Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯರನ್ನು ವಿಭಜಿಸಲು ಅಧಿಕಾರ...

ಭಾರತೀಯರನ್ನು ವಿಭಜಿಸಲು ಅಧಿಕಾರ ದುರುಪಯೋಗ ಮಾಡುತ್ತಿರುವವರು ನಿಜವಾದ ದೇಶದ್ರೋಹಿಗಳು: ಸೋನಿಯಾ ಗಾಂಧಿ

"ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದಾಗಬೇಕು"

14 April 2023 4:25 PM IST
share
ಭಾರತೀಯರನ್ನು ವಿಭಜಿಸಲು ಅಧಿಕಾರ ದುರುಪಯೋಗ ಮಾಡುತ್ತಿರುವವರು ನಿಜವಾದ ದೇಶದ್ರೋಹಿಗಳು: ಸೋನಿಯಾ ಗಾಂಧಿ
"ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದಾಗಬೇಕು"

ಹೊಸದಿಲ್ಲಿ: ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಆಡಳಿತಾರೂಢರು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮತ್ತು ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದು, ಜನರು ಈ ವ್ಯವಸ್ಥಿತ ದಾಳಿಯಿಂದ ಸಂವಿಧಾನವನ್ನು ರಕ್ಷಿಸಲು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮದಿನದ ಅಂಗವಾಗಿ The Telegraph ಪತ್ರಿಕೆಗೆ ಲೇಖನವೊಂದನ್ನು ಬರೆದಿರುವ ಸೋನಿಯಾ ಗಾಂಧಿ, ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಧರ್ಮ, ಭಾಷೆ, ಜಾತಿ ಮತ್ತು ಲಿಂಗದ ನೆಲೆಯಲ್ಲಿ ಭಾರತೀಯರನ್ನು ಪರಸ್ಪರ ವಿಭಜಿಸುತ್ತಿರುವವರೇ ಈ ಹೊತ್ತು ನಿಜವಾದ ದೇಶದ್ರೋಹಿಗಳು ಎಂದು ಕಿಡಿ ಕಾರಿದ್ದಾರೆ.

"ನಾವಿಂದು ಬಾಬಾ ಸಾಹೇಬರ ಪರಂಪರೆಯನ್ನು ಗೌರವಿಸುತ್ತಿದ್ದರೂ, ಸಂವಿಧಾನದ ಯಶಸ್ಸು ಜನರ ಆಳುವ ಕರ್ತವ್ಯದೊಂದಿಗೆ ಅವರ ನಡತೆಯನ್ನು ಆಧರಿಸಿರುತ್ತದೆ ಎಂಬ ಅವರ ಭವಿಷ್ಯದ ಎಚ್ಚರಿಕೆಯನ್ನು ನೆನಪಿನಲ್ಲಿಟ್ಟುಕೊಳ್ಳಬೇಕು" ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯೂ ಆದ ಸೋನಿಯಾ ಗಾಂಧಿ ಎಚ್ಚರಿಕೆ ನೀಡಿದ್ದಾರೆ.
ಇಂದು ಆಡಳಿತಾರೂಢರು ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮತ್ತು ನಾಶ ಮಾಡುತ್ತಿದ್ದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ತಳಹದಿಯನ್ನೇ ದುರ್ಬಲಗೊಳಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

"ನಾವೊಂದು ವೇಳೆ ಸಂವಿಧಾನವನ್ನು ರಕ್ಷಿಸಲು ಬಯಸಿದ್ದೇ ಆದರೆ, ನಮ್ಮ ಮಾರ್ಗದುದ್ದಕ್ಕೂ ಇರುವ ದುಷ್ಟತನಗಳನ್ನು ಗುರುತಿಸಿ, ನಿರ್ಧರಿಸಲು ಸೋಮಾರಿತನ ಪ್ರದರ್ಶಿಸಬಾರದು ಅಥವಾ ಅವನ್ನು ಕಿತ್ತೊಗೆಯುವ ನಮ್ಮ ಉಪಕ್ರಮದಲ್ಲಿ ದುರ್ಬಲರೂ ಆಗಿರಬಾರದು. ಅದೊಂದೇ ದೇಶ ಸೇವೆಗಿರುವ ಮಾರ್ಗ. ಇದಕ್ಕಿಂತ ಉತ್ತಮ ಮಾರ್ಗ ನನಗೆ ತಿಳಿದಿಲ್ಲ" ಎಂದು ಸಂವಿಧಾನ ಸದನ ಸಮಿತಿ ಸಭೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಆಡಿದ್ದ ಕೊನೆಯ ಮಾತನ್ನು ಸೋನಿಯಾ ಗಾಂಧಿ ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಬರಲಿರುವ ವರ್ಷಗಳಲ್ಲಿ ಈ ಮಾತುಗಳೇ ನಮ್ಮ ನಿರ್ಧಾರವಾಗಬೇಕು ಎಂದೂ ಅವರು ಹೇಳಿದ್ದಾರೆ. ಅಂಬೇಡ್ಕರ್ ಅವರ ಅದ್ಭುತ ಜೀವನಗಾಥೆಯು ಇಂದು ಪ್ರತಿಯೊಬ್ಬ ಭಾರತೀಯನಿಗೂ ಸುದೀರ್ಘ ಪ್ರೇರಣೆಯಾಗಿದೆ ಎಂದು ಸೋನಿಯಾ ಗಾಂಧಿ ತಮ್ಮ ಲೇಖನದಲ್ಲಿ ಶ್ಲಾಘಿಸಿದ್ದಾರೆ.

share
Next Story
X