Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ರಾಜ್ಯಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ;...

9 ರಾಜ್ಯಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ; 45 ಡಿಗ್ರಿ ತಲುಪಿದ ತಾಪಮಾನ

18 April 2023 10:08 AM IST
share
9 ರಾಜ್ಯಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ; 45 ಡಿಗ್ರಿ ತಲುಪಿದ ತಾಪಮಾನ

ಹೊಸದಿಲ್ಲಿ: ಪಶ್ಚಿಮ ಬಂಗಾಳ, ಬಿಹಾರ ಹಾಗೂ ಆಂಧ್ರಪ್ರದೇಶಗಳಲ್ಲಿ ಉಷ್ಣಾಂಶ ಅಪಾಯಕಾರಿ ಮಟ್ಟವನ್ನು ತಲುಪುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಿಕ್ಕಿಂ, ಜಾರ್ಖಂಡ್, ಒಡಿಶಾ ಹಾಗೂ ಉತ್ತರ ಪ್ರದೇಶದಲ್ಲಿ ಉಷ್ಣಗಾಳಿ ಬೀಸುವ ಸಾಧ್ಯತೆಯನ್ನು ಇಲಾಖೆ ಅಂದಾಜಿಸಿದೆ. ಇದರೊಂದಿಗೆ ದೇಶಾದ್ಯಂತ ಕಡುಬೇಸಿಗೆ ಆರಂಭವಾಗುವ ಸ್ಪಷ್ಟ ಸೂಚನೆ ಲಭ್ಯವಾಗಿದೆ.

ಆದಾಗ್ಯೂ ಪಶ್ಚಿಮ ಪ್ರಕ್ಷುಬ್ಧತೆ ಕಾರಣದಿಂದ ಮಂಗಳವಾರ ಜಮ್ಮು & ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಗಾಳಿ- ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್ ಹಾಗೂ ಹರ್ಯಾಣದಲ್ಲಿ ಸೋಮವಾರ ಬಿಸಿ ಗಾಳಿಯ ವಾತಾವರಣ ಇತ್ತು. ಮಂಗಳವಾರ ಕೂಡಾ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಉಷ್ಣಮಾರುತ ಅಥವಾ ಬಿಸಿಗಾಳಿ ಸಾಧ್ಯತೆ ಬಗೆಗಿನ ಆರೆಂಜ್ ಅಲರ್ಟ್ ಎನ್ನುವುದು, ಕಠಿಣ ಪರಿಶ್ರಮದಿಂದ ಅಥವಾ ಸುಧೀರ್ಘ ಅವಧಿಗೆ ಬಿಸಿಲಿನಲ್ಲಿ ಕೆಲಸ ಮಾಡುವವರು ಉಷ್ಣ ಸಂಬಂಧಿ ಅಸ್ವಸ್ಥತೆಗೆ ಒಳಗಾಗುವ ಸಾಧ್ಯತೆ ಇದೆ ಎನ್ನುವ ಸೂಚಕವಾಗಿದೆ. ಮಹಾರಾಷ್ಟ್ರದ ಸರ್ಕಾರಿ ಕಾರ್ಯಕ್ರಮದಲ್ಲಿ ಹಲವು ಗಂಟೆಗಳ ಕಾಲ ಕುಳಿತ 13 ಮಂದಿ ಮೃತಪಟ್ಟ ಘಟನೆಯ ಬಳಿಕ ಈ ಮುನ್ಸೂಚನೆ ನೀಡಲಾಗಿದೆ.

ನವಜಾತ ಶಿಶುಗಳು, ವೃದ್ಧರು ಹಾಗೂ ತೀವ್ರತರ ಅಸ್ವಸ್ಥತೆ ಇರುವವರಿಗೆ ಅಪಾಯ ಸಾಧ್ಯತೆ ಅಧಿಕ ಎಂದು ಹೇಳಲಾಗಿದೆ. ಸಾಕಷ್ಟು ನೀರು ಸೇವಿಸುವುದು, ಓಆರ್‌ಎಸ್ ಸೇವನೆ ಅಥವಾ ಮನೆಯಲ್ಲೇ ಸಿದ್ಧಪಡಿಸಿದ ಪಾನೀಯಗಳನ್ನು ಹೆಚ್ಚುಹೆಚ್ಚಾಗಿ ಸೇವಿಸುವ ಮೂಲಕ ನೀರಿನ ಅಂಶ ದೇಹದಲ್ಲಿ ಹೆಚ್ಚು ಉಳಿಯುವಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಇಲಾಖೆ ಸಲಹೆ ಮಾಡಿದೆ.

"ಪೂರ್ವದ ಕಡೆಯಿಂದ ಅಥವಾ ಬಂಗಾಳಕೊಲ್ಲಿಯ ಕಡೆಯಿಂದ ಬೀಸುವ ಗಾಳಿಯಿಂದಾಗಿ ಪೂರ್ವ ರಾಜ್ಯಗಳಲ್ಲಿ ಮೋಡಕಟ್ಟುವ ಕಾರಣದಿಂದ ಅಲ್ಪಮಟ್ಟಿಗೆ ತಾಪಮಾನ ಇಳಿಕೆ ಸಾಧ್ಯತೆ ಇದೆ. ಆದರೆ ಉಷ್ಣ, ಒಣ ಗಾಳಿ ಪೂರ್ವ ಭಾರತದ ವಾಯವ್ಯ ಕಡೆಯಿದ ಬೀಸುವ ಕಾರಣದಿಂದ ಆರ್ದ್ರತೆ ಹೆಚ್ಚಲಿದೆ. ಈ ಕಾರಣದಿಂದ ಪೂರ್ವ ರಾಜ್ಯಗಳು ಬಿಸಿ ತಡೆಯುವ ಕ್ರಮಗಳನ್ನು ಸೂಕ್ತವಾಗಿ ಅನುಸರಿಸಬೇಕು" ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ.ಮೊಹಾಪಾತ್ರ ಹೇಳಿದ್ದಾರೆ.

share
Next Story
X