Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೇನಾ...

ನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೇನಾ ಸಿಬ್ಬಂದಿ ವಿಚಾರಣೆಗೆ ಅನುಮತಿ ನಿರಾಕರಿಸಿದ ರಕ್ಷಣಾ ಸಚಿವಾಲಯ

14 April 2023 11:59 PM IST
share
ನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೇನಾ ಸಿಬ್ಬಂದಿ ವಿಚಾರಣೆಗೆ ಅನುಮತಿ ನಿರಾಕರಿಸಿದ ರಕ್ಷಣಾ ಸಚಿವಾಲಯ

ಹೊಸದಿಲ್ಲಿ, ಎ. 14: ನಾಗಲ್ಯಾಂಡ್‌ನ ಮೊನ್ ಜಿಲ್ಲೆಯಲ್ಲಿ 2021ರಲ್ಲಿ ನಾಗರಿಕರ ಹತ್ಯೆಗೆ ಸಂಬಂಧಿಸಿ ಭಾರತೀಯ ಸೇನೆಯ 30 ಸಿಬ್ಬಂದಿಯ ವಿಚಾರಣೆಗೆ ರಕ್ಷಣಾ ಸಚಿವಾಲಯ ಅನುಮತಿ ನಿರಾಕರಿಸಿದೆ ಎಂದು ನಾಗಾಲ್ಯಾಂಡ್ ಪೊಲೀಸರು ಗುರುವಾರ ತಿಳಿಸಿದ್ದಾರೆ.

‘‘ಸಕ್ಷಮ ಪ್ರಾಧಿಕಾರ (ಸೇನಾ ವ್ಯವಹಾರಗಳ ಇಲಾಖೆ, ರಕ್ಷಣಾ ಸಚಿವಾಲಯ, ಭಾರತ ಸರಕಾರ) ಎಲ್ಲ 30 ಆರೋಪಿಗಳ ವಿಚಾರಣೆ ನಡೆಸಲು ಅನುಮತಿ ನಿರಾಕರಿಸಿದೆ’’ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಹೇಳಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. 
‌
‘‘ಕಾನೂನಿನ ಪ್ರಕಾರ ವಿಚಾರಣೆಗೆ ಅನುಮತಿ ನಿರಾಕರಿಸಿರುವ ವಿಚಾರವನ್ನು ರಾಜ್ಯ ಅಪರಾಧ ಕೋಶ ಪೊಲೀಸ್ ಠಾಣೆ ಹಾಗೂ ವಿಶೇಷ ತನಿಖಾ ಸಂಸ್ಥೆ ಮೊನ್‌ನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದೆ’’ ಎಂದು ವರದಿ ಹೇಳಿದೆ.  

ಈ ಸುದ್ದಿಗೆ ಪ್ರತಿಕ್ರಿಯಿಸಿದ ‘ನಾಗಾ ಪೀಪಲ್ಸ್ ಮೂವ್‌ಮೆಂಟ್ ಫಾರ್ ಹ್ಯೂಮನ್ ರೈಟ್ಸ್’ನ ಪ್ರಧಾನ ಕಾರ್ಯದರ್ಶಿ ನೆಯಿಂಗುಲೊ ಕ್ರೋಮೆ, ‘‘ಕಳೆದ 50-60 ವರ್ಷಗಳಲ್ಲಿ ನಮ್ಮ ಜನರ ಮೇಲೆ ಅವರು ಮಾಡಿದ ದೌರ್ಜನ್ಯಕ್ಕೆ ಇದುವರೆಗೆ ಯಾವುದೇ ಸೇನಾ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಿಲ್ಲ’’ ಎಂದಿದ್ದಾರೆ. 

ರಾಜ್ಯ ಪೊಲೀಸರು ವಿಚಾರಣೆಗೆ ಕೇಂದ್ರದಿಂದ ಅನುಮತಿ ಪಡೆಯದ ಕಾರಣ 30 ಆರೋಪಿ ಸೇನಾ ಸಿಬ್ಬಂದಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈಯಲ್ಲಿ ತಡೆ ನೀಡಿತ್ತು. 2021 ಡಿಸೆಂಬರ್ 4ರಂದು ಮೊನ್ ಜಿಲ್ಲೆಯಲ್ಲಿ ಟಿರು-ಒಟಿಂಗ್ ಪ್ರದೇಶದಲ್ಲಿ ಪಿಕ್‌ಅಪ್ ವ್ಯಾನ್‌ನಲ್ಲಿ ತೆರಳುತ್ತಿದ್ದ 6 ಮಂದಿ ಸ್ಥಳೀಯ ಗಣಿ ಕಾರ್ಮಿಕರನ್ನು ಉಗ್ರರು ಎಂದು ತಪ್ಪು ಭಾವಿಸಿ ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಗುಂಡು ಹಾರಿಸಿ ಹತ್ಯೆಗೈದಿತ್ತು. ಇದರಿಂದ ಜನರು ಆಕ್ರೋಶಿತರಾಗಿ ಪ್ರತಿಭಟನೆ ನಡೆಸಿದ್ದರು. ಸೇನೆಯ ವಾಹನಗಳಿಗೆ ಬೆಂಕಿ ಹಚಿದ್ದರು. ಈ ಸಂದರ್ಭ ಯೋಧರು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ 7 ಮಂದಿ ನಾಗರಿಕರು ಸಾವನ್ನಪ್ಪಿದ್ದರು.

share
Next Story
X