Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಮೂಲ್ ಹಿಂದೆ ವ್ಯವಸ್ಥಿತ ಪಿತೂರಿ: ಉಡುಪಿ...

ಅಮೂಲ್ ಹಿಂದೆ ವ್ಯವಸ್ಥಿತ ಪಿತೂರಿ: ಉಡುಪಿ ಜಿಲ್ಲಾ ಕಾಂಗ್ರೆಸ್

9 April 2023 9:37 PM IST
share
ಅಮೂಲ್ ಹಿಂದೆ ವ್ಯವಸ್ಥಿತ ಪಿತೂರಿ: ಉಡುಪಿ ಜಿಲ್ಲಾ ಕಾಂಗ್ರೆಸ್

ಉಡುಪಿ, ಎ.9: ರಾಜ್ಯದ ಮಾರುಕಟ್ಟೆಗೆ ಅಮೂಲ್ ಹಾಲು ಮತ್ತು ಮೊಸರನ್ನು ಹರಿಯ ಬಿಟ್ಟಿರುವುದರ ಹಿಂದೆ, ಕೆಎಂಎಫ್ ನಂದಿನಿಯನ್ನು ಗುಜರಾತಿನ ಅಮೂಲ್‌ನೊಂದಿಗೆ ವಿಲೀನಗೊಳಿಸುವ ವ್ಯವಸ್ಥಿತ ಪಿತೂರಿ ಅಡಗಿದೆ. ಇದು ಆಳುವ ಬಿಜೆಪಿ  ದೇಶದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಮಹಾಮೋಸ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ದೇಶದಲ್ಲಿ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿರುವ ಕೆಎಂಎಫ್- ಕರ್ನಾಟಕ ಹಾಲು ಉತ್ಪಾದಕ ಮಹಾಮಂಡಳಿಯ ನಂದಿನಿ ಹಾಲು, ಮೊಸರು, ತುಪ್ಪ ವಿಶ್ವಮಾರುಕಟ್ಟೆಯಲ್ಲಿ ಗುರುತಿಸಲ್ಪಟ್ಟಿದೆ. ರಾಜ್ಯದ 16 ಜಿಲ್ಲಾ   ಸಹಕಾರಿ ಹಾಲು ಒಕ್ಕೂಟಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಸ್ಥೆ ಸುಮಾರು 15,043 ಗ್ರಾಮೀಣ ಹಾಲು ಉತ್ಪಾದಕ ಸಹಕಾರಿ ಸಂಘಗಳನ್ನು  ಹೊಂದಿರುವುದಷ್ಟೇ ಅಲ್ಲ ಸುಮಾರು  30 ಲಕ್ಷಕ್ಕೂ ಹೆಚ್ಚು ಹಾಲು ಉತ್ಪಾದಕರ ಸದಸ್ಯತ್ವವನ್ನು ಹೊಂದಿದೆ ಎಂದು ಡಿಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಹುಶ: ಕೆಎಂಎಫ್‌ನ ಶ್ರೀಮಂತಿಕೆಯ ಮೇಲೆ ಕಣ್ಣು ಹಾಕಿರುವ ಕೇಂದ್ರ ಸಚಿವ ಅಮಿತ್ ಷಾ ನಂದಿನಿಯನ್ನು ತನ್ನ ರಾಜ್ಯದ ಅಮೂಲಿನ ಗೂಟಕ್ಕೆ ಕಟ್ಟಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಸುತ್ತಿರುವುದು ವಿಷಾದನೀಯ. ನಂದಿನಿ ಮೊಸರಿನ ಪ್ಯಾಕೇಟ್ ಮೇಲೆ ಹಿಂದಿಯ ದಹಿ ಹೇರಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕೆಎಂಎಫ್‌ನ್ನು ತನ್ನದೇ ರಾಜ್ಯದ  ಗುಜರಾತ್ ಕೋ- ಓಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ನಿನಡಿ ತಂದು, ಈಗಾಗಲೇ ಉತ್ತರ ಭಾರತದಲ್ಲಿ ಅನ್ಯಸಂಸ್ಥೆಗಳ ಹಾಲಿನ ಆಕ್ರಮಣದಿಂದ ಜರ್ಜರಿತವಾಗಿರುವ  ಅಮೂಲ್‌ನ್ನು ದೇಶವ್ಯಾಪಿಗೊಳಿಸುವುದು ಮತ್ತು ಹಾಲು ಉತ್ಪಾದನೆಯಲ್ಲಿಯೂ ಗುಜರಾತ್ ಏಕಸಾಮ್ಯ ಮೆರೆಸು ವುದು ಇವರ ಗುರಿಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಅಷ್ಟಕ್ಕೂ ಕೆಎಂಎಫ್ ರಾಜ್ಯದ ಸಹಕಾರಿ ಸಂಸ್ಥೆಗಳ ಕಾನೂನಿನಡಿ ನೊಂದಾಯಿತ ಸಂಸ್ಥೆ. ಇದನ್ನು ದೇಶದ ಇನ್ನೊಂದು ರಾಜ್ಯದ ನೊಂದಾಯಿತ ಸಹಕಾರಿ ಸಂಸ್ಥೆಯೊಂದಿಗಾಗಲಿ ಅಥವಾ ಬಹುರಾಜ್ಯ ನೊಂದಾಯಿತ ಸಹಕಾರಿ ಸಂಸ್ಥೆಯೊಂದಿಗಾಗಲಿ ವಿಲೀನ ಗೊಳಿಸುವುದು ಸಹಕಾರಿ ಸಂಸ್ಥೆಗಳ ನಿಯಮಾವಳಿಗಳ ಉಲ್ಲಂಘನೆ ಎನ್ನಬಹುದು. ಇದು ದೇಶದ ಸಹಕಾರಿ ಕ್ಷೇತ್ರವನ್ನು ದುರ್ಬಲಗೊಳಿಸುವ ಹುನ್ನಾರವಾಗಿದೆ. ಬಹುಶ ಈ ಘಟನೆ ಲಾಭದಲ್ಲಿದ್ದ ಈ ನಾಡಿನ ಹೆಮ್ಮೆಯ ವಿಜಯ ಬ್ಯಾಂಕ್‌ನ್ನು ಗುಜರಾತ್ ಮೂಲದ ನಷ್ಟದಲ್ಲಿದ್ದ ಬ್ಯಾಂಕ್ ಆಫ್ ಬರೋಡದೊಂದಿಗೆ  ವಿಲೀನ ಗೊಳಿಸಿರುವ ಈ ಸರಕಾರದ ಜನವಿರೋಧಿ ಪ್ರಕ್ರಿಯೆಯನ್ನು ನೆನಪಿಸುತ್ತದೆ ಎಂದು ಅದು ಹೇಳಿದೆ.

ಬಹುಶ ಯಾವುದೇ ಕಾರಣಕ್ಕೂ ನಂದಿನಿಯನ್ನು ಅಮೂಲ್‌ನೊಂದಿಗೆ ವಿಲೀನಗೊಳಿಸದಂತೆ ನೋಡಿಕೊಳ್ಳು ವುದು  ಈ ಸಹಕಾರಿ ಸಂಸ್ಥೆಯ ಎಲ್ಲ ಸದಸ್ಯರ, ಅಧಿಕಾರಗಳ ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಆದರೆ ದುರಾದೃಷ್ಟವಶಾತ್ ಇಲ್ಲಿಯೂ ಪಕ್ಷ ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ಅದನ್ನು ಬೆಂಬಲಿಸುವ ಮಂದಿ ಸಂಸ್ಥೆಯ ಒಳಗಿದ್ದೇ ನಂದಿನಿಗೆ ವಿಷ ಹಾಕುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
Next Story
X