ಕನಕಪುರ: ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಕನಕಪುರ, ಎ.17: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್, ನಂತರ ಬೃಹತ್ ಬೈಕ್ ರ್ಯಾಲಿ ಹಾಗೂ ರೋಡ್ಶೋ ನಡೆಸಿದರು. ಈ ವೇಳೆ ಕುಟುಂಬದ ಸದಸ್ಯರು ಸಾಥ್ ನೀಡಿದರು.
''ರಾಜ್ಯದ ಜನರು ಮುಂಬರುವ ಕೆಲವೇ ದಿನಗಳಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಆಡಳಿತವನ್ನು ಬೇರು ಸಮೇತ ಕಿತ್ತೆಸೆಯಲಿದ್ದಾರೆ'' ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
This is the rise of Karnataka with its foundation in Kanakapura. pic.twitter.com/yY72kKkrOK
— DK Shivakumar (@DKShivakumar) April 17, 2023
Next Story







