Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಚಾರಣಾ ನ್ಯಾಯಾಲಯದ ತೀರ್ಪು ಅನ್ಯಾಯ,...

ವಿಚಾರಣಾ ನ್ಯಾಯಾಲಯದ ತೀರ್ಪು ಅನ್ಯಾಯ, ನ್ಯಾಯಾಧೀಶರನ್ನು ದಾರಿ ತಪ್ಪಿಸಲಾಗಿದೆ: ರಾಹುಲ್ ಗಾಂಧಿ ಪರ ವಕೀಲರ ವಾದ

ಮಾನಹಾನಿ ಪ್ರಕರಣ

14 April 2023 4:32 PM IST
share
ವಿಚಾರಣಾ ನ್ಯಾಯಾಲಯದ ತೀರ್ಪು ಅನ್ಯಾಯ, ನ್ಯಾಯಾಧೀಶರನ್ನು ದಾರಿ ತಪ್ಪಿಸಲಾಗಿದೆ: ರಾಹುಲ್ ಗಾಂಧಿ ಪರ ವಕೀಲರ ವಾದ
ಮಾನಹಾನಿ ಪ್ರಕರಣ

ಸೂರತ್: ನ್ಯಾಯಾಧೀಶರನ್ನು ದಾರಿ ತಪ್ಪಿಸಿರುವುದರಿಂದ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ನ್ಯಾಯೋಚಿತವಾಗಿ ನಡೆದಿಲ್ಲ ಎಂದು ರಾಹುಲ್ ಗಾಂಧಿ ಪರ ವಕೀಲರು ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದೆದುರು ಗುರುವಾರ ವಾದ ಮಂಡಿಸಿದರು ಎಂದು Bar and Bench ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಕುರಿತ ತನ್ನ ಹೇಳಿಕೆಯ ಪ್ರಕರಣದಲ್ಲಿ ನೀಡಿರುವ ಶಿಕ್ಷೆಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆಲಿಸುತ್ತಿದೆ. 2019ರ ಲೋಕಸಭಾ ಚುನಾವಣೆಗೂ ಮುನ್ನ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳ್ಳರೆಲ್ಲ ಮೋದಿ ಉಪನಾಮವನ್ನೇಕೆ ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದರು. 

ಈ ಕುರಿತು ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಮಾರ್ಚ್ 23ರಂದು ರಾಹುಲ್ ಗಾಂಧಿಗೆ ಎರಡು ವರ್ಷಗಳ ಸೆರೆವಾಸ ಶಿಕ್ಷೆ ವಿಧಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನಹಾನಿ) ಹಾಗೂ ಸೆಕ್ಷನ್ 500 (ಮಾನಹಾನಿಗಾಗಿ ಶಿಕ್ಷೆ) ಅಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿಕ್ಷೆಗೊಳಗಾಗಿದ್ದರು. ಹೀಗಿದ್ದೂ, ಅವರಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯವು, 30 ದಿನಗಳ ಕಾಲ ತೀರ್ಪನ್ನು ಅಮಾನತುಗೊಳಿಸಿತ್ತು.

ರಾಹುಲ್ ಗಾಂಧಿ ಶಿಕ್ಷೆಗೊಳಗಾದ ಮರು ದಿನವೇ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಯಾವುದೇ ಶಾಸನ ಸಭೆಯ ಸದಸ್ಯರು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಶಿಕ್ಷೆಗೆ ಒಳಪಟ್ಟರೆ ಅಂಥವರು ಕೂಡಲೇ ಅನರ್ಹಗೊಳ್ಳುತ್ತಾರೆ ಮತ್ತು ಶಿಕ್ಷೆ ಪೂರೈಸಿದ ದಿನದಿಂದ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ.

ಒಂದು ವೇಳೆ ನ್ಯಾಯಾಲಯವೇನಾದರೂ ರಾಹುಲ್ ಗಾಂಧಿಯ ಶಿಕ್ಷೆಗೆ ತಡೆ ನೀಡಿದರೆ ಅವರ ಲೋಕಸಭಾ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆಯಲಾಗುತ್ತದೆ. ಎಪ್ರಿಲ್ 3ರಂದು ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿಯವರ ಜಾಮೀನು ಅವಧಿಯನ್ನು ಎಪ್ರಿಲ್ 13ರವರೆಗೆ ವಿಸ್ತರಿಸಿತ್ತು.

ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಆರ್.ಎಸ್.ಚೀಮಾ, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ರಾಜಕಾರಣಿಯ ಮೂಲ ಭಾಷಣವನ್ನು ಪರಿಗಣಿಸುವ ಬದಲು ಮಾಧ್ಯಮ ವರದಿಗಳನ್ನು ಅವಲಂಬಿಸಿದ್ದಾರೆ ಎಂದು ವಾದಿಸಿದರು. "ಭಾಷಣದ ಸಿಡಿಗಿಂತ ಭಿನ್ನವಾದ ದಿನಪತ್ರಿಕೆಗಳ ವರದಿಗಳನ್ನು ಸಾಕ್ಷಿಯಾಗಿ ಪರಿಗಣಿಸಿ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಎಲ್ಲ ತೀರ್ಮಾನ ಕೈಗೊಂಡು ತೀರ್ಪು ನೀಡಿರುವುದು ನನಗೆ ತುಂಬಾ ವಿಚಿತ್ರವಾಗಿ ಕಾಣಿಸುತ್ತಿದೆ" ಎಂದು ಚೀಮಾ ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಎಚ್ಚರಿಕೆಗೆ ಯಾವುದೇ ಕಿಮ್ಮತ್ತು ನೀಡದೆ ಉದ್ಧಟತನದಿಂದ ವರ್ತಿಸಿದ್ದಾರೆ ಎಂಬ ವಿಚಾರಣಾ ನ್ಯಾಯಾಲಯದ ಹೇಳಿಕೆಯಿಂದ ನನಗೆ ಆಘಾತವಾಗಿದೆ ಎಂದು ಹೇಳಿದ ಚೀಮಾ, "ನಾನು ಶಕ್ತಿಶಾಲಿ ಪದಗಳನ್ನು ಬಳಸುತ್ತಿರುವುದಕ್ಕೆ ಕ್ಷಮೆಯಿರಲಿ. ಆದರೆ, ನ್ಯಾಯಾಧೀಶರು ದಾರಿ ತಪ್ಪಿದ್ದಾರೆ ಮತ್ತು ದುಡುಕಿನಿಂದ ವರ್ತಿಸಿದ್ದಾರೆ" ಎಂದು ವಾದಿಸಿದರು.

ವಿಚಾರಣಾ ನ್ಯಾಯಾಲಯದ ಕ್ಷಮಾಪಣೆ ಕುರಿತ ಉಲ್ಲೇಖವು ದಾರಿ ತಪ್ಪಿಸುವಂತಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದ ಹಿರಿಯ ವಕೀಲ ಚೀಮಾ, 2019ರಲ್ಲಿ ರಾಹುಲ್ ಗಾಂಧಿ ಮೋದಿ ಕುರಿತು ಭಾಷಣ ಮಾಡಿದ್ದರು ಮತ್ತು ಮತ್ತೊಂದು ಹೇಳಿಕೆ ಕುರಿತು ಆ ವರ್ಷದ ನವೆಂಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ರಾಹುಲ್ ಗಾಂಧಿಯ ವಿಚಾರಣೆ ಕೈಗೊಂಡಿತ್ತು ಎಂದೂ ನ್ಯಾಯಾಲಯಕ್ಕೆ ತಿಳಿಸಿದರು.

"ಹೀಗಾಗಿ ಅದು ಹೇಗೆ ನನ್ನ ಕಕ್ಷಿದಾರರಿಗೆ ಉನ್ನತ ನ್ಯಾಯಾಲಯ ಬುದ್ಧಿ ಹೇಳಿದೆ ಎಂಬ ದೂರುದಾರರ ವಾದವನ್ನು ನ್ಯಾಯಾಧೀಶರು ಅವಲಂಬಿಸಲು ಸಾಧ್ಯ?" ಎಂದು ಚೀಮಾ ಪ್ರಶ್ನಿಸಿದರು. ಒಂದು ವೇಳೆ ರಾಹುಲ್ ಗಾಂಧಿಗೆ ಎರಡು ವರ್ಷಕ್ಕಿಂತ ಒಂದು ದಿನ ಕಡಿಮೆ ಶಿಕ್ಷೆ ವಿಧಿಸಿದರೂ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುತ್ತಿರಲಿಲ್ಲ ಎಂಬ ಸಂಗತಿ ವಿಚಾರಣಾ ನ್ಯಾಯಾಲಯಕ್ಕೆ ತಿಳಿದಿತ್ತು ಎಂದೂ ಅವರು ವಾದಿಸಿದರು.

share
Next Story
X