ಕೊಲ್ಲೂರು: ಬಾಲಕ ನಾಪತ್ತೆ

ಉಡುಪಿ, ಎ.12: ಕೊಲ್ಲೂರು ಶ್ರೀಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಎ.11ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿದ್ದಾನೆ.
4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ: 100 (0820-2526444) ನ್ನು ಸಂಪರ್ಕಿಸಬಹುದು ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story