Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲಿಂಗ ಕಾಮವನ್ನು ಅಪರಾಧಮುಕ್ತಗೊಳಿಸಿದ...

ಸಲಿಂಗ ಕಾಮವನ್ನು ಅಪರಾಧಮುಕ್ತಗೊಳಿಸಿದ ಬಳಿಕ ಅದು ಹೆಚ್ಚಿನ ಸ್ವೀಕೃತಿಯನ್ನು ಪಡೆದುಕೊಂಡಿದೆ: ಸಿಜೆಐ

18 April 2023 9:50 PM IST
share
ಸಲಿಂಗ ಕಾಮವನ್ನು ಅಪರಾಧಮುಕ್ತಗೊಳಿಸಿದ ಬಳಿಕ ಅದು ಹೆಚ್ಚಿನ ಸ್ವೀಕೃತಿಯನ್ನು ಪಡೆದುಕೊಂಡಿದೆ: ಸಿಜೆಐ

ಹೊಸದಿಲ್ಲಿ,ಎ.18: ಸರ್ವೋಚ್ಚ ನ್ಯಾಯಾಲಯವು 2018ರಲ್ಲಿ ಸಲಿಂಗ ಕಾಮವನ್ನು ಅಪರಾಧಮುಕ್ತಗೊಳಿಸಿದ ಬಳಿಕ ಅದು ಭಾರತೀಯ ಸಮಾಜದಲ್ಲಿ ಹೆಚ್ಚಿನ ಸ್ವೀಕೃತಿಯನ್ನು ಪಡೆದುಕೊಂಡಿದೆ ಎಂದು ಭಾರತದ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರು ಮಂಗಳವಾರ ಹೇಳಿದರು.

ನ್ಯಾ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸಲಿಂಗ ವಿವಾಹಗಳಿಗೆ ಮಾನ್ಯತೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ.

‘2018ರ ತೀರ್ಪು ಮತ್ತು ಇಂದಿನ ನಡುವೆ ನಮ್ಮ ಸಮಾಜವು ಸಲಿಂಗಿ ದಂಪತಿಗಳಿಗೆ ಹೆಚ್ಚಿನ ಸ್ವೀಕೃತಿಯನ್ನು ಕಂಡಿದೆ. ಇದು ತುಂಬ ಧನಾತ್ಮಕವಾಗಿದೆ ’ಎಂದು ಸಿಜೆಐ ಮಂಗಳವಾರ ವಿಚಾರಣೆ ಸಂದರ್ಭ ಹೇಳಿದರು.

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ಕೋರಿರುವ ಅರ್ಜಿದಾರರು,ಪುರುಷ ಮತ್ತು ಮಹಿಳೆ ಮಾತ್ರ ಮದುವೆಯಾಗಲು ಅವಕಾಶ ನೀಡಿರುವ ಈ ನಿಬಂಧನೆಗಳು  ಎಲ್ಜಿಬಿಟಿಕ್ಯೂಐಎ+ ಸಮುದಾಯದ ವಿರುದ್ಧ ತಾರತಮ್ಯದ್ದಾಗಿವೆ ಮತ್ತು ಘನತೆ ಹಾಗೂ ಖಾಸಗಿತನದ ಅವರ ಮೂಲಭೂತ ಹಕ್ಕನ್ನು ಉಲ್ಲಂಘಿಸಿವೆ ಎಂದು ವಾದಿಸಿದ್ದಾರೆ.

ಸಂಗಾತಿಗಳಾಗಿ ಸಹಜೀವನ ಮತ್ತು ಸಲಿಂಗ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದಿರುವುದನ್ನು ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯನ್ನು ಒಳಗೊಂಡಿರುವ ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗದು ಎಂದು ಅರ್ಜಿಗಳನ್ನು ವಿರೋಧಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಕೇಂದ್ರ ಸರಕಾರವು ವಾದಿಸಿದೆ.  ಸರಕಾರದ ನಿಲುವು,ವಿರುದ್ಧ ಲಿಂಗಗಳ ನಡುವೆ ಮಾತ್ರ ವಿವಾಹಕ್ಕೆ ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿರುವ ಆರೆಸ್ಸೆಸ್ ಮತ್ತು ಜಮೀಯತ್ ಉಲಮಾ-ಇ-ಹಿಂದ್ ನಿಲುವುಗಳಿಗೆ ಅನುಗುಣವಾಗಿದೆ.

ಮಂಗಳವಾರದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲ ಮುಕುಲ್ ರೋಹಟ್ಗಿ ಅವರು,ಸಲಿಂಗ ಸಂಬಂಧಗಳಲ್ಲಿರುವವರು ಭಿನ್ನಲಿಂಗೀಯರಂತೆ ಸಮಾನ ಹಕ್ಕುಗಳನ್ನು ಹೊಂದಿರಬೇಕು ಎಂದು ವಾದಿಸಿದರು. ವಿವಾಹವು ಕೇವಲ ಘನತೆಯ ಕುರಿತು ಮಾತ್ರವಲ್ಲ,ಅದರೊಂದಿಗೆ ಹಕ್ಕುಗಳ ಗುಚ್ಛವೂ ಬರುತ್ತದೆ ಎಂದು ವಾದಿಸಿದ ಅರ್ಜಿದಾರರ ಪರ ಇನ್ನೋರ್ವ ನ್ಯಾಯವಾದಿ ಮೇನಕಾ ಗುರುಸ್ವಾಮಿಯವರು,ಸಲಿಂಗಿ ಸಂಗಾತಿಗಳಿಗೆ ಬ್ಯಾಂಕ್ ಖಾತೆಗಳು,ಜೀವವಿಮೆ ಮತ್ತು ಆರೋಗ್ಯ ವಿಮೆ ಇತ್ಯಾದಿಗಳನ್ನು ನಿರಾಕರಿಸಲಾಗುತ್ತಿದೆ ಎಂದು ಬೆಟ್ಟು ಮಾಡಿದರು.

ಈ ನಡುವೆ ನ್ಯಾ.ಚಂದ್ರಚೂಡ್ ಅವರು,ಅಂತರ್ಧರ್ಮೀಯ ಮದುವೆಯಾಗುವವರು 30 ದಿನಗಳ ಲಿಖಿತ ನೋಟಿಸ್ ನೀಡಬೇಕೆಂಬ 1954ರ ವಿಶೇಷ ವಿವಾಹ ಕಾಯ್ದೆಯಲ್ಲಿನ ಷರತ್ತು ಅಸಾಂವಿಧಾನಿಕವಾಗಿದೆ ಎಂದು ವೌಖಿಕವಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

share
Next Story
X