Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಿಂದೂ ರಾಷ್ಟ್ರ’ ಪಂಚಾಯತ್ ಸಂಘಟಕರ...

‘ಹಿಂದೂ ರಾಷ್ಟ್ರ’ ಪಂಚಾಯತ್ ಸಂಘಟಕರ ವಿರುದ್ಧ ಮೊಕದ್ದಮೆ ದಾಖಲು

10 April 2023 9:47 PM IST
share
‘ಹಿಂದೂ ರಾಷ್ಟ್ರ’ ಪಂಚಾಯತ್ ಸಂಘಟಕರ ವಿರುದ್ಧ ಮೊಕದ್ದಮೆ ದಾಖಲು

ಹೊಸದಿಲ್ಲಿ, ಎ. 10: ಈಶಾನ್ಯ ದಿಲ್ಲಿಯಲ್ಲಿ ಅನುಮತಿ ಪಡೆಯದೆ ‘ಹಿಂದೂ ರಾಷ್ಟ್ರ’ ಪಂಚಾಯತ್ ನಡೆಸಿರುವುದಕ್ಕಾಗಿ ದಿಲ್ಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

ಯುನೈಟೆಡ್ ಹಿಂದೂ ಫ್ರಂಟ್ ಎಂಬ ಹಿಂದುತ್ವ ಸಂಘಟನೆಯೊಂದು ರವಿವಾರ ಈ ಪಂಚಾಯತ್ ಏರ್ಪಡಿಸಿದೆ. ಹಿಂದೂ ರಾಷ್ಟ್ರ ಸ್ಥಾಪಿಸಬೇಕು ಮತ್ತು ‘ಲವ್ ಜಿಹಾದ್’ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಈ ಪಂಚಾಯತ್ನಲ್ಲಿ ಯುನೈಟೆಡ್ ಹಿಂದೂ ಫ್ರಂಟ್ ನ ಸದಸ್ಯರು ಒತ್ತಾಯಿಸಿದರು.

2020ರಲ್ಲಿ ಕೋಮುಗಲಭೆಗಳು ನಡೆದ ವಲಯದಲ್ಲೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೋಮುಗಲಭೆಯಲ್ಲಿ 53 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಯುನೈಟೆಡ್ ಹಿಂದೂ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಸಂಘಟಕರಲ್ಲಿ ಒಬ್ಬರಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಸತ್ಯನಾರಾಯಣ ಜತಿಯ ಮತ್ತು ಉತ್ತರ ದಿಲ್ಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಉಪಸ್ಥಿತರಿದ್ದರು.

ಯಾವುದೇ ಹಿಂದೂ ತನ್ನ ಮನೆಗಳು ಅಥವಾ ಅಂಗಡಿಗಳನ್ನು ಬೇರೆ ಧರ್ಮಗಳ ಸದಸ್ಯರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ಕೊಡಬಾರದು ಎಂದು ಹಿಂದೂ ರಾಷ್ಟ್ರ ಪಂಚಾಯತ್ನಲ್ಲಿ ಗೋಯಲ್ ಸಭಿಕರನ್ನು ಒತ್ತಾಯಿಸಿದರು.

‘‘ನಾವು ಮೊದಲು ಈಶಾನ್ಯ ದಿಲ್ಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಹಾಗೂ ಬಳಿಕ, ಇಡೀ ದೇಶವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ’’ ಎಂದು ಗೋಯಲ್ ಹೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ. ‘‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟಗಳಲ್ಲಿ ಘಟಕಗಳನ್ನು ಸ್ಥಾಪಿಸುತ್ತೇವೆ’’ ಎಂದರು.

ಸಭೆ ನಡೆಸಲು ಅನುಮತಿ ಪಡೆಯದಿರುವುದಕ್ಕಾಗಿ ದಿಲ್ಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಮೊಕದ್ದೆ ದಾಖಲಿಸಿದರು. ಆದರೆ, ಅಲ್ಲಿ ಮಾಡಲಾಗಿರುವ ದ್ವೇಷ ಭಾಷಣಗಳಿಗಾಗಿ ಪೊಲೀಸರು ಸಂಘಟಕರ ವಿರುದ್ಧ ಯಾವುದೇ ಮೊಕದ್ದಮೆ ದಾಖಲಿಸಲಿಲ್ಲ.

share
Next Story
X