Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡೇ ತಿಂಗಳಲ್ಲಿ ಅತೀಕ್ ಅಹ್ಮದ್...

ಎರಡೇ ತಿಂಗಳಲ್ಲಿ ಅತೀಕ್ ಅಹ್ಮದ್ ಸೇರಿದಂತೆ ಉಮೇಶ್ ಪಾಲ್ ಕೊಲೆ ಹಿಂದಿನ ಆರು ಜನರ ಹತ್ಯೆ

16 April 2023 6:21 PM IST
share
ಎರಡೇ ತಿಂಗಳಲ್ಲಿ ಅತೀಕ್ ಅಹ್ಮದ್ ಸೇರಿದಂತೆ ಉಮೇಶ್ ಪಾಲ್ ಕೊಲೆ ಹಿಂದಿನ ಆರು ಜನರ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ತನ್ನ ನಿವಾಸದ ಹೊರಗೆ ಉಮೇಶ್ ಪಾಲ್ ಮತ್ತು ಇಬ್ಬರು ಪೊಲೀಸರ ಹತ್ಯೆ ನಡೆದು ಎರಡು ತಿಂಗಳುಗಳು ಕಳೆಯುವ ಮುನ್ನವೇ ಗ್ಯಾಂಗ್‌ಸ್ಟರ್‌-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನಿಗೆ ಸಂಬಂಧಿಸಿದವರು ಸೇರಿದಂತೆ ಆರು ಜನರು ಕೊಲ್ಲಲ್ಪಟ್ಟಿದ್ದಾರೆ. ಅತೀಕ್, ಆತನ ಸೋದರ ಅಶ್ರಫ್, ಪುತ್ರ ಅಸದ್, ಸಹಚರ ಅರ್ಬಾಝ್, ವಿಜಯ ಚೌಧರಿ ಅಲಿಯಾಸ್ ಉಸ್ಮಾನ್ ಮತ್ತು ಗುಲಾಂ ಹಸನ್ ಕೊಲೆಯಾದವರ ಪಟ್ಟಿಯಲ್ಲಿ ಸೇರಿದ್ದಾರೆ.

ಶನಿವಾರ ತಡರಾತ್ರಿ ಅತೀಕ್ ಮತ್ತು ಅಶ್ರಫ್ರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದಾಗ ಪೊಲೀಸರ ಉಪಸ್ಥಿತಿಯಲ್ಲಿಯೇ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಮಾಧ್ಯಮಗಳೊಂದಿಗೆ ಸಂವಾದದ ನಡುವೆಯೇ ಪತ್ರಕರ್ತರ ಸೋಗಿನಲ್ಲಿದ್ದ ಮೂವರು ದುಷ್ಕರ್ಮಿಗಳು ತೀರ ಹತ್ತಿರದಿಂದ ಹಾರಿಸಿದ ಗುಂಡುಗಳಿಗೆ ಅತೀಕ್ ಮತ್ತು ಅಶ್ರಫ್ ಬಲಿಯಾಗಿದ್ದಾರೆ.

ಗುರುವಾರವಷ್ಟೇ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್ ನ ಪುತ್ರ ಅಸದ್ ಮತ್ತು ಆತನ ಸಹಚರ ಗುಲಾಂ ಹಸನ್ ಝಾನ್ಸಿ ಬಳಿ ಉತ್ತರ ಪ್ರದೇಶ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟಿದ್ದರು.

ಉಮೇಶ್ ಪಾಲ್ ಹತ್ಯೆಯಲ್ಲಿ ಹಂತಕರು ಬಳಸಿದ್ದ ವಾಹನದ ಚಾಲಕ ಅರ್ಬಾಝ್ ಫೆ.27ರಂದು ಪ್ರಯಾಗರಾಜ್ ನಲ್ಲಿ ಕೊಲ್ಲಲ್ಪಡುವುದರೊಂದಿಗೆ ಮೊದಲ ಎನ್ಕೌಂಟರ್ ನಡೆದಿತ್ತು. ಇದರ ಬಳಿಕ ಮಾ.6ರಂದು ಪ್ರಯಾಗ್ರಾಜ್ ನಲ್ಲಿಯೇ ಉಮೇಶ್ ಪಾಲ್ ಹತ್ಯೆ ಆರೋಪಿ ವಿಜಯ ಅಲಿಯಾಸ್ ಉಸ್ಮಾನ್ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟಿದ್ದ.
ಅತೀಕ್ ನ ಸಹಚರರಾದ ಗುಡ್ಡು ಮುಸ್ಲಿಮ್, ಅರ್ಮಾನ್ ಮತ್ತು ಸಾಬೀರ್ ಈಗಲೂ ತಲೆ ಮರೆಸಿಕೊಂಡಿದ್ದು, ಪ್ರತಿಯೊಬ್ಬರೂ ತಮ್ಮ ತಲೆಯ ಮೇಲೆ ಐದು ಲಕ್ಷ ರೂ.ಗಳ ಬಹುಮಾನ ಹೊತ್ತಿದ್ದಾರೆ.

ಅಪಹರಣ ಮತ್ತು ಕೊಲೆ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಉತ್ತರ ಪ್ರದೇಶ ಪೊಲೀಸರ ಕಸ್ಟಡಿಯಲ್ಲಿದ್ದ ಅತೀಕ್ ಮತ್ತು ಅಶ್ರಫ್ ಶನಿವಾರ ತಡರಾತ್ರಿ ಮಾಧ್ಯಮಗಳ ಕ್ಯಾಮೆರಾಗಳ ಮುಂದೆಯೇ ಹತ್ಯೆಯಾಗಿದ್ದಾರೆ. ಅವರ ಹಂತಕರು ಕೈಗಳನ್ನು ಮೇಲಕ್ಕೆತ್ತಿ ಸ್ಥಳದಲ್ಲಿ ಉಪಸ್ಥಿತರಿದ್ದ ಪೊಲೀಸ್ ಅಧಿಕಾರಿಗಳಿಗೆ ಶರಣಾಗಿದ್ದನ್ನು ವೀಡಿಯೊ ದೃಶ್ಯಾವಳಿಗಳು ತೋರಿಸಿವೆ.

ಈ ಸಾವುಗಳೊಂದಿಗೆ ಅತೀಕ್ ನ ಕುಟುಂಬ ಹೆಚ್ಚುಕಡಿಮೆ ನಿರ್ನಾಮಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಹೇಳಿದರು.

ಅತೀಕ್ ಪತ್ನಿ ಶಾಯಿಸ್ತಾ ಪರ್ವೀನ್ ಕೂಡ ಉಮೇಶ ಪಾಲ್ ಹತ್ಯೆ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವ ಆಕೆಯ ಸುಳಿವು ನೀಡುವವರಿಗೆ 50,000 ರೂ.ಗಳ ಬಹುಮಾನವನ್ನು ಘೋಷಿಸಲಾಗಿದೆ.
ಅತೀಕ್ ನ ಇಬ್ಬರು ಪುತ್ರರಾದ ಉಮರ್ ಮತ್ತು ಅಲಿ ಜೈಲಿನಲ್ಲಿದ್ದರೆ, ಆತನ ಇಬ್ಬರು ಅಪ್ರಾಪ್ತ ವಯಸ್ಕ ಮಕ್ಕಳು ಪೊಲೀಸರ ನಿಕಟ ನಿಗಾದಡಿ ಮಕ್ಕಳ ರಕ್ಷಣಾ ಗೃಹದಲ್ಲಿದ್ದಾರೆ.

ತನಗೆ ಜೀವ ಬೆದರಿಕೆಯಿದೆ ಎಂದು ಅತೀಕ್ ಆತಂಕ ವ್ಯಕ್ತಪಡಿಸಿದ್ದನ್ನು ಇಲ್ಲಿ ಗಮನಿಸಬಹುದು. ಅಸದ್ ಮತ್ತು ಗುಲಾಂ ಹಸನ್ ಹತ್ಯೆಗೆ ಒಂದು ತಿಂಗಳು ಮೊದಲು ಉಮೇಶ ಪಾಲ್ ಕೊಲೆ ಪ್ರಕರಣದಲ್ಲಿ ಕಸ್ಟಡಿಯಲ್ಲಿ ತನ್ನ ರಕ್ಷಣೆಗಾಗಿ ಅತೀಕ್ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದ.

ಆದರೆ ಇದು ತಾನು ಹಸ್ತಕ್ಷೇಪ ಮಾಡುವ ವಿಷಯವಲ್ಲ ಎಂದು ಹೇಳಿದ್ದ ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಆತನಿಗೆ ಸೂಚಿಸಿತ್ತು. ‘ಸರಕಾರವು ನಿನ್ನ ಕಾಳಜಿಯನ್ನು ವಹಿಸಲಿದೆ ’ ಎಂದು ಅದು ಅತೀಕ್ ಗೆ ಹೇಳಿತ್ತು.

share
Next Story
X