ಎಚ್ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ವೈಎಸ್ವಿ ದತ್ತ : ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು, ಎ.12: ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈಎಸ್ವಿ ದತ್ತ ಅವರು ಟಿಕೆಟ್ ಕೈತಪ್ಪಿದಕ್ಕೆ ತೀವ್ರ ಅಸಮಾಧಾನಗೊಂಡಿದ್ದು, ಈ ನಡುವೆ ಪುನಃ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
ಬುಧವಾರ ಪದ್ಮನಾಭ ನಗರದಲ್ಲಿರುವ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ದತ್ತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾಗಿರುವ ದತ್ತ ಅವರು ಇತ್ತೀಚೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದರು.
Next Story