Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲ್ವಾಮಾ ದಾಳಿಯ ಹೊಣೆಯನ್ನು ಪ್ರಧಾನಿ...

ಪುಲ್ವಾಮಾ ದಾಳಿಯ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ, NSA ದೋವಲ್ ಹೊರಬೇಕು: ಮಾಜಿ ಸೇನಾ ಮುಖ್ಯಸ್ಥ

17 April 2023 4:08 PM IST
share
ಪುಲ್ವಾಮಾ ದಾಳಿಯ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ, NSA ದೋವಲ್ ಹೊರಬೇಕು: ಮಾಜಿ ಸೇನಾ ಮುಖ್ಯಸ್ಥ

ಹೊಸದಿಲ್ಲಿ: ಫುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಸಿಆರ್ಪಿಎಫ್ ಯೋಧರ ಸಾವುಗಳ ಪ್ರಾಥಮಿಕ ಹೊಣೆಗಾರಿಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ)ರಿಂದ ಸಲಹೆ ಪಡೆಯುವ ಪ್ರಧಾನಿಯವರ ನೇತೃತ್ವದ ಸರಕಾರದ ಮೇಲಿದೆ ಎಂದು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ (ನಿ) ಶಂಕರ ರಾಯ್ ಚೌಧುರಿ ಹೇಳಿದ್ದಾರೆ. 

ರಾಯ್ ಚೌಧುರಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ಅವರು ಇತ್ತೀಚಿಗೆ ಸುದ್ದಿ ಜಾಲತಾಣ ‘thewire.in’ಗೆ ನೀಡಿದ್ದ ಸಂದರ್ಶನಕ್ಕೆ ಪ್ರತಿಕ್ರಿಯಿಸುತ್ತಿದ್ದರು. 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯು ಸರಕಾರದ ಅದಕ್ಷತೆ ಮತ್ತು ನಿರ್ಲಕ್ಷ್ಯದ ಫಲಶ್ರುತಿಯಾಗಿತ್ತು ಎನ್ನುವುದನ್ನು ಮಲಿಕ್ ತನ್ನ ಸಂದರ್ಶನದಲ್ಲಿ ಬಹಿರಂಗಗೊಳಿಸಿದ್ದರು. 

ಪುಲ್ವಾಮಾದಲ್ಲಿ ಸಂಭವಿಸಿದ್ದ ಸಾವುಗಳ ಪ್ರಾಥಮಿಕ ಹೊಣೆಗಾರಿಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ)ರಿಂದ ಸಲಹೆ ಪಡೆಯುವ ಪ್ರಧಾನಿಯವರ ನೇತೃತ್ವದ ಸರಕಾರದ ಮೇಲಿದೆ. ಇದೊಂದು ಹಿನ್ನಡೆಯಾಗಿತ್ತು. ಎನ್ಎಸ್ಎ ಅಜಿತ್ ದೋವಲ್ ಕೂಡ ಈ ಹೊಂಚುದಾಳಿಯ ಹಿಂದಿನ ಗುಪ್ತಚರ ವೈಫಲ್ಯದಲ್ಲಿ ತಮ್ಮ ಪಾಲನ್ನು ಹೊಂದಿದ್ದಾರೆ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ರಾಯ್ ಚೌಧುರಿ ಹೇಳಿದರು.

2,500ಕ್ಕೂ ಅಧಿಕ ಸಿಆರ್ಪಿಎಫ್ ಸಿಬ್ಬಂದಿಗಳನ್ನು ಸಾಗಿಸುತ್ತಿದ್ದ 78 ವಾಹನಗಳ ಸಾಲನ್ನು ಪಾಕಿಸ್ತಾನದ ಗಡಿಗೆ ಅಷ್ಟೊಂದು ಹತ್ತಿರದಲ್ಲಿರುವ ಹೆದ್ದಾರಿಯ ಮೂಲಕ ಒಯ್ಯಬಾರದಿತ್ತು ಎಂದರು.

ಸಿಬ್ಬಂದಿಗಳನ್ನು ಜಮ್ಮುವಿನಿಂದ ಶ್ರೀನಗರಕ್ಕೆ ವಾಯುಮಾರ್ಗದ ಮೂಲಕ ಸಾಗಿಸಲು ಬಯಸಿದ್ದ ಸಿಆರ್ಪಿಎಫ್ ಅದಕ್ಕಾಗಿ ರಾಜನಾಥ ಸಿಂಗ್ ನೇತೃತ್ವದ ಕೇಂದ್ರ ಗೃಹ ಸಚಿವಾಲಯವನ್ನು ಕೋರಿತ್ತು. ಆದರೆ ಸಚಿವಾಲಯವು ಅದಕ್ಕೆ ವಿಮಾನವನ್ನು ಒದಗಿಸಿರಲಿಲ್ಲ,ಸಿಆರ್ಪಿಎಫ್ ನ ಕೋರಿಕೆಯನ್ನು ಒಪ್ಪಿದ್ದರೆ ಸಿಬ್ಬಂದಿಗಳ ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಮಲಿಕ್ ಸಂದರ್ಶನದಲ್ಲಿ ಹೇಳಿದ್ದಕ್ಕೆ ರಾಯಚೌಧುರಿ ಸಹಮತವನ್ನು ವ್ಯಕ್ತಪಡಿಸಿದರು.

ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ತಡೆಯುವಲ್ಲಿ ಸರಕಾರಿ ಏಜೆನ್ಸಿಗಳ ಪ್ರಮುಖ ವೈಫಲ್ಯಗಳನ್ನು ತಾನು ಬೆಟ್ಟು ಮಾಡಿದ್ದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ತನಗೆ ಮೌನವಾಗಿರುವಂತೆ ಸೂಚಿಸಿದ್ದರು ಎಂದೂ ಮಲಿಕ್ ಸಂದರ್ಶನದಲ್ಲಿ ಆರೋಪಿಸಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಎಲ್ಲ ಬೃಹತ್ ವಾಹನಗಳು ಮತ್ತು ವಾಹನಗಳ ಸಾಲುಗಳು ಸದಾ ದಾಳಿಗೆ ಸುಲಭಭೇದ್ಯವಾಗಿರುತ್ತವೆ ಎಂದು ಹೇಳಿದ ರಾಯ್ಚೌಧುರಿ,ಪುಲ್ವಾಮಾ ದಾಳಿಯು ನಡೆದ ಪ್ರದೇಶವು ಯಾವಾಗಲೂ ಇಂತಹ ದಾಳಿಗಳ ಹೆಚ್ಚಿನ ಅಪಾಯವನ್ನು ಹೊಂದಿದೆ ಎಂದರು. ರಾಯ್ಚೌಧುರಿ 1991-92ರ ನಡುವೆ ಜಮ್ಮು-ಕಾಶ್ಮೀರದಲ್ಲಿ 16 ಕಾರ್ಪ್ಸ್ ನ ಮುಖ್ಯಸ್ಥರಾಗಿದ್ದರು.

ಭಯೋತ್ಪಾದಕ ದಾಳಿಯು ಗುಪ್ತಚರ ವೈಫಲ್ಯದ ಫಲಿತಾಂಶವಾಗಿತ್ತು ಎಂಬ ಮಲಿಕ್ ಹೇಳಿಕೆಯನ್ನೂ ಒಪ್ಪಿಕೊಂಡ ರಾಯ್ ಚೌಧುರಿ,‘ಸರಕಾರವು ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ. ಸಿಬ್ಬಂದಿಗಳನ್ನು ನಾಗರಿಕ ವಾಯುಯಾನ ಇಲಾಖೆ,ವಾಯುಪಡೆ ಅಥವಾ ಬಿಎಸ್ಎಫ್ ಬಳಿ ಲಭ್ಯವಿದ್ದ ವಿಮಾನಗಳ ಮೂಲಕ ಸಾಗಿಸಬೇಕಿತ್ತು ಎನ್ನುವುದು ನನ್ನ ಖಚಿತ ಅಭಿಪ್ರಾಯವಾಗಿದೆ. ವೈಫಲ್ಯಕ್ಕೆ ಯಾರೂ ವಾರಸುದಾರರಿಲ್ಲ ’ ಎಂದು ಹೇಳಿದರು.

share
Next Story
X