Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಟಿಂಡಾ ಹತ್ಯೆ: ಮಿಲಿಟರಿ ಗೌರವಕ್ಕೆ...

ಬಟಿಂಡಾ ಹತ್ಯೆ: ಮಿಲಿಟರಿ ಗೌರವಕ್ಕೆ ಆಗ್ರಹಿಸಿ ಮೃತ ಸೈನಿಕರ ಕುಟುಂಬ ಪ್ರತಿಭಟನೆ

15 April 2023 7:44 AM IST
share
ಬಟಿಂಡಾ ಹತ್ಯೆ: ಮಿಲಿಟರಿ ಗೌರವಕ್ಕೆ ಆಗ್ರಹಿಸಿ ಮೃತ ಸೈನಿಕರ ಕುಟುಂಬ ಪ್ರತಿಭಟನೆ
ಮಧುರೈ/ ಸೇಲಂ: ಬಟಿಂಡಾ ಸೇನಾ ನೆಲೆಯಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ನಾಲ್ವರು ಸೈನಿಕರ ಪೈಕಿ ಇಬ್ಬರಿಗೆ ಅಂತ್ಯಸಂಸ್ಕಾರ ವೇಳೆ ಗೌರವ ನೀಡದಿರುವ ಕ್ರಮವನ್ನು ಖಂಡಿಸಿ ಸೈನಿಕರ ಕುಟುಂಬ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸೇಲಂ ಮೂಲದ ಸೈನಿಕ ಆರ್.ಕಮಲೇಶ್ ಅವರ ಸಂಬಂಧಿಕರು ಮೃತದೇಹವನ್ನು ಸ್ವೀಕರಿಸಲು ನಿರಾಕರಿಸಿದರು. ಕೊಯಮತ್ತೂರು ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬೆಳಿಗ್ಗೆ ಪಾರ್ಥಿವ ಶರೀರವನ್ನು ಮಧ್ಯಾಹ್ನದ ವೇಳೆಗೆ ಸೇಲಂಗೆ ತರಲಾಯಿತು. ಸೇನಾ ವಾಹನದ ಬದಲಾಗಿ ಒಂದು ಆ್ಯಂಬುಲೆನ್ಸ್‌ನಲ್ಲಿ ಮೃತದೇಹವನ್ನು ತಂದದ್ದು ಕಂಡು ಆಘಾತಗೊಂಡ ಕುಟುಂಬ ಸದಸ್ಯರು ವಾಹನದ ಮುಂದೆ ಪ್ರತಿಭಟನೆ ನಡೆಸಿದರು. ಸೇನಾ ಗೌರವವನ್ನು ನೀಡದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಕಮಲೇಶ್ ನಿಧನದ ಬಗ್ಗೆ ಸಮಗ್ರ ವಿವರವನ್ನೂ ಆಗ್ರಹಿಸಿದರು. ಘಟನೆಯ ಬಗ್ಗೆ ಸೇನೆ ಸಮಗ್ರ ತನಿಖೆ ನಡೆಸಿದ ಬಳಿಕ ವಿವರ ಒದಗಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದರು. ಆದರೂ ಗ್ರಾಮಸ್ಥರು ಸಂಜೆ 6 ಗಂಟೆವರೆಗೂ ಪಾರ್ಥಿವ ಶರೀರ ಸ್ವೀಕರಿಸಲು ನಿರಾಕರಿಸಿ ಪ್ರತಿಭಟನೆ ಮುಂದುವರಿಸಿದರು. ಅಂತೆಯೇ ಥೇಣೀ ಜಿಲ್ಲೆಯ ಮೂನಂದಿಪಟ್ಟಿ ಗ್ರಾಮದಲ್ಲೂ ಮತ್ತೊಬ್ಬ ಮೃತ ಸೈನಿಕ ಯೋಗೀಶ್ ಕುಮಾರ್ ಜೆ. ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಯೋಗೀಶ್ ಕುಮಾರ್ ಅವರ ಅಂತ್ಯಸಂಸ್ಕಾರಕ್ಕೂ ಸೇನಾ ಗೌರವ ನೀಡದಿರುವುದು ಗ್ರಾಮಸ್ಥರ ಸಿಟ್ಟಿಗೆ ಕಾರಣವಾಯಿತು. ಮಧುರೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪಾರ್ಥಿವ ಶರೀರವನ್ನು ಬಳಿಕ ರಸ್ತೆ ಮೂಲಕ ಗ್ರಾಮಕ್ಕೆ ಒಯ್ಯಲಾಯಿತು. ಥೇವರಂ ಪಟ್ಟಣಕ್ಕೆ ಆಗಮಿಸಿದ ಮೃತದೇಹನ್ನು ರಂಗನಾಥರ್ ದೇವಾಲಯ ಮೈದಾನದಿಂಧ ಮೂನಂದಿಪಟ್ಟಿ ಗ್ರಾಮದಲ್ಲಿದ್ದ ಅವರ ನಿವಾಸಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಸ್ಥಳೀಯ ಗ್ರಾಮಸ್ಥರು, ನಿವೃತ್ತ ಯೋಧರು ಮೃತ ಸೈನಿಕನಿಗೆ ಬಾಷ್ಪಾಂಜಲಿ ಸಲ್ಲಿಸಿದರು. ಬಟಿಂಡಾ ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು ಸೇನಾ ನಿಯಮದ ಪ್ರಕಾರ, ವಿಚಾರಣಾ ಪ್ರಕ್ರಿಯೆ ನಡೆಯುತ್ತಿರುವ ಪ್ರಕರಣಗಳಲ್ಲಿ ಮೃತಪಟ್ಟ ಸೈನಿಕರಿಗೆ ಸೇನಾ ಗೌರವ ನೀಡುವಂತಿಲ್ಲ. ಸುಮಾರು 45 ನಿಮಿಷಗಳ ಕಾಲ ಪ್ರತಿಭಟನೆ ನಡೆಯಿತು. ಕೋರ್ಟ್‌ಮಾರ್ಷಲ್ ಶಿಷ್ಟಾಚಾರವನ್ನು ಸಂಬಂಧಿಕರಿಗೆ ವಿವರಿಸಿದ ಬಳಿಕ ಅಂತಿಮ ವಿಧಿವಿಧಾನ ನಡೆಸಲು ಒಪ್ಪಿಕೊಂಡರು.
share
Next Story
X