Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಮಾನಹಾನಿಕರ ಹೇಳಿಕೆ’: ರಾಮ್ ಮಾಧವ್...

‘‘ಮಾನಹಾನಿಕರ ಹೇಳಿಕೆ’: ರಾಮ್ ಮಾಧವ್ ರಿಂದ ಕೋರ್ಟ್ ನೋಟಿಸ್; ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದ ಮಲಿಕ್

15 April 2023 10:48 PM IST
share
‘‘ಮಾನಹಾನಿಕರ ಹೇಳಿಕೆ’: ರಾಮ್ ಮಾಧವ್ ರಿಂದ ಕೋರ್ಟ್ ನೋಟಿಸ್; ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದ ಮಲಿಕ್

ಹೊಸದಿಲ್ಲಿ,ಎ.15: ತನ್ನ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಆರೆಸ್ಸೆಸ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ್ ತನಗೆ ಕೋರ್ಟ್ ನೋಟಿಸ್ ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ‘‘ನಾನು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ’’ ಎಂದು ಹೇಳಿದ್ದಾರೆ. ಅದರ ಬದಲಿಗೆ ನೋಟಿಸ್ ಗೆ ಲಿಖಿತ ಉತ್ತರವನ್ನು ನೀಡುವುದಾಗಿ ಹೇಳಿದ್ದಾರೆ.

‘ದಿ ಪ್ರಿಂಟ್’ ಸುದ್ದಿ ಜಾಲತಾಣದ ವರದಿಗಾರರೊಂದಿಗೆ ಮಾತನಾಡಿದ ಅವರು ತನಗೆ ನೋಟಿಸ್ ಕಳುಹಿಸುವಂತೆ ಯಾರೋ ಒಬ್ಬರು ಅವರ (ಮಾಧವ್) ಮೇಲೆ ಒತ್ತಡ ಹೇರಿರಬಹುದೆಂದು ಮಲಿಕ್ ಶಂಕಿಸಿದ್ದಾರೆ.

‘‘ನಾನು ಜಮ್ಮುಕಾಶ್ಮೀರದ ರಾಜ್ಯಪಾಲನಾಗಿದ್ದಾಗ ಎರಡು ಕಡತಗಳಿಗೆ ಅನುಮೋದನೆ ನೀಡಲು ಆರೆಸ್ಸೆಸ್ ನ ಪದಾಧಿಕಾರಿಯೊಬ್ಬರು ನನಗೆ ಲಂಚದ ಅಮಿಷವೊಡ್ಡಿದ್ದರು ಎಂದು ನಾನು ಮೂರು ವರ್ಷಗಳ ಹಿಂದೆ ಅಂದರೆ 2021ರಲ್ಲಿಯೇ ಹೇಳಿದ್ದೆ. ಈಗ ನಾನು ಹೊಸದೇನನ್ನೂ ಹೇಳಿಲ್ಲ ಎಂದರು.

 ರಾಮ್ ಮಾಧವ್ ನೋಟಿಸ್ ಕಳುಹಿಸಿರುವುದರಲ್ಲಿ ಯಾವುದೇ ವಿವೇಕವಿಲ್ಲ. ಶೀಘ್ರದಲ್ಲೇ ನಾನು ಅದಕ್ಕೆ ಲಿಖಿತ ಉತ್ತರವನ್ನು ಕಳುಹಿಸುವುದಾಗಿ’’ ಮಲಿಕ್ ಹೇಳಿದ್ದಾರೆ.

ಸತ್ಯಪಾಲ್ ಮಲಿಕ್ ಅವರು ಎಪ್ರಿಲ್ 8ರಂದು ನೀಡಿದ ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ತಾನು ಜಮ್ಮುಕಾಶ್ಮೀರದ ರಾಜ್ಯಪಾಲನಾಗಿದ್ದಾಗ ಜಲವಿದ್ಯುತ್ ಯೋಜನೆ ಹಾಗೂ ರಿಲಯನ್ಸ್ ವಿಮಾ ಯೋಜನೆಗೆ ಅನುಮತಿ ನೀಡುವಂತೆ ರಾಮ್ ಮಾಧವ್ ತನಗೆ ಗಂಟುಬಿದ್ದಿದ್ದರು. ಆದರೆ ತಾನು ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದೆ. ಈವರೆಡೂ ಯೋಜನೆಗಳಿಗೆ ಅನುಮತಿ ನೀಡಿದರೆ ತಾನು 300 ಕೋಟಿ ರೂ.ಗಳನ್ನು ಪಡೆಯಬಹುದು ಎಂದು ಕೆಲವರು ನನಗೆ ಹೇಳಿದ್ದರು ಎಂದು ಮಲಿಕ್ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದರು.

ಮಲಿಕ್ ಗೆ ಕೋರ್ಟ್ ನೋಟಿಸ್ ಕಳುಹಿಸಿದ ಮಾಧವ್

ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿರುದ್ಧ ಆರೆಸ್ಸೆಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ್ ಅವರು ಕೋರ್ಟ್ ನೋಟಿಸ್ ಕಳುಹಿಸಿದ್ದಾರೆ.

‘‘ರಾಜಕೀಯ ವಲಯದಲ್ಲಿ ಪ್ರಸಕ್ತವಾಗಿ ಉಳಿಯಬೇಕೆಂಬ ಹಂಬಲದಿಂದ ಮಲಿಕ್ ಅವರು ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ’’ ಎಂದು ಮಾಧವ್ ತಿಳಿಸಿದ್ದಾರೆ.

ಸತ್ಯಪಾಲ್ ಮಲಿಕ್ ಅವರ ಹೇಳಿಕೆಯಿಂದಾಗಿ ತನಗಾದ ಮಾನಸಿಕ ಯಾತನೆ ಹಾಗೂ ಕಿರುಕುಳಕ್ಕಾಗಿ ಈ ನೋಟಿಸ್ ದೊರೆತ 48 ತಾಸುಗಳೊಳಗೆ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಮಾಧವ್ ಆಗ್ರಹಿಸಿದ್ದಾರೆ.

‘‘ ಮಾಧವ್ ಅವರ ಹೇಳಿಕೆಗಳು ಆಧಾರರಹಿತ,ಅಪಮಾನಕಾರಿ ಹಾಗೂ ಅಪ್ಪಟ ಸುಳ್ಳಿನಿಂದ ಕೂಡಿವೆ. ಈಗ ನಡೆಯುತ್ತಿರುವ ಹೈಡೆಲ್ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಹಗರಣದ ಬಗ್ಗೆ ಸಿಬಿಐ ನಡೆಸುತ್ತಿರುವ ತನಿಖೆಯ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಅವರು ಈ ಆರೋಪಗಳನ್ನು ಮಾಡಿದ್ದಾರೆ’’ ಎಂದು ಮಾಧವ್ ಅವರ ವಕೀಲ ಆಯುಷ್ ಆನಂದ್ ತಿಳಿಸಿದ್ದಾರೆ.

ಸತ್ಯಪಾಲ್ ಮಲಿಕ್ಅವರು ಜಮ್ಮುಕಾಶ್ಮೀರದ ರಾಜ್ಯಪಾಲರಾಗಿ 2018ರಿಂದ 2019ರವರೆಗೆ, ಅದು ರಾಜ್ಯದ ಸ್ಥಾನಮಾನ ಕಳೆದುಕೊಳ್ಳುವರೆಗೂ ಕಾರ್ಯನಿರ್ವಹಿಸಿದ್ದರು.

share
Next Story
X