Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನು ಕೊಲೆಯಾದರೆ ಸಿಎಂ, ಸಿಜೆಐಗೆ ಕೊಡಲು...

ತಾನು ಕೊಲೆಯಾದರೆ ಸಿಎಂ, ಸಿಜೆಐಗೆ ಕೊಡಲು ಪತ್ರ ಬರೆದಿಟ್ಟಿದ್ದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌

18 April 2023 1:47 PM IST
share
ತಾನು ಕೊಲೆಯಾದರೆ ಸಿಎಂ, ಸಿಜೆಐಗೆ ಕೊಡಲು ಪತ್ರ ಬರೆದಿಟ್ಟಿದ್ದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌

ಪ್ರಯಾಗರಾಜ್:‌ ತಾನು ಮೃತಪಟ್ಟಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಸುಪ್ರೀಂ ಕೋರ್ಟ್‌ (Supreme Court) ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಬೇಕೆಂದು ಸೂಚಿಸಿ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ (Atiq Ahmed) ಬರೆದಿದ್ದಾನೆನ್ನಲಾದ ಪತ್ರವನ್ನು ಅವರಿಗೆ ಕಳುಹಿಸಲಾಗುತ್ತಿದೆ ಎಂದು ಇತ್ತೀಚೆಗೆ ಹತ್ಯೆಗೀಡಾದ ಅತೀಕ್‌ ಅಹ್ಮದ್‌ ವಕೀಲರಾದ ವಿಜಯ್‌ ಮಿಶ್ರಾ ಹೇಳಿದ್ದಾರೆ.

"ಸೀಲ್‌ ಮಾಡಲಾದ ಲಕೋಟೆಯಲ್ಲಿರುವ ಈ ಪತ್ರ ನನ್ನ ಬಳಿ ಇಲ್ಲ ಅಥವಾ ಅದನ್ನು ನಾನು ಕಳುಹಿಸಿಲ್ಲ. ಅದನ್ನು ಬೇರೆಲ್ಲೋ ಇರಿಸಲಾಗಿದೆ ಹಾಗೂ ಬೇರೊಬ್ಬರು ಕಳುಹಿಸುತ್ತಾರೆ. ಅದರಲ್ಲೇನಿದೆ ಎಂದು ಗೊತ್ತಿಲ್ಲ," ಎಂದು ಮಿಶ್ರಾ ಹೇಳಿದ್ದಾರೆ.

ಅತೀಕ್‌ ಅಹ್ಮದ್‌ (60) ಮತ್ತಾತನ ಸಹೋದರ ಅಶ್ರಫ್‌ನನ್ನು ಶನಿವಾರ ರಾತ್ರಿ ಪ್ರಯಾಗರಾಜ್‌ನ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗು ಧರಿಸಿದ್ದ ಹಂತಕರು ತೀರಾ ಸನಿಹದಲ್ಲಿ ಗುಂಡಿಕ್ಕಿ ಸಾಯಿಸಿದ್ದರು. ಈ ಸಂದರ್ಭ ಪೊಲೀಸರು ಯಾವುದೇ ಪ್ರತಿ ಗುಂಡು ಹಾರಾಟ ನಡೆಸದೇ ಇರುವುದು ಸಾಕಷ್ಟು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಅತೀಕ್‌ ಮತ್ತಾತನ ಸಹೋದರನಿಗೆ ಈ ಸಂದರ್ಭ ಕೈಕೋಳ ತೊಡಿಸಲಾಗಿತ್ತು  ಹಾಗೂ ಅವರ ಈ ಭಯಾನಕ ಹತ್ಯೆ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿತ್ತು.

"ಯಾವುದೇ ದುರಂತ ಸಂಭವಿಸಿದರೆ ಅಥವಾ ಕೊಲೆಗೀಡಾದರೆ ಸೀಲ್‌ ಮಾಡಲ್ಪಟ್ಟ ಲಕೋಟೆಯಲ್ಲಿರುವ ಪತ್ರವನ್ನು ಉತ್ತರ ಪ್ರದೇಶ ಸಿಎಂ ಮತ್ತು ಸಿಜೆಐ ಅವರಿಗೆ ಕಳುಹಿಸಬೇಕೆಂದು ಅತೀಕ್‌ ಹೇಳಿದ್ದ" ಎಂದು ಮಿಶ್ರಾ ಹೇಳಿದ್ದಾರೆ.

ಎಪ್ರಿಲ್‌ 13 ರಂದು ಝಾನ್ಸಿಯಲ್ಲಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಅತೀಕ್‌ ಅಹ್ಮದ್‌ನ ಪುತ್ರ ಅಸದ್‌ನ ಅಂತ್ಯಕ್ರಿಯೆ ಈ ಘಟನೆಗಿಂತ ಕೇವಲ ಕೆಲವೇ ಗಂಟೆಗಳ ಮುಂಚೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಸೇರಲಿದ್ದಾರೆಂಬ ವದಂ‌ತಿಯ ನಡುವೆ ತನ್ನ  ಟ್ವಿಟರ್ ಬಯೋದಿಂದ ಎನ್‌ಸಿಪಿ ಚಿಹ್ನೆ ತೆಗೆದ ಅಜಿತ್‌ ಪವಾರ್

share
Next Story
X