Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿಗೆ ಯುದ್ಧ ನಿಲ್ಲಿಸುವ ಶಕ್ತಿ...

ಮೋದಿಗೆ ಯುದ್ಧ ನಿಲ್ಲಿಸುವ ಶಕ್ತಿ ಇದ್ದರೆ, ಸುಡಾನ್ ಯುದ್ಧ ನಿಲ್ಲಿಸಿ ನಮ್ಮ ಜನರನ್ನು ಕರೆತರಲಿ: ಕಾಂಗ್ರೆಸ್ ಒತ್ತಾಯ

19 April 2023 9:16 PM IST
share
ಮೋದಿಗೆ ಯುದ್ಧ ನಿಲ್ಲಿಸುವ ಶಕ್ತಿ ಇದ್ದರೆ, ಸುಡಾನ್ ಯುದ್ಧ ನಿಲ್ಲಿಸಿ ನಮ್ಮ ಜನರನ್ನು ಕರೆತರಲಿ: ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಎ.19: ಪ್ರಧಾನಿ ಮೋದಿಗೆ ಯುದ್ಧ ನಿಲ್ಲಿಸುವ ಶಕ್ತಿ ಇದ್ದರೆ, ಸುಡಾನ್‍ನಲ್ಲಿ ನಡೆಯುತ್ತಿರುವ ನಾಗರಿಕ ಯುದ್ಧ ನಿಲ್ಲಿಸಿ, ನಮ್ಮ ಜನರನ್ನು ಸುರಕ್ಷಿತವಾಗಿ ಕರೆತರಲಿ ಎಂದು ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ತಿಳಿಸಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಆಫ್ರಿಕಾದ ಸುಡಾನ್ ದೇಶದಲ್ಲಿ ನಾಗರಿಕ ಧಂಗೆ ಉದ್ಭವಿಸಿದ್ದು, ರಾಜ್ಯದ ಹಕ್ಕಿಪಿಕ್ಕಿ ಸಮಾಜದ 31 ಮಂದಿ ಸಿಲುಕಿದ್ದಾರೆ. ಇವರನ್ನು ರಕ್ಷಿಸಿ ಭಾರತಕ್ಕೆ ಸುರಕ್ಷಿತವಾಗಿ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಯುದ್ಧ ಭೀತಿಯಲ್ಲಿ ಸಿಲುಕಿರುವ ರಾಜ್ಯದ ಅಕ್ಕಿಪಿಕ್ಕಿ ಸಮುದಾಯದ ಜನರನ್ನು ರಕ್ಷಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದಾಗ, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಸಿಟ್ಟಿನಿಂದ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವರಿಗೆ ಅಕ್ಕಿ ಪಿಕ್ಕಿ ಸಮುದಾಯದ ಜನರಿಗೆ ಆ ದೇಶದಲ್ಲಿ ಅಗತ್ಯವಿರುವ ನೆರವಿನ ಬಗ್ಗೆ ಕನಿಷ್ಠ ಮಾಹಿತಿ ಇದೆಯಾ ಎಂದು ರಾಜೀವ್ ಗೌಡ ಪ್ರಶ್ನಿಸಿದರು.

ಈ ಹಿಂದೆ ವಿದೇಶದಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾಗ ಟ್ವಿಟರ್ ಮೂಲಕ ತಮಗೆ ನೆರವು ಬೇಕು ಎಂದು ಭಾರತ ಸರಕಾರವನ್ನು ಸಂಪರ್ಕಿಸುತ್ತಿದ್ದರು. ಈಗ ಸರಕಾರ ಅದನ್ನು ಮರೆತಿದ್ದಾರಾ, ಸಿದ್ದರಾಮಯ್ಯನವರು ಅಲ್ಲಿರುವ ರಾಜ್ಯದ ಜನರನ್ನು ಸುರಕ್ಷಿತವಾಗಿ ಕರೆತನ್ನಿ ಎಂದು ಸೌಜನ್ಯಯುತವಾಗಿ ಕೇಳಿದರೆ ಈ ರೀತಿ ಉತ್ತರ ನೀಡುವುದು ಸರಿಯೇ, ಸುಡಾನ್‍ನಲ್ಲಿರುವ ನಮ್ಮ ಜನರ ಪರಿಸ್ಥಿತಿ ಬಗ್ಗೆ ಕೇಂದ್ರ ಸರಕಾರಕ್ಕೆ ಯಾವುದಾದರೂ ಮಾಹಿತಿ ಇದೆಯಾ ಎಂದು ರಾಜೀವ್ ಗೌಡ ಪ್ರಶ್ನಿಸಿದರು. 

ವಿದೇಶದಲ್ಲಿರುವ ಭಾರತೀಯರ ಸ್ಥಳಾಂತರ ವಿಚಾರವನ್ನು ರಾಜಕೀಯಗೊಳಿಸುವ ವಿಚಾರವಾಗಿ ಮಾತನಾಡುವುದಾದರೆ, ಬಿಜೆಪಿ ರಾಷ್ಟ್ರೀಯ ಟ್ವಿಟರ್ ಖಾತೆಯಲ್ಲಿ ಜೆ.ಪಿ. ನಡ್ಡಾ ಅವರು ರಾಜ್ಯದಲ್ಲಿ ಭಾಷಣ ಮಾಡುತ್ತಾ, ಮೋದಿ ಅವರು ರಷ್ಯಾ ಉಕ್ರೇನ್ ಯುದ್ಧ ತಡೆದು 22,500 ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇವರು ಹೇಳುವಂತೆ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಯುದ್ಧವನ್ನು ನಿಲ್ಲಿಸಲಾಗಿತ್ತಾ, ಮೋದಿ ಅವರಿಗೆ ಆ ಶಕ್ತಿ ಇದೆಯಾ, ಭಾರತೀಯರ ಸ್ಥಳಾಂತರ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವವರು ಯಾರು ಎಂದು ರಾಜೀವ್ ಗೌಡ ಪ್ರಶ್ನಿಸಿದರು.

ವಿದೇಶಾಂಗ ಸಚಿವರು ಟ್ವಿಟರ್‍ನಲ್ಲಿ ಈ ರೀತಿ ಆಟವಾಡುವ ಬದಲು, ಜವಾಬ್ದಾರಿ ನಿಭಾಯಿಸಿ ಕೆಲಸ ಮಾಡಿದರೆ ಉತ್ತಮ. ಅವರು ಸೌಜನ್ಯತೆ ಕಲಿತು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಿಗೆ ಅಪಮಾನ ಮಾಡುವುದನ್ನು ನಿಲ್ಲಿಸಲಿ. ನಮ್ಮ ರಾಜ್ಯದ ಜನರನ್ನು ಸುರಕ್ಷಿತವಾಗಿ ಕರೆತನ್ನಿ ಎಂಬುದು ನಮ್ಮ ಬೇಡಿಕೆ ಎಂದು ರಾಜೀವ್ ಗೌಡ ತಿಳಿಸಿದರು.

ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಮಾತನಾಡಿ, ಕನ್ನಡಿರಗ ಅಸ್ಮಿತೆ ಬಗ್ಗೆ ಯಾವಾಗಲೇ ಪ್ರಶ್ನೆ ಉದ್ಭವಿಸಿದರೂ ಬಿಜೆಪಿ ಮೌನವಾಗುತ್ತದೆ. ಆದರೆ 40 ಪರ್ಸೆಂಟ್ ಕಮಿಷನ್ ವಿಚಾರವಾದರೆ ಎಲ್ಲಿಲ್ಲದ ಆಸಕ್ತಿ ತೋರುತ್ತಾರೆ. ಲೋಕಸಭೆಯಲ್ಲಿ 26 ಬಿಜೆಪಿ ಸಂಸದರಿದ್ದು, ಎಲ್ಲರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಹರಿಹಾಯ್ದರು.

ಇತ್ತೀಚಿನ 10 ದಿನಗಳಲ್ಲಿ ಕರ್ನಾಟಕದ ಅಸ್ಮಿತೆ ಹಾಗೂ ಹೆಮ್ಮೆಗೆ ಬಿಜೆಪಿ ಧಕ್ಕೆ ತಂದಿರುವ ಉದಾಹರಣೆ ನೀಡುತ್ತೇನೆ. ಮಹಾರಾಷ್ಟ್ರ ಸರಕಾರ ತನ್ನ ರಾಜ್ಯದ ವಿಮಾ ಯೋಜನೆಯನ್ನು ರಾಜ್ಯದ 865 ಹಳ್ಳಿಗಳಲ್ಲಿ ಜಾರಿಗೆ ಮುಂದಾಗಿದೆ. 40ಪರ್ಸೆಂಟ್ ಸರಕಾರ ಈ ವಿಚಾರದಲ್ಲಿ ಯಾವುದೇ ಚಕಾರ ಎತ್ತಲಿಲ್ಲ. ‘ನಂದಿನಿ’ ಮೇಲೆ ದಾಳಿ ನಡೆಯುವ ಷಡ್ಯಂತ್ರ ನಡೆದಾಗಲೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಇನ್ನು ಸಿಆರ್‍ಪಿಎಫ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವಿಲ್ಲ ಎಂದಾಗಲೂ ಬಿಜೆಪಿ ಬಾಯಿಗೆ ಬೀಗ ಹಾಕಿಕೊಂಡಿತ್ತು. ಈಗ 31 ಹಕ್ಕಿ ಪಿಕ್ಕಿ ಸಮುದಾಯದ ಜನ ಸುಡಾನ್‍ನಲ್ಲಿ ಸಿಲುಕಿರುವಾಗ ಬಿಜೆಪಿ ನಾಲಿಗೆ ಬಿದ್ದವರಂತೆ ವರ್ತಿಸುತ್ತಿದೆ ಎಂದು ಗೌರವ್ ವಲ್ಲಭ್ ಆರೋಪಿಸಿದರು.

share
Next Story
X