Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸಗಢದಲ್ಲಿ ಅದಾನಿ ಗಣಿ ಪ್ರದೇಶವನ್ನು...

ಛತ್ತೀಸಗಢದಲ್ಲಿ ಅದಾನಿ ಗಣಿ ಪ್ರದೇಶವನ್ನು ಅರಣ್ಯ ಜಮೀನಿಗೆ ವಿಸ್ತರಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ: ವರದಿ

19 April 2023 5:37 PM IST
share
ಛತ್ತೀಸಗಢದಲ್ಲಿ ಅದಾನಿ ಗಣಿ ಪ್ರದೇಶವನ್ನು ಅರಣ್ಯ ಜಮೀನಿಗೆ ವಿಸ್ತರಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ: ವರದಿ

ಮುಂಬೈ: ಛತ್ತೀಸಗಢದ ಗಣಿಯೊಂದರಲ್ಲಿ ಹೊರತೆಗೆಯದ ಲಕ್ಷಾಂತರ ಟನ್‌ ಕಲ್ಲಿದ್ದಲು ಹಾಗೆಯೇ ಉಳಿದಿರುವಾಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯದಲ್ಲಿ ಗಣಿಗಾರಿಕೆಗಾಗಿ 3,000 ಹೆಕ್ಟೇರ್‌ ಅರಣ್ಯ ಜಮೀನನ್ನು ತೆರವುಗೊಳಿಸಲು ಅನುಮತಿ ನೀಡಿ ಅದಾನಿ ಸಂಸ್ಥೆಗೆ ಸಹಕರಿಸಿತ್ತು ಎಂದು ತಿಳಿದು ಬಂದಿದೆ ಎಂದು thewire.in ವರದಿ ಮಾಡಿದೆ.

ಅದಾನಿ ಸಮೂಹಕ್ಕೆ ತನ್ನ ಗಣಿಗಾರಿಕೆ ಪ್ರದೇಶವನ್ನು ಹಸ್ದಿಯೋ ಆರಂದ್‌ ಅರಣ್ಯ ಪ್ರದೇಶದಲ್ಲಿ ಸರ್ಕಾರ ಅನುಮತಿಸಿತ್ತು. ಈ ಪ್ರದೇಶವು ಮಧ್ಯ ಭಾರತದಲ್ಲಿ ಇನ್ನೂ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಂದ ಬಾಧಿತವಾಗದ ಅರಣ್ಯ ಪ್ರದೇಶವಾಗಿದೆ.

ಇಂಡಿಯನ್‌ ಕೌನ್ಸಿಲ್‌ ಆಫ್‌ ಫಾರೆಸ್ಟ್ರಿ ರಿಸರ್ಚ್‌ ಎಂಡ್‌ ಎಜುಕೇಶನ್‌ ಮತ್ತು ವೈಲ್ಡ್‌ಲೈಫ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಹಸ್ದಿಯೋ ಆರಂದ್‌ ಗಣಿ ಪ್ರದೇಶದಲ್ಲಿ ಮೇ 2019 ಹಾಗೂ ಫೆಬ್ರವರಿ 2021 ರಲ್ಲಿ ಅಧ್ಯಯನ ನಡೆಸಿತ್ತು. ಇಲ್ಲಿ ಕಲ್ಲಿದ್ದಲು ಪಡೆಯಲು ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆ ಮಣ್ಣು ಅಗೆಯಲಾಗಿತ್ತು ಎಂದು ತಿಳಿದು ಬಂದಿತ್ತು ಆದರೂ ಅದಾನಿ ಸಂಸ್ಥೆಗೆ ಇನ್ನಷ್ಟು ಅರಣ್ಯ ಜಮೀನಿನಲ್ಲಿ ಗಣಿಗಾರಿಕೆಗೆ ಅನುಮತಿಸಲಾಗಿತ್ತು ಎಂದು ವರದಿಯಾಗಿದೆ.

ಗಣಿ ವಿಸ್ತರಣೆಗೆ ಫೆಬ್ರವರಿ 2022 ರಲ್ಲಿ ಅನುಮತಿ ನೀಡುವ ವೇಳೆ ಮೋದಿ ಸರ್ಕಾರ ಅದರ ಪರಿಸರ ಪರಿಣಾಮವನ್ನು ನಿಲಕ್ಷಿಸಿತ್ತು ಎಂದು ವರದಿಯೊಂದು ಹೇಳಿದೆ.

ಅದಾನಿ ಸಂಸ್ಥೆಯು ಪರ್ಸಾ ಈಸ್ಟ್‌ ಮತ್ತು ಕಂತ ಬಸನ್‌ ಎಂಬಲ್ಲಿ 2013 ರಿಂದ ರಾಜಸ್ಥಾನ ರಾಜ್ಯ ವಿದ್ಯುತ್‌ ಉತ್ಪಾನದ ನಿಗಮ್‌ ಲಿಮಿಟೆಡ್‌ ಪರವಾಗಿ ನಡೆಸುತ್ತಿದೆ. ರಾಜಸ್ಥಾನ ಸರ್ಕಾರ ಮತ್ತು ಅದಾನಿ ಸಮೂಹದ ನಡುವಿನ ಒಪ್ಪಂದ ಕೂಡ ಚರ್ಚೆಗೆ ಕಾರಣವಾಗಿದೆ ಎಂದು ವರದಿಯಾಗಿದೆ. ರಾಜಸ್ಥಾನ ಸರ್ಕಾರ ಅದಾನಿ ಸಂಸ್ಥೆಯನ್ನು ಗಣಿಗಾರಿಕೆ ಗುತ್ತಿಗೆದಾರನಾಗಿ ಮಾತ್ರ ಒಪ್ಪಂದಕ್ಕೆ ಸಹಿ ಹಾಕದೆ ಶೇ 74 ಪಾಲದಾರಿಕೆ ನೀಡಿತ್ತು. ಈ ಒಪ್ಪಂದ 2007ರದ್ದಾಗಿದ್ದು ಆಗ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರವಿತ್ತು. ಈಗ ಅಲ್ಲಿ ಕಾಂಗ್ರೆಸ್‌  ಸರ್ಕಾರವಿದ್ದರೂ ಈ ಯೋಜನೆ ಮುಂದುವರಿದಿದೆ.

ಯೋಜನೆಯ ಎರಡನೇ ಹಂತಕ್ಕೆ  1.137 ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ 2.5 ಲಕ್ಷ ಮರಗಳನ್ನು ಕಡಿಯಲು  ಅರಣ್ಯ ಅನುಮತಿಗಾಗಿ ರಾಜಸ್ಥಾನ ಸರ್ಕಾರ ಪರಿಸರ ಸಚಿವಾಲಯವನ್ನು ಕೋರಿತ್ತು.

ಫೆಬ್ರವರಿ 2022 ರಲ್ಲಿ  ಕೇಂದ್ರ ಪರಿಸರ ಸಚಿವಾಲಯವು ವಿಸ್ತರಣಾ ಯೋಜನೆಗೆ ಅರಣ್ಯ ಸಂರಕ್ಷಣಾ ಕಾಯಿದೆ 1980 ಅನ್ವಯ ಅನುಮತಿಸಿತ್ತು. ಆದರೆ ಅರಣ್ಯ ಭೂಮಿ ರಕ್ಷಣೆಗಾಗಿ ಜನರಿಂದ ಸತತ ಒತ್ತಡ ಎದುರಿಸುತ್ತಿದ್ದ ಛತ್ತೀಸಗಢ ಸರ್ಕಾರ ಅಂತಿಮ ಅನುಮೋದನೆಯನ್ನು ತಡೆಹಿಡಿದಿದೆ.

share
Next Story
X