Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10,000 ಉದ್ಯೋಗಿಗಳ ವಜಾ ಪ್ರಕ್ರಿಯೆ...

10,000 ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದ ಮೆಟಾ

19 April 2023 9:05 PM IST
share
10,000 ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದ ಮೆಟಾ

ಹೊಸದಿಲ್ಲಿ,ಎ.19: ಹೆಚ್ಚಿನ ದಕ್ಷತೆಯನ್ನು ಸಾಧಿಸಲು ತಂಡಗಳ ಪುನರ್ರಚನೆಗೆ ಮುಂದಾಗಿರುವ ಫೇಸ್ಬುಕ್ನ ಮಾತೃಸಂಸ್ಥೆ ತನ್ನ 10,000 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಿದೆ ಎಂದು ಕಂಪನಿಯ ಮೆಮೊ ಉಲ್ಲೇಖಿಸಿ ಬ್ಲೂಮ್ ಬರ್ಗ್ ನ್ಯೂಸ್ ವರದಿ ಮಾಡಿದೆ. ಉದ್ಯೋಗ ಕಡಿತ ಪ್ರಕ್ರಿಯೆಯು ಫೇಸ್‌ಬುಕ್‌, ವಾಟ್ಸ್ಆ್ಯಪ್, ಇ‌ನ್‌ಸ್ಟಾಗ್ರಾಂ ಮತ್ತು ರಿಯಾಲಿಟಿ ಲ್ಯಾಬ್ಸ್ ಮೇಲೆ ಪರಿಣಾಮ ಬೀರಲಿದೆ. ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಕಂಪನಿಯ 10,000 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಮೆಟಾ ಸ್ಥಾಪಕ ಮಾರ್ಕ್ ಝುಕೆರ್ಬರ್ಗ್ ಅವರು ಕಳೆದ ಮಾರ್ಚ್ ನಲ್ಲಿ ಪ್ರಕಟಿಸಿದ್ದರು.ಮೇ ತಿಂಗಳಿನಲ್ಲಿ ಇನ್ನೊಂದು ಸುತ್ತಿನ ಉದ್ಯೋಗಿಗಳ ವಜಾ ನಡೆಯಲಿದೆ.

ಮೆಟಾ ಕಳೆದ ವರ್ಷದ ನವಂಬರ್ ನಲ್ಲಿ ತನ್ನ ಕಾರ್ಯಪಡೆಯ ಸುಮಾರು ಶೇ.13ರಷ್ಟು ಅಥವಾ ಸುಮಾರು 11,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಕಂಪನಿಯು ಮೊದಲ ತ್ರೈಮಾಸಿಕದುದ್ದಕ್ಕೂ ತನ್ನ ಹೊಸ ನೇಮಕಾತಿಗಳನ್ನು ನಿಲ್ಲಿಸಿತ್ತು. ಸಿಲಿಕಾನ್ ವ್ಯಾಲಿಯ ಇತರ ಟೆಕ್ ಕಂಪನಿಗಳೂ ಇಂತಹುದೇ ವೆಚ್ಚ ಕಡಿತ ಕ್ರಮಗಳನ್ನು ತೆಗೆದುಕೊಂಡಿವೆ.

ತನ್ನ ಮ್ಯಾನೇಜರ್ ಗಳಿಗೆ ಮೆಟಾ ವಿತರಿಸಿರುವ ಮೆಮೊದಲ್ಲಿ, ತಂಡಗಳನ್ನು ಮರುಸಂಘಟಿಸಲಾಗುತ್ತದೆ ಮತ್ತು ಉಳಿದ ಉದ್ಯೋಗಿಗಳನ್ನು ನೂತನ ಮ್ಯಾನೇಜರ್ ಗಳ ಅಧೀನದಲ್ಲಿ ಕೆಲಸ ಮಾಡಲು ಮರುನಿಯೋಜಿಸಲಾಗುವುದು ಎಂದು ತಿಳಿಸಲಾಗಿದೆ. ಉದ್ಯೋಗ ವಜಾ ಆಘಾತವನ್ನು ಅರಗಿಸಿಕೊಳ್ಳಲು ಕಾಲಾವಕಾಶ ನೀಡುವ ದೃಷ್ಟಿಯಿಂದ ಮೆಟಾ ವರ್ಕ್ ಫ್ರಮ್ ಹೋಮ್ ಸಾಧ್ಯವಿರುವವರು ಹಾಗೆ ಮಾಡಬಹುದು ಎಂದು ತನ್ನ ಎಲ್ಲ ಉತ್ತರ ಅಮೆರಿಕ ಸಿಬ್ಬಂದಿಗಳಿಗೆ ತಿಳಿಸಿದೆ.

ಉದ್ಯೋಗ ವಜಾ ಪ್ರಕ್ರಿಯೆಯು ಸಾವಿರಾರು ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಮತ್ತು ಹಲವರು ಸಂಕಷ್ಟದ ಸಮಯದಲ್ಲಿ ನಿರುದ್ಯೋಗಿಗಳಾಗಿ ಉಳಿಯಲಿದ್ದಾರೆ. ಆದರೆ ಕಂಪನಿಯ ದೀರ್ಘಾವಧಿ ಯಶಸ್ಸಿಗಾಗಿ ಈ ಕ್ರಮವು ಅಗತ್ಯವಾಗಿದೆ ಎಂದು ಹೇಳಿದ್ದ ಝಕೆರ್ಬರ್ಗ್,ಬೇರ್ಪಡಿಕೆ ಪ್ಯಾಕೇಜ್ಗಳು ಮತ್ತು ಉದ್ಯೋಗ ನಿಯೋಜನೆ ಸೇವೆಗಳು ಸೇರಿದಂತೆ ಪೀಡಿತ ಉದ್ಯೋಗಿಗಳಿಗೆ ಬೆಂಬಲವನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು.

share
Next Story
X