Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ನಗರದಲ್ಲಿ ಮತದಾನ ಜಾಗೃತಿಗೆ...

ಮಂಗಳೂರು ನಗರದಲ್ಲಿ ಮತದಾನ ಜಾಗೃತಿಗೆ ಅಪಾರ್ಟ್‌ಮೆಂಟ್ ಅಭಿಯಾನ: ಡಾ. ಕುಮಾರ

10 April 2023 10:16 PM IST
share
ಮಂಗಳೂರು ನಗರದಲ್ಲಿ ಮತದಾನ ಜಾಗೃತಿಗೆ ಅಪಾರ್ಟ್‌ಮೆಂಟ್ ಅಭಿಯಾನ: ಡಾ. ಕುಮಾರ

ಮಂಗಳೂರು: ನಗರದಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗಲು ಅಪಾರ್ಟ್‌ಮೆಂಟ್ ನಿವಾಸಿಗಳ ಸಹಕಾರ ಅಗತ್ಯವಾಗಿದೆ, ಈ ದಿಸೆಯಲ್ಲಿ ಮಂಗಳೂರು ನಗರದಲ್ಲಿರುವ ಎಲ್ಲಾ ಅಪಾರ್ಟ್‌ಮೆಂಟ್‌ಗಳಲ್ಲಿ ಮತದಾನ ಜಾಗೃತಿಗಾಗಿ ಪರಿಣಾಮಕಾರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ಕೆ ಕೈಜೋಡಿಸುವಂತೆ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ  ಕರೆ ನೀಡಿದ್ದಾರೆ.

ಅವರು ಎ.10ರ ಸೋಮವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಅಪಾರ್ಟ್‌ಮೆಂಟ್ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳೊಂದಿಗೆ  ಹಮ್ಮಿಕೊಂಡಿದ್ದ ಮತದಾನ ಜಾಗೃತಿಯ ಅಪಾರ್ಟ್‌ಮೆಂಟ್ ಅಭಿಯಾನದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದಲ್ಲಿ ಶೇ.50 ರಿಂದ 60 ಜನರು ಅಪಾರ್ಟ್‌ಮೆಂಟ್‌ಗಳಲ್ಲಿ ನೆಲೆಸಿದ್ದಾರೆ. ಅಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ, ಪ್ರತಿಯೊಂದು ಅಪಾರ್ಟ್‌ಮೆಂಟ್ ಸಂಘಟನೆಗಳ ಅಧ್ಯಕ್ಷರು ಅಥವಾ ಕಾರ್ಯದರ್ಶಿ ಅಥವಾ ಖಜಾಂಚಿಯನ್ನೊಳಗೊಂಡಂತೆ ಅಧಿಕಾರಿಗಳು ತಂಡವನ್ನು ರಚಿಸಲಾಗಿದೆ, ಮಾತ್ರವಲ್ಲದೆ ಆಯಾ  ಅಪಾರ್ಟ್‌ಮೆಂಟ್‌ಗಳ ಸಂಘಗಳ ಅಧ್ಯಕ್ಷರು ಅಥವಾ ಕಾರ್ಯದರ್ಶಿಗಳನ್ನು ಚುನಾವಣಾ ಅಂಬಾಸಿಡರ್‌ಗಳನ್ನಾಗಿ ನಿಯೋಜಿಸಲಾಗಿದೆ, ಅವರೊಂದಿಗೆ ಬಿಎಲ್‌ಒಗಳು, ಇತರೆ ಸಿಬ್ಬಂದಿ ಸೇರಿದಂತೆ ಐದರಿಂದ ಆರು ಜನರ ತಂಡವನ್ನು ರಚಿಸಲಾಗಿದ್ದು, ಮೊದಲಿಗೆ ಅವರು ಎಲ್ಲಾ ಅಪಾರ್ಟ್‌ಮೆಂಟ್‌ಗಳಿಗೆ ಭೇಟಿ ನೀಡಿ, ಅಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಕ್ಕೆ ದಿನ ಹಾಗೂ ಸಮಯವನ್ನು ನಿಗದಿಪಡಿಸುವರು ಎಂದು ಹೇಳಿದರು.

ಅಪಾರ್ಟ್‌ಮೆಂಟ್‌ಗಳಿಗೆ ಯಕ್ಷಗಾನ ಕಲಾವಿದರು ಆಗಮಿಸಿ, ತಮ್ಮ ಕಲೆಯ ಮೂಲಕ ಮತದಾನದ ಮಹತ್ವದ ಬಗ್ಗೆ ಮೂಲಕ ಜಾಗೃತಿ ಮೂಡಿಸುವರು, ಮಾತ್ರವಲ್ಲ ಅವರು ನಾಗರೀಕರ ಹಕ್ಕು ಚಲಾವಣೆಯ ಆಮಂತ್ರಣ ಪತ್ರಿಕೆ ನೀಡುವರು, ಅದನ್ನು ಸಂಘದವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಂದು ಮನೆಗೆ ತಲುಪಿಸಬೇಕು, ಅದರೊಂದಿಗೆ ವ್ಯಂಗ್ಯಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗುವುದು, ಅದಕ್ಕೆ ಸ್ಥಳಾವಕಾಶ ಮಾಡಿಕೊಡಬೇಕು,

ಅಪಾರ್ಟ್‌ಮೆಂಟ್ ಆವರಣದಲ್ಲಿಯೇ ಸೈನ್ ಬೋರ್ಡ್‌ವೊಂದನ್ನು ಇರಿಸಲಾಗುವುದು, ಸಮಯ ಸಿಕ್ಕಾಗ ಅಪಾರ್ಟ್‌ಮೆಂಟ್  ವಾಸಿಗಳು ಅದರಲ್ಲಿ ತಮ್ಮ ಸಂದೇಶವನ್ನು ಬರೆದು ಕಳುಹಿಸಬಹುದು ಎಂದು ತಿಳಿಸಿದರು.

ಅದೇ ರೀತಿ ಜಿಲ್ಲೆಯ 255 ಮಂದಿ ಎನ್‌ಆರ್‌ಐ ಗಳಿದ್ದಾರೆ. ಅವರಿಗೆ ಪತ್ರ ಬರೆದು ಮತದಾನಕ್ಕೆ ಆಗಮಿಸುವಂತೆ ಕೋರಲಾಗುವುದು ಎಂದ ಅವರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಅಪಾರ್ಟ್‌ಮೆಂಟ್ ವಾಸಿಗಳ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದೆ, ಆದರೆ ಇಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಚಾರಕ್ಕೆ ಅವಕಾಶವಿರುವುದಿಲ್ಲ ಒಂದು ವೇಳೆ ರಾಜಕೀಯ ಪ್ರಚಾರಗಳು ಕಂಡು ಬಂದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಚುನಾವಣಾ ಆಯೋಗ ಈ ಬಾರಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಅದರ ಉಪಯೋಗ ಪಡೆಯಬೇಕು, ಚುನಾವಣೆಯನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಹಬ್ಬ ಆದ ಕಾರಣ ಪ್ರತಿಯೊಬ್ಬ ಭಾರತೀಯ ಕೂಡ ಮತದಾನ ಮಾಡುವ ನಾಗರಿಕ ಹಕ್ಕನ್ನು ಪಡೆದಿದ್ದಾನೆ, ಜವಾಬ್ದಾರಿಯುತ ನಾಗರಿಕರು ಮುಂದೆ ಬಂದು ಮತ ಚಲಾಯಿಸಬೇಕು ಮತ ಚಲಾಯಿಸುವುದು ಮಾನವನ ಹಕ್ಕಾಗಿದೆ, ಮೊದಲು ಕರ್ತವ್ಯ ಮಾಡಬೇಕು ಎಂದರು.

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಚೆನ್ನಬಸಪ್ಪ ಮಾತನಾಡಿ, ಬೆಂಗಳೂರನ್ನು ಹೊರತುಪಡಿಸಿದರೆ ಕಳೆದ ಬಾರಿ ಮಂಗಳೂರು ದಕ್ಷಿಣ ಭಾಗದಲ್ಲಿ ಶೇ. 67ರಷ್ಟು ಮಾತ್ರ ಮತದಾನವಾಗಿದೆ ಈ ಬಾರಿ ಆ ಪ್ರಮಾಣವನ್ನು ಹೆಚ್ಚಿಸಲು ಅಪಾರ್ಟ್ಮೆಂಟ್ ಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ, ಎಲ್ಲರೂ ಭಾಗವಹಿಸುವಂತೆ ಕರೆ ನೀಡಿದರು.
ಮಂಗಳೂರು ನಗರದ ವಿವಿಧ ಅಪಾರ್ಟ್ಮೆಂಟ್ ಗಳ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಭಾಗವಹಿಸಿದ್ದರು

share
Next Story
X