Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೊಮಾಲಿಯಾಕ್ಕೆ ವ್ಯಾಪಕ ಅಂತರಾಷ್ಟ್ರೀಯ...

ಸೊಮಾಲಿಯಾಕ್ಕೆ ವ್ಯಾಪಕ ಅಂತರಾಷ್ಟ್ರೀಯ ಬೆಂಬಲ ಅಗತ್ಯ: ವಿಶ್ವಸಂಸ್ಥೆ ಮುಖ್ಯಸ್ಥರ ಆಗ್ರಹ

11 April 2023 11:03 PM IST
share
ಸೊಮಾಲಿಯಾಕ್ಕೆ ವ್ಯಾಪಕ ಅಂತರಾಷ್ಟ್ರೀಯ ಬೆಂಬಲ ಅಗತ್ಯ: ವಿಶ್ವಸಂಸ್ಥೆ ಮುಖ್ಯಸ್ಥರ ಆಗ್ರಹ

ಮೊಗದಿಶು, ಎ.11: ವಿನಾಶಕಾರಿ ಬರಗಾಲ ಮತ್ತು ಹೆಚ್ಚುತ್ತಿರುವ ಭಯೋತ್ಪಾದಕ ದಾಳಿ ಪ್ರಕರಣಗಳಿಂದ ಕಂಗೆಟ್ಟಿರುವ ಸೊಮಾಲಿಯಾಕ್ಕೆ ಅಂತರಾಷ್ಟ್ರೀಯ ಸಮುದಾಯದ ವ್ಯಾಪಕ ಬೆಂಬಲದ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಮಂಗಳವಾರ ಆಗ್ರಹಿಸಿದ್ದಾರೆ.

ಸೊಮಾಲಿಯಾ ಭೇಟಿಯ ಅಂಗವಾಗಿ ಮಂಗಳವಾರ ರಾಜಧಾನಿ ಮೊಗದಿಶುಗೆ ಆಗಮಿಸಿದ ಗುಟೆರಸ್ ತನ್ನ ಪ್ರವಾಸವು ಒಗ್ಗಟ್ಟಿನ ಪ್ರದರ್ಶನವಾಗಿದೆ.   ತೀವ್ರ ಹವಾಮಾನ ವೈಪರೀತ್ಯ ಮತ್ತು ಭಯೋತ್ಪಾದನೆಯ ಸಂಕಟದಲ್ಲಿರುವ ಸೊಮಾಲಿಯಾಕ್ಕೆ ವ್ಯಾಪಕ ಅಂತರಾಷ್ಟ್ರೀಯ ಸಮುದಾಯದ ಬೆಂಬಲ ಅಗತ್ಯವಿದೆ ಎಂಬ ಎಚ್ಚರಿಕೆಯ ಸಂದೇಶ ರವಾನಿಸುವುದು ಈ ಭೇಟಿಯ ಉದ್ದೇಶವಾಗಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆ ಸಮಸ್ಯೆಯಲ್ಲಿ ಸೊಮಾಲಿಯಾದ ಪಾತ್ರ ಇಲ್ಲದಿದ್ದರೂ ಸೊಮಾಲಿಯನ್ನರು ಹವಾಮಾನ ಬದಲಾವಣೆ ಸಮಸ್ಯೆಯಿಂದ ಅತೀ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಾಗಿದ್ದಾರೆ. ಸುಮಾರು 5 ದಶಲಕ್ಷದಷ್ಟು ಜನತೆ ತೀವ್ರ ಆಹಾರ ಅಭದ್ರತೆ ಎದುರಿಸುತ್ತಿದ್ದಾರೆ ಎಂದು ಗುಟೆರಸ್ ಹೇಳಿದ್ದಾರೆ.

ಆಫ್ರಿಕಾದ ಶೃಂಗ ಎಂದು ಕರೆಯಲಾಗುವ ಸೊಮಾಲಿಯಾಕ್ಕೆ ಅಗತ್ಯದ ನೆರವು ಒದಗಿಸಲು 2.6 ಶತಕೋಟಿ ಡಾಲರ್ ನೆರವು ಸಂಗ್ರಹಿಸುವ ಅಭಿಯಾನಕ್ಕೆ ವಿಶ್ವಸಂಸ್ಥೆ ಚಾಲನೆ ನೀಡಿದೆ. ಆದರೆ ಇದುವರೆಗೆ ಇದರ ಕೇವಲ 15%ದಷ್ಟು ನಿಧಿ ಮಾತ್ರ ಸಂಗ್ರಹವಾಗಿದೆ . ಸೊಮಾಲಿಯಾದಲ್ಲಿ 8.3 ದಶಲಕ್ಷದಷ್ಟು ಜನತೆ ಬರಗಾಲದಿಂದ ಪರಿಣಾಮಕ್ಕೆ ಒಳಗಾಗಿದ್ದು  ಜನಸಂಖ್ಯೆಯ 50%ದಷ್ಟು ಜನರಿಗೆ ಈ ವರ್ಷ ಮಾನವೀಯ ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ತೀವ್ರ ಬರಗಾಲದ ಹಿಡಿತದಲ್ಲಿರುವ ಸೊಮಾಲಿಯಾದಲ್ಲಿ ಹಲವರು ಕ್ಷಾಮದ ಅಂಚಿನಲ್ಲಿದ್ದಾರೆ. ಗಾಯದ ಮೇಲೆ ಉಪ್ಪುಸವರಿದಂತೆ ಅಲ್ಖೈದಾದ ಸಹಸಂಘಟನೆ ಅಲ್-ಶಬಾಬ್ನ ಭಯೋತ್ಪಾದಕ ಕೃತ್ಯ ನಿಯಂತ್ರಣವು ಸರಕಾರಕ್ಕೆ ಪ್ರಮುಖ ಸವಾಲಾಗಿದೆ. ಸೊಮಾಲಿಯಾ, ಕೆನ್ಯಾ ಮತ್ತು ಇಥಿಯೋಪಿಯಾದಲ್ಲಿ ಸತತ 5 ವರ್ಷದ ವಿಫಲ ಮಳೆಗಾಲವು ಈ ಪ್ರದೇಶದಲ್ಲಿ ಕಳೆದ 4 ದಶಕದಲ್ಲೇ ಅತ್ಯಂತ ತೀವ್ರ ಬರಗಾಲಕ್ಕೆ ಕಾರಣವಾಗಿದ್ದು ಜಾನುವಾರುಗಳ ಸಾವು, ಬೆಳೆ ನಷ್ಟದ ಜತೆ ಕನಿಷ್ಟ 1.7 ದಶಲಕ್ಷ ಜನರು ಆಹಾರ ಮತ್ತು ನೀರನ್ನು ಅರಸುತ್ತಾ ತಮ್ಮ ಮನೆಬಿಟ್ಟು ಇತರೆಡೆ ಸ್ಥಳಾಂತರಗೊಂಡಿದ್ದಾರೆ. 2011ರಲ್ಲಿ ತೀವ್ರ ಬರದಿಂದ ಕಂಗೆಟ್ಟಿದ್ದ ಸೊಮಾಲಿಯಾದಲ್ಲಿ 2,60,000 ಜನರು ಮೃತಪಟ್ಟಿದ್ದರು. ಸಕಾಲದಲ್ಲಿ ಮತ್ತು ತ್ವರಿತವಾಗಿ ಅಂತರಾಷ್ಟ್ರೀಯ ನೆರವು ಲಭಿಸದಿರುವುದು ಈ ವ್ಯಾಪಕ ಪ್ರಮಾಣದ ಸಾವಿಗೆ ಪ್ರಧಾನ ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿತ್ತು.

share
Next Story
X