ಮಣಿಪಾಲ: ಗಾಂಜಾ ಸೇವನೆ ಆರೋಪ; ನಾಲ್ವರು ವಶಕ್ಕೆ

ಮಣಿಪಾಲ, ಎ.12: ಗಾಂಜಾ ಸೇವನೆಗೆ ಸಂಬಂಧಿಸಿ ಮೂವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿ ದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಕೇರಳದ ಇಶಾನ್ ಮುಹಮ್ಮದ್(24), ಮುಹಮ್ಮದ್ ಅಜ್ಮಲ್(23), ಉತ್ತರ ಪ್ರದೇಶದ ಪ್ರಣವ್ ಶ್ರೀವಸ್ತಾವ(22) ಎಂಬವರನ್ನು ವಶಕ್ಕೆ ಪಡೆದು, ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎ.12ರಂದು ಬಂದ ವರದಿಯಲ್ಲಿ ಇವರೆಲ್ಲ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಾರು ಗ್ರಾಮ ಪಂಚಾಯತ್ ಕಚೇರಿಯ ಬಳಿ ಎ.10ರಂದು ರಶ್ವೀದ್(20) ಎಂಬಾತನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story