Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ಬಿಜೆಪಿ ನಾಯಕನ ಗುಂಡಿಟ್ಟು...

ದಿಲ್ಲಿ: ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ

15 April 2023 2:38 PM IST
share
ದಿಲ್ಲಿ: ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ

ಹೊಸದಿಲ್ಲಿ: 2017ರ ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಪದಾಧಿಕಾರಿಯೊಬ್ಬರನ್ನು ಇಬ್ಬರು ಸಶಸ್ತ್ರಧಾರಿ ಹಂತಕರು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಶುಕ್ರವಾರ ರಾತ್ರಿ ನೈಋತ್ಯ ದಿಲ್ಲಿಯ ಬಿಂಡಾಪುರದಲ್ಲಿನ ಅವರ ಕಚೇರಿಯಲ್ಲಿ ನಡೆದಿದೆ ಎಂದು timesofindia.com ವರದಿ ಮಾಡಿದೆ.

ಸುರೇಂದರ್ ಮಟಿಯಾಲಾ ಹತ್ಯೆಗೀಡಾದ ಬಿಜೆಪಿ ನಾಯಕನಾಗಿದ್ದು, ಅವರು ಆರು ವರ್ಷಗಳ ಹಿಂದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಾದರೂ, ಪರಾಭವಗೊಂಡಿದ್ದರು.

ಸದ್ಯ ಮಟಿಯಾಲಾ ನಜಾಫ್‌ಗಢ ಜಿಲ್ಲಾ ಕಿಸಾನ್ ಮೋರ್ಚಾದ ಅಧ್ಯಕ್ಷರಾಗಿದ್ದು, ಈ ಪ್ರದೇಶದ ರಾಜಕಾರಣದಲ್ಲಿ ಸಾಕಷ್ಟು ಸಕ್ರಿಯರಾಗಿದ್ದರು ಎನ್ನಲಾಗಿದೆ.

ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ ಸುಮಾರು 8:16 ಗಂಟೆಯ ಸಮಯದಲ್ಲಿ ಪೊಲೀಸ್ ನಿಯಂತ್ರಣ ಕಚೇರಿಗೆ ಗುಂಡಿನ ದಾಳಿ ಕುರಿತು ಕರೆ ಬಂದಿದ್ದು, ಕೂಡಲೇ ಪೊಲೀಸರ ತಂಡವೊಂದು ಸ್ಥಳಕ್ಕೆ ಧಾವಿಸಿದೆ. ಗುಂಡಿನ ದಾಳಿಯ ಸಮಯದಲ್ಲಿ ಮಟಿಯಾಲಾ ಕಚೇರಿಯಲ್ಲೇ ಇದ್ದರು. ಅವರೊಂದಿಗೆ ಅವರ ಭಾವ ಸೇರಿದಂತೆ ಮತ್ತಿಬ್ಬರು ವ್ಯಕ್ತಿಗಳಿದ್ದರು ಎಂದು ತಿಳಿಸಿದ್ದಾರೆ.

ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದ ಇಬ್ಬರು ಹಂತಕರು ಗಾಜಿನ ಬಾಗಿಲನ್ನು ತೆರೆದು ಕಚೇರಿಯ ಒಳ ಬಂದಾಗ ಮಟಿಯಾಲಾ ಟಿವಿ ವೀಕ್ಷಿಸುತ್ತಿದ್ದರು. ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸುವುದಕ್ಕೂ ಮುನ್ನ ಅವರ ಗುರುತನ್ನು ಖಾತ್ರಿಗೊಳಿಸಿಕೊಂಡಿದ್ದಾರೆ. ಶಂಕಿತ ಹಂತಕರು ಸ್ಥಳದಿಂದ ಪರಾರಿಯಾಗುವುದಕ್ಕೂ ಮುನ್ನ ಹತ್ತರಿಂದ ಹನ್ನೆರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮಟಿಯಾಲಾ ದೇಹದೊಳಗೆ ಒಟ್ಟು ಐದು ಗುಂಡುಗಳು ತೂರಿರುವುದು ಕಂಡು ಬಂದಿದೆ.

ಪೊಲೀಸರು ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಘಟನಾ ಸ್ಥಳದಲ್ಲಿ ವ್ಯಕ್ತಿಯೊಬ್ಬ ತನ್ನ ಕೈಯಲ್ಲಿ ಹೆಲ್ಮೆಟ್ ಹಿಡಿದು ನಿಂತಿರುವುದು ಕಂಡು ಬಂದಿದೆ. 

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಇಬ್ಬರು ಶಂಕಿತರು ಮಟಿಯಾಲಾ ಕಚೇರಿಗೆ ಬಂದಿದ್ದರೆ, ಮೂರನೆಯ ವ್ಯಕ್ತಿ ಅವರಿಗೆ ಪರಾರಿಯಾಗಲು ನೆರವು ಒದಗಿಸಲು ಬೀದಿಯಲ್ಲಿ ಬೈಕ್ ನೊಂದಿಗೆ ಕಾದು ಕುಳಿತಿದ್ದ ಎಂದು ಹೇಳಿದ್ದಾರೆ.

"ಆರೋಪಿಗಳನ್ನು ಸೆರೆ ಹಿಡಿಯಲು ಹಲವಾರು ತಂಡಗಳನ್ನು ರಚಿಸಲಾಗಿದೆ. ಈ ಹಂತದಲ್ಲಿ ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನಾವು ಎಲ್ಲ ಸಾಧ್ಯತೆಗಳ ಕುರಿತು ತನಿಖೆ ನಡೆಸುತ್ತಿದ್ದು, ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆ" ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ತಿಳಿಸಿದ್ದಾರೆ.

share
Next Story
X