Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರಿಂದಲೂ ಬಳಕೆಯಲ್ಲಿರುವ 6.5...

2018ರಿಂದಲೂ ಬಳಕೆಯಲ್ಲಿರುವ 6.5 ಲಕ್ಷಕ್ಕೂ ಅಧಿಕ ದೋಷಯುಕ್ತ ವಿವಿಪ್ಯಾಟ್ ಯಂತ್ರಗಳ ಬಗ್ಗೆ ಗಾಢಮೌನ

Thewire.in ವರದಿ

18 April 2023 11:19 PM IST
share
2018ರಿಂದಲೂ ಬಳಕೆಯಲ್ಲಿರುವ 6.5 ಲಕ್ಷಕ್ಕೂ ಅಧಿಕ ದೋಷಯುಕ್ತ ವಿವಿಪ್ಯಾಟ್ ಯಂತ್ರಗಳ ಬಗ್ಗೆ ಗಾಢಮೌನ
Thewire.in ವರದಿ

ಹೊಸದಿಲ್ಲಿ,ಎ.18: 6.5 ಲಕ್ಷಕ್ಕೂ ಅಧಿಕ ವಿವಿಪ್ಯಾಟ್ ಯಂತ್ರಗಳು ದೋಷಯುಕ್ತವಾಗಿವೆ ಎಂದು ಚುನಾವಣಾ ಆಯೋಗವು ಬೆಟ್ಟು ಮಾಡಿದೆಯೆಂಬ ಮಾಹಿತಿ ತನಗೆ ಲಭ್ಯವಾಗಿರುವುದಾಗಿ ಸುದ್ದಿ ಜಾಲತಾಣ ‘ದಿ ವೈರ್’ ವರದಿಯಲ್ಲಿ ಉಲ್ಲೇಖಿಸಿದೆ.

ಈ ಯಂತ್ರಗಳನ್ನು ಈಗ ದುರಸ್ತಿಗಾಗಿ ತಯಾರಕರಿಗೆ ಮರಳಿಸಲಾಗುತ್ತಿದೆ. ಇವು 2018ರಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗಿದ್ದ ಎಂ3 ಪೀಳಿಗೆಯ ನವೀನ ಯಂತ್ರಗಳಾಗಿವೆ ಎನ್ನುವುದನ್ನು ಇಲ್ಲಿ ಗಮನಿಸಬೇಕು. 2019ರ ಲೋಕಸಭಾ ಚುನಾವಣೆಗಳಲ್ಲಿ ಮತ್ತು ನಂತರ ನಡೆದ ವಿಧಾನಸಭಾ ಚುನಾವಣೆಗಳಿಗಾಗಿ ಒಟ್ಟು 17.4 ಲ.ವಿವಿಪ್ಯಾಟ್ ಯಂತ್ರಗಳ ಬಳಕೆಯನ್ನು ಸೂಚಿಸಲಾಗಿತ್ತು. ಅಂದರೆ ಈ ಪೈಕಿ ಶೇ.37ರಷ್ಟು ಯಂತ್ರಗಳು ದೋಷಯುಕ್ತವಾಗಿವೆ ಎನ್ನುವುದನ್ನು ಈಗ ಆಯೋಗವು ಕಂಡುಕೊಂಡಿದೆ ಎಂದು ವರದಿಯು ಬೆಟ್ಟು ಮಾಡಿದೆ.

ವಿವಿಪ್ಯಾಟ್ ಗಳ ಇಡೀ ಸರಣಿಯನ್ನು ಬದಲಿಸಲಾಗುತ್ತಿದೆ ಎನ್ನುವುದು ಇನ್ನಷ್ಟು ಹೆಚ್ಚು ಅಚ್ಚರಿಯ ವಿಷಯವಾಗಿದೆ. ದೋಷಯುಕ್ತ ಯಂತ್ರಗಳನ್ನು ದುರಸ್ತಿಗಾಗಿ ಅವುಗಳ ತಯಾರಕರಾದ ಹೈದರಾಬಾದ್ನ ಇಸಿಐಎಲ್ ಮತ್ತು ಪಂಚಕುಲಾದ ಬಿಇಎಲ್ ಗೆ ರವಾನಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಈ ಸರಣಿಗಳ ವಿವಿಪ್ಯಾಟ್ ಯಂತ್ರಗಳನ್ನು 2018ರಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗಿತ್ತು ಮತ್ತು ಆಗಿನಿಂದ ನಡೆದ ಎಲ್ಲ ಚುನಾವಣೆಗಳಲ್ಲಿ ಬಳಸಲಾಗಿತ್ತು. ದೋಷಯುಕ್ತ ಯಂತ್ರಗಳನ್ನು ದೇಶಾದ್ಯಂತದಿಂದ ಸಂಗ್ರಹಿಸಲಾಗಿದೆ ಮತ್ತು ಹೊಸ ಬದಲಿ ಯಂತ್ರಗಳು ಈಗ ಹೆಚ್ಚುಕಡಿಮೆ ಎಲ್ಲ ಜಿಲ್ಲೆಗಳಿಗೆ ತಲುಪಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯು ಹೇಳಿದೆ.

ಪಾರದರ್ಶಕತೆ ಇಂದಿನ ಅಗತ್ಯ:ತಜ್ಞರು

ಹೆಚ್ಚಿನ ಸಂಖ್ಯೆಯಲ್ಲಿ, ಅದೂ ಸರಣಿಗಳಲ್ಲಿ ದೋಷಪೂರಿತ ಯಂತ್ರಗಳ ಬಗ್ಗೆ ತಜ್ಞರು ಎಚ್ಚರಿಕೆಯ ಗಂಟೆಯನ್ನು ಮೊಳಗಿಸಿದ್ದಾರೆ. ಸಾಮಾನ್ಯವಾಗಿ ಚುನಾವಣೆಯೊಂದರಲ್ಲಿ ಸುಮಾರು 4,000 ಇವಿಎಂಗಳು ದೋಷಯುಕ್ತವಾಗಿರುತ್ತವೆ. ಇದಕ್ಕೆ ಅನುಗುಣವಾಗಿ ಎಲೆಕ್ಟ್ರೋ ಮೆಕ್ಯಾನಿಕಲ್ ಸಾಧನಗಳಾಗಿರುವ ಮತ್ತು ಹೆಚ್ಚಿನ ಹಾನಿಯ ಅಪಾಯವನ್ನು ಹೊಂದಿರುವ ವಿವಿಪ್ಯಾಟ್ ಗಳ ಸಂಖ್ಯೆ ಇದಕ್ಕಿಂತ ಗರಿಷ್ಠ 10 ಪಟ್ಟು ಇರಬಹುದು. ಆದರೆ 6.5 ಲ.ಕ್ಕೂ ಅಧಿಕ ವಿವಿಪ್ಯಾಟ್ ಯಂತ್ರಗಳು ದೋಷಯುಕ್ತವಾಗಿವೆ ಎಂದು ನೀವು ಹೇಳುತ್ತಿರುವುದು ನಿಜವಾಗಿದ್ದರೆ ಅದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯೋಕ್ತ ಎಸ್.ವೈ.ಖುರೇಷಿ ಹೇಳಿದರು.

ಇವಿಎಂಗಳು ಮತ್ತು ವಿವಿಪ್ಯಾಟ್ ಗಳ ಸದೃಢತೆ ಮತ್ತು ದಕ್ಷತೆಯನ್ನು ತಯಾರಕರು ಮತ್ತು ಚುನಾವಣಾ ಆಯೋಗ ಸಮರ್ಥಿಸಿಕೊಂಡಿವೆ. ತಾತ್ವಿಕವಾಗಿ ಈ ಯಂತ್ರಗಳನ್ನು ಪರೀಕ್ಷಿಸಲು ವಿವಿಧ ತಜ್ಞರಿಗೆ ಒಪ್ಪಿಸಬೇಕು. ಪಾರದರ್ಶಕತೆಯ ಕೊರತೆ ಮತ್ತು ಗೋಪ್ಯತೆಯ ಮುಸುಕು ಸಮಸ್ಯೆಯಾಗಿದೆ ಎಂದು ಐಐಟಿ-ಕಾನ್ಪುರದ ಕಂಪ್ಯೂಟರ್ ವಿಜ್ಞಾನ ಪ್ರೊಫೆಸರ್ ಸಂದೀಪ್ ಶುಕ್ಲಾ ಹೇಳಿದರು.

share
Next Story
X