Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದುತ್ವ ಪ್ರಶ್ನಿಸಿ ಮಾಡಿದ್ದ...

ಹಿಂದುತ್ವ ಪ್ರಶ್ನಿಸಿ ಮಾಡಿದ್ದ ಟ್ವೀಟ್‌ಗಾಗಿ ಬಂಧಿಸಲ್ಪಟ್ಟಿದ್ದ ನಟ ಚೇತನ್‌ ಕುಮಾರ್‌ OCI ರದ್ದುಗೊಳಿಸಿದ ಕೇಂದ್ರ

15 April 2023 5:59 PM IST
share
ಹಿಂದುತ್ವ ಪ್ರಶ್ನಿಸಿ ಮಾಡಿದ್ದ ಟ್ವೀಟ್‌ಗಾಗಿ ಬಂಧಿಸಲ್ಪಟ್ಟಿದ್ದ ನಟ ಚೇತನ್‌ ಕುಮಾರ್‌ OCI ರದ್ದುಗೊಳಿಸಿದ ಕೇಂದ್ರ

ಹೊಸದಿಲ್ಲಿ: ಕನ್ನಡ ನಟ ಮತ್ತು ಹೋರಾಟಗಾರ ಚೇತನ್‌ ಕುಮಾರ್‌ (Chetan Kumar) ಅವರ ಓವರ್‌ಸೀಸ್‌ ಸಿಟಿಜನ್‌ಶಿಪ್‌ ಕಾರ್ಡ್‌ (OCI) ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತಂತೆ ನಟನಿಗೆ ಮಾರ್ಚ್‌ 28 ರಂದು ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಪತ್ರ ದೊರಕಿದೆ.  ಪತ್ರ ದೊರಕಿದ 15 ದಿನಗಳಲ್ಲಿ ಒಸಿಐ ಕಾರ್ಡ್‌ ವಾಪಸ್‌ ನೀಡುವಂತೆ ಅವರಿಗೆ ಸೂಚಿಸಲಾಗಿದೆ.

ಬಲಪಂಥೀಯ ರಾಜಕಾರಣದ ಕಟುಟೀಕಾಕಾರರಾಗಿರುವ ಚೇತನ್‌ ಅವರನ್ನು ಮಾರ್ಚ್‌ 21 ರಂದು ಬೆಂಗಳೂರು ಪೊಲೀಸರು ಅವರು ಹಿಂದುತ್ವವನ್ನು ಪ್ರಶ್ನಿಸಿ ಮಾಡಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಬಂಧಿಸಿದ್ದರು.

ಚೇತನ್‌ಗೆ ಈ ಹಿಂದೆ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿ ಜೂನ್‌ 2022 ರಲ್ಲಿ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿತ್ತು. ಚೇತನ್‌ ಅವರು ನ್ಯಾಯಾಧೀಶರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಹಾಗೂ ಇತರ ದೇಶವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆಗ ಆರೋಪಿಸಲಾಗಿತ್ತು. ಅವರ ಒಸಿಐ ಕಾರ್ಡ್‌ ಏಕೆ ರದ್ದುಗೊಳಿಸಬಾರದು ಎಂದು ಕೇಳಿ ನಿಗದಿತ ಸಮಯದೊಳಗೆ ಉತ್ತರಿಸುವಂತೆ ಆಗ ಅವರಿಗೆ ಸೂಚಿಸಲಾಗಿತ್ತು.

ಇದಕ್ಕೆ ಉತ್ತರಿಸಿದ್ದ ಚೇತನ್‌, ತಾವು ಭಾರತದಲ್ಲಿ ಹಲವು ವರ್ಷಗಳಿಂದ ವಾಸಗವಾಗಿದ್ದು ಇಲ್ಲಿ ನಟನೆ ಮತ್ತು ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದು ಹಾಗೂ ಭಾರತೀಯ ನಾಗರಿಕರೊಬ್ಬರನ್ನೇ ವಿವಾಹವಾಗಿದ್ದಾಗಿ ಹೇಳಿದ್ದರು.

ಆದರೆ ಎಪ್ರಿಲ್‌ 14, 2023 ರಂದು ಗೃಹ ವ್ಯವಹಾರಗಳ ಸಚಿವಾಲಯ ಅವರಿಗೆ ನೋಟಿಸ್‌ ನೀಡಿ ಅವರ ʼದೇಶ-ವಿರೋಧಿ ಚಟುವಟಿಕೆಗಳು ಮತ್ತು ನ್ಯಾಯಾಧೀಶರ ವಿರುದ್ಧದ ನಿಂದನಾತ್ಮಕ ಹೇಳಿಕೆಗಳಿಗೆ ತಕ್ಷಣದಿಂದ ಅವರ ಒಸಿಐ ಕಾರ್ಡ್‌ ರದ್ದುಗೊಳಿಸಲಾಗುತ್ತಿದೆ ಎಂದು ತಿಳಿಸಿತ್ತು. ಅಷ್ಟೇ ಅಲ್ಲದೆ ನೋಟಿಸಿಗೆ ಅವರ ಉತ್ತರ ಸಮಾಧಾನಕರವಾಗಿರಲಿಲ್ಲ ಎಂದೂ ಹೇಳಿತ್ತು.

ತಮ್ಮ ಒಸಿಐ ಕಾರ್ಡ್‌ ರದ್ದತಿ ಹಿಂದೆ ಭಯದ ವಾತಾವರಣ ಸೃಷ್ಟಿಸುವ ಹಾಗೂ ಸರ್ಕಾರದ ವಿರುದ್ಧ ಮಾತನಾಡುವವರಿಗೆ ಎಚ್ಚರಿಕೆ ನೀಡುವ ಉದ್ದೇಶವಿದೆ ಎಂದು ಚೇತನ್‌ ಹೇಳಿದ್ದಾರೆ.

ಮೂಲತಃ ಚಿಕಾಗೊ ನಿವಾಸಿಯಾಗಿದ್ದ ಚೇತನ್‌ ಅವರಿಗೆ 2018 ರಲ್ಲಿ ಒಸಿಐ ಕಾರ್ಡ್‌ ನೀಡಲಾಗಿತ್ತು. ಅಲ್ಲಿಯ ತನಕ ಅವರು ಪಿಐಒ ಅಂದರೆ ಪರ್ಸನ್‌ ಆಫ್‌ ಇಂಡಿಯನ್‌ ಒರಿಜಿನ್‌ ಆಗಿದ್ದರು.

ಇದನ್ನೂ ಓದಿ: ಕಾನೂನು ನೋಟಿಸ್‌ ನೀಡಿದ RSS ನಾಯಕ ರಾಮ್‌ ಮಾಧವ್‌ಗೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ: ಸತ್ಯಪಾಲ್‌ ಮಲಿಕ್‌

share
Next Story
X