Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಡಾನ್ ಸಂಘರ್ಷ: ಸಂಕಷ್ಟದಲ್ಲಿ ಸಿಲುಕಿದ...

ಸುಡಾನ್ ಸಂಘರ್ಷ: ಸಂಕಷ್ಟದಲ್ಲಿ ಸಿಲುಕಿದ 31 ಕನ್ನಡಿಗರು

ಕೇಂದ್ರ, ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್ ವಾಗ್ದಾಳಿ

18 April 2023 1:36 PM IST
share
ಸುಡಾನ್  ಸಂಘರ್ಷ: ಸಂಕಷ್ಟದಲ್ಲಿ ಸಿಲುಕಿದ 31 ಕನ್ನಡಿಗರು
ಕೇಂದ್ರ, ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಆಫ್ರಿಕಾದ ಸುಡಾನ್‌ನಲ್ಲಿ ಸೇನೆ ಹಾಗೂ  ಅರೆಸೇನಾ ಪಡೆಗಳ ಮಧ್ಯೆ  ತೀವ್ರ ಘರ್ಷಣೆ ಯಲ್ಲಿ ಭಾರತೀಯರು ಸೇರಿದಂತೆ ಹಲವರು ಸಾವನ್ನಪ್ಪಿರುವ ಬೆನ್ನಲ್ಲೇ ಆಯುರ್ವೇದ, ಗಿಡಮೂಲಿಕೆಗಳ ಮಾರಾಟಕ್ಕೆಂದು ತೆರಳಿದ್ದ  ಕರ್ನಾಟಕದ 31ಕ್ಕೂ ಅಧಿಕ  ಬುಡಕಟ್ಟು ಜನಾಂಗದವರು ಆಫ್ರಿಕನ್ ದೇಶದಲ್ಲಿ ಹಿಂಸಾಚಾರದ ನಡುವೆ ಸಿಲುಕಿಕೊಂಡಿದ್ದಾರೆ.

ಅರೆ ಅಲೆಮಾರಿ ಬುಡಕಟ್ಟು ಗುಂಪಿಗೆ ಸೇರಿರುವ  ಹಕ್ಕಿಪಿಕ್ಕಿ ಜನಾಂಗದ 31 ಜನರು ಈ ವಾರಾಂತ್ಯದಲ್ಲಿ ಘರ್ಷಣೆಗಳು ಆರಂಭವಾದಾಗಿನಿಂದ ಊಟ, ನೀರು, ಆಹಾರವಿಲ್ಲದೆ ಪರದಾಡುತ್ತಿದ್ದಾರೆ . 3-4 ದಿನಗಳಿಂದ ಜನ ವಸತಿ ಮೇಲೆ ಬಾಂಬ್, ಗುಂಡು, ಕ್ಷಿಪಣಿ ಮೂಲಕ ದಾಳಿ ನಡೆದಿರುವ ದಾಳಿಯಿಂದ ಜನರು ಜೀವಕೈಯಲ್ಲಿಡಿದು ದಿನ ಎಣಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸುಡಾನ್‌ನಲ್ಲಿನ ಬುಡಕಟ್ಟು ಜನಾಂಗದವರ ಪರಿಸ್ಥಿತಿಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (ಎಂಇಎ) ತಿಳಿಸಿದ್ದು, ಸಿಕ್ಕಿಬಿದ್ದ ಜನರು ಹೊರಗೆ ಹೋಗದಂತೆ ಹಾಗೂ  ದೇಶದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಸೂಚನೆಗಳನ್ನು ಪಾಲಿಸುವಂತೆ ಒತ್ತಾಯಿಸಿದೆ.

"ಕರ್ನಾಟಕದ 31 ಜನರ ಗುಂಪು ಸುಡಾನ್‌ನಲ್ಲಿ ಸಿಲುಕಿಕೊಂಡಿದೆ ಎಂಬ ಸಂದೇಶ ನಮಗೆ ಬಂದಿದೆ. ನಾವು ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತಿಳಿಸಿದ್ದೇವೆ. ನಾವು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸೂಚನೆಗಳನ್ನು ಅನುಸರಿಸಲು ಕನ್ನಡಿಗರನ್ನು  ಕೇಳಿಕೊಂಡಿದ್ದೇವೆ’’ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ ಮನೋಜ್ ರಾಜನ್ ಹೇಳಿದರು.

ಕೇಂದ್ರ, ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್ ವಾಗ್ದಾಳಿ

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಾಗೂ  ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವನ್ನು "ಕನ್ನಡಿಗ ವಿರೋಧಿ" ಎಂದು ಕರೆದ ಕಾಂಗ್ರೆಸ್, ಆರಂಭಿಕ ಹಂತದಲ್ಲಿಯೇ ಸುಡಾನ್‌ನಲ್ಲಿರುವ  ಹಕ್ಕಿಪಿಕ್ಕಿ ಜನಾಂಗದ ಜನರನ್ನು ರಕ್ಷಿಸಲು ಸರಕಾರ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೇಂದ್ರ ಹಾಗೂ  ಕರ್ನಾಟಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು,

ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ 31 ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಕನ್ನಡ ವಿರೋಧಿ ಮೋದಿ ಸರಕಾರವು ಅವರನ್ನು ಸ್ಥಳಾಂತರಿಸುವ ಹಾಗೂ  ಸುರಕ್ಷಿತವಾಗಿ ಕರೆತರುವ ಬದಲು ಅವರನ್ನು ಹಾಗೆಯೇ ಬಿಟ್ಟಿದೆ. ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಹಾಗೂ  ಬಿಜೆಪಿ ಸಂಸದರು ಎಲ್ಲಿದ್ದಾರೆ? ಮಿಸ್ಟರ್ ಬೊಮ್ಮಾಯಿ ನಾಚಿಕೆ ಆಗಬೇಕು ನಿಮಗೆ" ಎಂದು ಸುರ್ಜೇವಾಲಾ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ಪ್ರಧಾನಿ ಮೋದಿ ಹಾಗೂ ಬೊಮ್ಮಾಯಿ ಅವರು ಕೂಡಲೇ ಮಧ್ಯಪ್ರವೇಶಿಸಿ ಕನ್ನಡಿಗರು ಸುರಕ್ಷಿತವಾಗಿ ಮರಳುವಂತೆ ನೋಡಿಕೊಳ್ಳಬೇಕು'' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕನ್ನಡಿಗರನ್ನು  ಮರಳಿ ಮನೆಗೆ ಕರೆತರಲು ಇನ್ನಷ್ಟೇ  ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಪಿಸಿದ ಅವರು, ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

It is reported that 31 people from Karnataka belonging to Hakki Pikki tribe, are stranded in Sudan which is troubled by civil war.

I urge @PMOIndia @narendramodi, @HMOIndia, @MEAIndia and @BSBommai to immediately intervene & ensure their safe return.

— Siddaramaiah (@siddaramaiah) April 18, 2023

31 Kannadigas of Hakki Pikki Tribe have been left stranded in the civil war in Sudan.

The Anti-Kannadiga Modi Govt has left them to their fate, instead of evacuating & ensuring their safe return.

Where are Mr. Prahlad Joshi & Shobha Karandje & BJP M.P’s?

SHAME ON U MR. BOMMAI! pic.twitter.com/1HW94lBTDD

— Randeep Singh Surjewala (@rssurjewala) April 18, 2023
share
Next Story
X