ಜಿ.ಹಳ್ಳಿ ರೈಲ್ವೆ ಹಳಿ ಬಳಿ ಈ ಕೊಲೆ ನಡೆದಿತ್ತು. ಮಾಸ್ಕ್ ರಸ್ತೆಯಲ್ಲಿ ಬಾಲಕ ಸತೀಶ್ ಕುದುರೆ ಇಟ್ಟುಕೊಂಡಿದ್ದು, ಮಕ್ಕಳನ್ನು ಅದರ ಮೇಲೆ ಕೂರಿಸಿ ಆಡಿಸುತ್ತಿದ್ದ. ಕುದುರೆ ಮೇಲೆ ಸವಾರಿ ಮಾಡಲು ಶರೀಫ್ ಬಂದಿದ್ದಾಗ, ದೊಡ್ಡವರನ್ನೆಲ್ಲ ಕುದುರೆ ಮೇಲೆ ಕೂರಿಸುವುದಿಲ್ಲ ಎಂದು ಹೇಳಿದ್ದ. ಆಗ ಆತ ಬಾಲಕನ ಕೆನ್ನೆಗೆ ಹೊಡೆದು ಹೋಗಿದ್ದ. ಕೆಲ ದಿನಗಳ ಬಳಿಕ ಹೊಟೇಲೊಂದರ ಬಳಿ ಶರೀಫ್ನನ್ನುನೋಡಿದ್ದ ಬಾಲಕ ಸತೀಶ್ ಮತ್ತು ಸ್ನೇಹಿತರು, ಶರೀಫ್ ಮೇಲೆ ಹಲ್ಲೆ ಮಾಡಿದ್ದರು.
ಈ ಹಲ್ಲೆಗೆಪ್ರತಿಕಾರವಾಗಿ ಸತೀಶ್ ಕೊಲೆಗೆ ಈ ಶರೀಫ್ ಸಂಚು ಹೂಡಿದ್ದು,ಎಪ್ರಿಲ್ 3ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸತೀಶ್ನನ್ನುನಿರ್ಜನಪ್ರದೇಶಕ್ಕೆ ಕರೆದೊಯ್ದು ದೊಣ್ಣೆಗಳಿಂದ ಹೊಡೆದು ಕೊಲೆಮಾಡಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.