Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ...

ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಮೊದಲು ಠೇವಣಿ ಇರಿಸಲು ದ.ಕ. ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ

10 April 2023 11:35 PM IST
share
ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಮೊದಲು ಠೇವಣಿ ಇರಿಸಲು ದ.ಕ. ಜಿಲ್ಲಾಧಿಕಾರಿಯಿಂದ  ಪರಿಷ್ಕೃತ ಆದೇಶ

ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ಶಸ್ತ್ರಾಸ್ತ್ರ ಕಾಯಿದೆ 1959ರ ಕಲಂ 17 (3) (ಬಿ) ರನ್ವಯ, 2023 ,ಮಾ.30ರಂದು ಹೊರಡಿಸಿದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಬೆಳೆ ರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತಮ್ಮ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ 2023 ,ಎ.24ರ ಒಳಗಾಗಿ ಜಮಾ ಮಾಡಲು ಆದೇಶಿಸಿದ್ದರು.

ಈ ಆದೇಶವನ್ನು ಮಾರ್ಪಡಿಸಿ ಎ.6ರಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪರಿಷ್ಕೃತ  ಆದೇಶವನ್ನು ಹೊರಡಿಸಿದ್ದು, ಈ  ಆದೇಶದಲ್ಲಿ ಬೆಳೆ ಹಾಗೂ ಆತ್ಮರಕ್ಷಣೆ ಆಯುಧಗಳ ಪರವಾನಿಗೆದಾರರು ತಮ್ಮ ಆಯುಧಗಳನ್ನು ಪೊಲೀಸ್ ಠಾಣೆ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಎ. 13ರ ಒಳಗಾಗಿ ಠೇವಣೆ ಇರಿಸುವಂತೆ ಆದೇಶಿಸಿದ್ದಾರೆ.

ಅದರಂತೆ ಜಿಲ್ಲೆಯ ಎಲ್ಲ ಆಯುಧಗಳ ಪರವಾನಿಗೆದಾರರು ನಿಗದಿತ ದಿನಾಂಕದ  ಒಳಗಾಗಿ ತಮ್ಮ ಬಳಿಯಿರುವ ಆಯುಧ/ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಜಮಾ ಮಾಡಿ ರಶೀದಿಗಳನ್ನು ಪಡೆದುಕೊಳ್ಳುವುದು ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ತ್ರರಲ್ಲಿ ಜಮಾ ಮಾಡಿ ಈ ಬಗ್ಗೆ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡುವುದು. ಇದಕ್ಕೆ ತಪ್ಪಿದಲ್ಲಿ ಸೂಕ್ತ ಕಾನೂನುಕ್ರಮವನ್ನು ಕೈಗೊಳ್ಳಲಾಗುವುದು. ಆದುದರಿಂದ   ಜಿಲ್ಲೆಯಲ್ಲಿರುವ ಶಸ್ತ್ರಾಸ್ತ್ರ, ಪರವಾನಿಗೆದಾರರು ಈ ವಿಷಯದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಅಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

share
Next Story
X