ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗುತ್ತಿರೋದು ಬೇಸರ ತರಿಸಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಎ.14: ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗುತ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಕಂಡಿದೆ. ಕಾಂಗ್ರೆಸ್ ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ. ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಜವಾಗಿ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.
ಈಗಾಗಲೆ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೆ ಪಟ್ಟಿ ಶೀಘ್ರದಲ್ಲೆ ಬಿಡುಗಡೆ ಮಾಡುತ್ತೇವೆ. ನಾಳೆ ಶಿಗ್ಗಾಂವಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
Next Story