Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ನಕಲಿ ಸಿಗರೇಟ್, ನಿಷೇಧಿತ...

ಉಡುಪಿ: ನಕಲಿ ಸಿಗರೇಟ್, ನಿಷೇಧಿತ ಇ-ಸಿಗರೇಟ್ ಜಾಲ ಪತ್ತೆ

ನಾಲ್ವರ ಬಂಧನ, ಸೊತ್ತು ವಶ

19 April 2023 7:04 PM IST
share
ಉಡುಪಿ: ನಕಲಿ ಸಿಗರೇಟ್, ನಿಷೇಧಿತ ಇ-ಸಿಗರೇಟ್ ಜಾಲ ಪತ್ತೆ
ನಾಲ್ವರ ಬಂಧನ, ಸೊತ್ತು ವಶ

ಉಡುಪಿ, ಎ.19: ನಕಲಿ ಸಿಗರೇಟ್ ಹಾಗೂ ನಿಷೇಧಿತ ಇ-ಸಿಗರೇಟ್ ಜಾಲ ವನ್ನು ಪತ್ತೆ ಹಚ್ಚಿರುವ ಪಡುಬಿದ್ರಿ ಮತ್ತು ಮಣಿಪಾಲ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹಾಗೂ ಪಡುಬಿದ್ರೆ ಠಾಣೆಯಲ್ಲಿ 1 ಪ್ರಕರಣ ದಾಖಲಿಸ ಲಾಗಿದೆ. ಈ ಮೂರು ಪ್ರಕರಣ ಗಳಲ್ಲಿ ಒಟ್ಟು 6,34,970ರೂ. ಮೌಲ್ಯದ ನಕಲಿ ಐಟಿಸಿ ಕಂಪೆನಿಯ ಗೋಲ್ಡ್ ಫೆಕ್ಸ್, ವಿದೇಶಿ ಕಂಪನಿಯ ಸಿಗರೇಟ್ ಹಾಗೂ ನಿಷೇಧಿತ ಇ- ಸಿಗರೇಟ್‌ಗಳನ್ನು  ವಶಪಡಿಸಿಕೊಳ್ಳಲಾಗಿದೆ.

ಎ.17ರಂದು ಬೆಳಗ್ಗೆ 9.30 ಗಂಟೆಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 4,79,970ರೂ. ಮೌಲ್ಯದ ಸಿಗರೇಟ್ ಬಂಡಲ್‌ಗಳು ಮತ್ತು ನಿಷೇಧಿತ ಇ-ಸಿಗರೇಟ್‌ಗಳನ್ನು ವಶಪಡಿಸಿ ಕೊಂಡ ಪೊಲೀಸರು ಇಬ್ಬರು ಬಂಧಿಸಿದ್ದರು. ಸಾಗಾಟಕ್ಕೆ ಉಪಯೋಗಿಸಿದ ಕಾರು ಗಳನ್ನು ಕೂಡ ದಸ್ತಗಿರಿ ಮಾಡಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಸೂಚನೆಯಂತೆ ಪೊಲೀಸರು ಎ.18ರಂದು ಅಕ್ರಮವಾಗಿ ಇ- ಸಿಗರೇಟ್ ಸಂಗ್ರಹ ಹಾಗೂ ವಿದೇಶಿ ಕಂಪನಿಯ ಸಿಗರೇಟು ಗಳನ್ನು ಎಂಆರ್‌ಪಿ ದರ ನಮೂದಿಸದೇ ಕೋಟ್ಪಾ ಕಾಯಿದೆ ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಮಣಿಪಾಲದ ಶೀಶಾ ಪ್ಯಾರಡೈಸ್ ಮತ್ತು ಸ್ಮೋಕ್ ಕೋ ಎಂಬ ಅಂಗಡಿಗಳ ಮೇಲೆ ವಿಶೇಷ ದಾಳಿ ನಡೆಸಿದರು.

ಈ ಸಂಬಂಧ ಶೀಶಾ ಪ್ಯಾರಡೈಸ್ ಅಂಗಡಿ ಮಾಲಕ ಕೇರಳ ಉಪ್ಪಳದ ಅನ್ಸಾರ್ ಹಾಗೂ ಸ್ಮೋಕ್ ಕೊ ಅಂಗಡಿ ಮಾಲಕ ಮುಫೀನ್ ಎಂಬವರನ್ನು ಬಂಧಿಸಿದ್ದಾರೆ. ಈ ಎರಡೂ ಅಂಗಡಿಗಳಿಂದ ಸುಮಾರು 1,50,000 ರೂ. ಮೌಲ್ಯದ 113 ವಿವಿಧ ಕಂಪೆನಿಯ ನಿಷೇದಿತ ಇ-ಸಿಗರೇಟ್‌ಗಳು ಹಾಗೂ 5,000ರೂ ಮೌಲ್ಯದ ವಿದೇಶಿ ಕಂಪನಿಯ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಇವುಗಳ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಚಾರಣೆಯ ವೇಳೆ ಐ.ಟಿ.ಸಿ ಕಂಪನಿಯ ನಕಲಿ ಸಿಗರೇಟುಗಳನ್ನು ತಯಾರಿಸಿ ಮಾರಾಟ ಮಾಡಿರುವ ಕುರಿತ ಪಡುಬಿದ್ರಿ ಠಾಣೆಯಲ್ಲಿ ದಾಖಲಾದ ಪ್ರಕರಣ ದಲ್ಲಿ ಅನ್ಸಾರ್ ಭಾಗಿಯಾಗಿದ್ದು, ಅದೇ ರೀತಿ ಮುಫೀನ್ ಮುಂಬೈನ ಕ್ರಾಫ್ಟ್ ಮಾರುಕಟ್ಟೆಯಲ್ಲಿ ನಿಷೇದಿತ ಇ-ಸಿಗರೇಟುಗಳನ್ನು ಖರೀದಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ಮುಂದುವರೆದಿದೆ ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಡಿವೈಎಸ್ಪಿ ದಿನಕರ ಕೆ.ಪಿ. ನಿರ್ದೇಶನದಂತೆ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ನೇತೃತ್ವದಲ್ಲಿ ಮಣಿಪಾಲ  ಠಾಣಾ ಎಸ್ಸೈ ರುಕ್ಮಾ ನಾಯ್ಕ್, ಎಎಸ್ಸೈ ಶೈಲೇಶ್ ಕುಮಾರ್, ಸಿಬ್ಬಂದಿ ಅರುಣ್ ಕುಮಾರ್, ರೇವಣಸಿದ್ಧ, ಉಮೇಶ್ ಯಾದವ್ ಈ ಕಾರ್ಯಾಚರಣೆ ನಡೆಸಿದ್ದಾರೆ.

‘ಸರಕಾರವು ಇ-ಸಿಗರೇಟ್‌ನ್ನು ನಿಷೇಧ ಮಾಡಿದ್ದು, ನಕಲಿ ಐಟಿಸಿ ಕಂಪೆನಿಯ ಗೋಲ್ಡ್ ಫೆಕ್ಸ್, ವಿದೇಶಿ ಕಂಪನಿಯ ಸಿಗರೇಟ್ ಹಾಗೂ ನಿಷೇಧಿತ ಇ- ಸಿಗರೇಟ್‌ಗಳನ್ನು ಪಡುಬಿದ್ರಿ ಮತ್ತು ಮಣಿಪಾಲದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದ್ದು, ಸಾರ್ವಜನಿಕರಿಗೆ ನಿಷೇದಿತ ಇ-ಸಿಗರೇಟು ಹಾಗೂ ನಕಲಿ ಸಿಗರೇಟುಗಳ ಮಾರಾಟ ಮಾಡುವ ಅಂಗಡಿ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’

-ಅಕ್ಷಯ್ ಮಚ್ಚೀಂದ್ರ ಹಾಕೆ, ಉಡುಪಿ ಎಸ್ಪಿ

share
Next Story
X